AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿ ಇನ್ಸುಲಿನ್ ಕೊಡದಿದ್ದರೆ ನಾನು ಸಾಯುತ್ತಿದ್ದೆ: ಅರವಿಂದ್ ಕೇಜ್ರಿವಾಲ್

ಜೈಲಿನಲ್ಲಿ ಇನ್ಸುಲಿನ್ ಕೊಡದಿದ್ದರೆ ನಾನು ಸಾಯುತ್ತಿದ್ದೆ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಮದ್ಯನೀತಿ ಹಗರಣದಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಅವರು, ಜೈಲಿನಲ್ಲಿ ತಮಗಾದ ಕಹಿ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಜೈಲಿನಲ್ಲಿ ಇನ್ಸುಲಿನ್ ನಿರಾಕರಿಸುವ ಮೂಲಕ ನನ್ನ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದಿದ್ದಾರೆ.

ಜೈಲಿನಲ್ಲಿ ಇನ್ಸುಲಿನ್ ಕೊಡದಿದ್ದರೆ ನಾನು ಸಾಯುತ್ತಿದ್ದೆ: ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್ Image Credit source: The tribune
ನಯನಾ ರಾಜೀವ್
|

Updated on: Oct 16, 2024 | 2:16 PM

Share

ಜೈಲಿನಲ್ಲಿ ಇನ್ಸುಲಿನ್ ಕೊಡದಿದ್ದರೆ ನಾನು ಸಾಯುತ್ತಿದ್ದೆ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಮದ್ಯನೀತಿ ಹಗರಣದಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಅವರು, ಜೈಲಿನಲ್ಲಿ ತಮಗಾದ ಕಹಿ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಜೈಲಿನಲ್ಲಿ ಇನ್ಸುಲಿನ್ ನಿರಾಕರಿಸುವ ಮೂಲಕ ನನ್ನ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದಿದ್ದಾರೆ.

ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗಿರುವ ಕಾರಣ ದಿನಕ್ಕೆ ನಾಲ್ಕು ಇನ್ಸುಲಿನ್​ಗಳನ್ನು ತೆಗೆದುಕೊಳ್ಳಬೇಕು, ಇನ್ಸುಲಿನ್ ಕೊಡದಿದ್ದರೆ ಕಿಡ್ನಿಗಳು ಹಾಳಾಗಬಹುದಿತ್ತು, ಕತೆಗೆ ಇನ್ಸುಲಿನ್ ಕೊರತೆಯಿಂದಾಗಿ ಸಾಯುವ ಸಾಧ್ಯತೆಯೂ ಹೆಚ್ಚಿತ್ತು. ಜನರ ಆಶೀರ್ವಾದದಿಂದ ಜೈಲಿನಿಂದ ಹೊರಗೆ ಬಂದಿದ್ದೇನೆ.

ಕಳೆದ 10 ವರ್ಷಗಳಿಂದ ನಮ್ಮ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಬಿಜೆಪಿ ನಮ್ಮನ್ನು ಜೈಲಿಗೆ ಕಳುಹಿಸಿದೆ. ಅಷ್ಟೇ ಅಲ್ಲದೆ ಲೆಫ್ಟಿನೆಂಟ್ ಗವರ್ನರ್ ಮೂಲಕ ಹಲವು ಯೋಜನೆಗಳನ್ನು ನಿಲ್ಲಿಸುವ ಪ್ರಯತ್ನವನ್ನೂ ಮಾಡಲಾಗಿದೆ.

ಸರ್ಕಾರವನ್ನು ಹೇಗೆ ಮುನ್ನಡೆಸಬೇಕು ಎಂಬುದು ನನಗೆ ತಿಳಿದಿದೆ, ಲ್ಲಿಯವರೆಗೆ ದೇಶದಲ್ಲಿ ಎಂದಿಗೂ ಮಾಡದಂತಹ ಕೆಲಸವನ್ನು ನಾನು ದೆಹಲಿಯಲ್ಲಿ ಮಾಡಿದ್ದೇನೆ. ಅವರಿಗೆ 22 ರಾಜ್ಯಗಳಲ್ಲಿ ಸರ್ಕಾರಗಳಿವೆ.

ಮತ್ತಷ್ಟು ಓದಿ: ದೆಹಲಿಯಲ್ಲಿ ಹೊಸ ಮನೆಗೆ ತೆರಳಲು ಸಿದ್ಧರಾದ ಅರವಿಂದ್ ಕೇಜ್ರಿವಾಲ್

ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ ಮತ್ತು ದೆಹಲಿಯಲ್ಲಿ ಜನರಿಗಾಗಿ ಕೆಲಸ ಮಾಡುತ್ತಿರುವುದರಿಂದ ನನ್ನನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಪ್ರತಿಪಾದಿಸಿದರು.

ಜೈಲಿನಲ್ಲಿದ್ದಾಗ ಬಿಜೆಪಿ ಅಭಿವೃದ್ಧಿ ಕಾರ್ಯಗಳನ್ನು ನಿಲ್ಲಿಸಿದೆ ಎಂದು ಆರೋಪಿಸಿದ ಕೇಜ್ರಿವಾಲ್, ಜಾಮೀನಿನ ಮೇಲೆ ಹೊರಬಂದ ನಂತರ ಎಎಪಿ ಸರ್ಕಾರವು ಗುಂಡಿಬಿದ್ದಿರುವ ರಸ್ತೆಗಳ ದುರಸ್ತಿ, ಚರಂಡಿಗಳನ್ನು ಸ್ವಚ್ಛಗೊಳಿಸುವುದು ಮತ್ತು ನೀರು ಸರಬರಾಜು ಮಾಡುವ ಕೆಲಸವನ್ನು ಪುನರಾರಂಭಿಸಿದೆ ಎಂದು ಹೇಳಿದರು.

2015 ರಿಂದ ಎಎಪಿ ಆಳ್ವಿಕೆ ನಡೆಸುತ್ತಿರುವ ದೆಹಲಿಯಲ್ಲಿ ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಯಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..