ಜೈಲಿನಲ್ಲಿ ಇನ್ಸುಲಿನ್ ಕೊಡದಿದ್ದರೆ ನಾನು ಸಾಯುತ್ತಿದ್ದೆ: ಅರವಿಂದ್ ಕೇಜ್ರಿವಾಲ್

ಜೈಲಿನಲ್ಲಿ ಇನ್ಸುಲಿನ್ ಕೊಡದಿದ್ದರೆ ನಾನು ಸಾಯುತ್ತಿದ್ದೆ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಮದ್ಯನೀತಿ ಹಗರಣದಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಅವರು, ಜೈಲಿನಲ್ಲಿ ತಮಗಾದ ಕಹಿ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಜೈಲಿನಲ್ಲಿ ಇನ್ಸುಲಿನ್ ನಿರಾಕರಿಸುವ ಮೂಲಕ ನನ್ನ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದಿದ್ದಾರೆ.

ಜೈಲಿನಲ್ಲಿ ಇನ್ಸುಲಿನ್ ಕೊಡದಿದ್ದರೆ ನಾನು ಸಾಯುತ್ತಿದ್ದೆ: ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Image Credit source: The tribune

Updated on: Oct 16, 2024 | 2:16 PM

ಜೈಲಿನಲ್ಲಿ ಇನ್ಸುಲಿನ್ ಕೊಡದಿದ್ದರೆ ನಾನು ಸಾಯುತ್ತಿದ್ದೆ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಮದ್ಯನೀತಿ ಹಗರಣದಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಅವರು, ಜೈಲಿನಲ್ಲಿ ತಮಗಾದ ಕಹಿ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಜೈಲಿನಲ್ಲಿ ಇನ್ಸುಲಿನ್ ನಿರಾಕರಿಸುವ ಮೂಲಕ ನನ್ನ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದಿದ್ದಾರೆ.

ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗಿರುವ ಕಾರಣ ದಿನಕ್ಕೆ ನಾಲ್ಕು ಇನ್ಸುಲಿನ್​ಗಳನ್ನು ತೆಗೆದುಕೊಳ್ಳಬೇಕು, ಇನ್ಸುಲಿನ್ ಕೊಡದಿದ್ದರೆ ಕಿಡ್ನಿಗಳು ಹಾಳಾಗಬಹುದಿತ್ತು, ಕತೆಗೆ ಇನ್ಸುಲಿನ್ ಕೊರತೆಯಿಂದಾಗಿ ಸಾಯುವ ಸಾಧ್ಯತೆಯೂ ಹೆಚ್ಚಿತ್ತು. ಜನರ ಆಶೀರ್ವಾದದಿಂದ ಜೈಲಿನಿಂದ ಹೊರಗೆ ಬಂದಿದ್ದೇನೆ.

ಕಳೆದ 10 ವರ್ಷಗಳಿಂದ ನಮ್ಮ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಬಿಜೆಪಿ ನಮ್ಮನ್ನು ಜೈಲಿಗೆ ಕಳುಹಿಸಿದೆ. ಅಷ್ಟೇ ಅಲ್ಲದೆ ಲೆಫ್ಟಿನೆಂಟ್ ಗವರ್ನರ್ ಮೂಲಕ ಹಲವು ಯೋಜನೆಗಳನ್ನು ನಿಲ್ಲಿಸುವ ಪ್ರಯತ್ನವನ್ನೂ ಮಾಡಲಾಗಿದೆ.

ಸರ್ಕಾರವನ್ನು ಹೇಗೆ ಮುನ್ನಡೆಸಬೇಕು ಎಂಬುದು ನನಗೆ ತಿಳಿದಿದೆ, ಲ್ಲಿಯವರೆಗೆ ದೇಶದಲ್ಲಿ ಎಂದಿಗೂ ಮಾಡದಂತಹ ಕೆಲಸವನ್ನು ನಾನು ದೆಹಲಿಯಲ್ಲಿ ಮಾಡಿದ್ದೇನೆ. ಅವರಿಗೆ 22 ರಾಜ್ಯಗಳಲ್ಲಿ ಸರ್ಕಾರಗಳಿವೆ.

ಮತ್ತಷ್ಟು ಓದಿ: ದೆಹಲಿಯಲ್ಲಿ ಹೊಸ ಮನೆಗೆ ತೆರಳಲು ಸಿದ್ಧರಾದ ಅರವಿಂದ್ ಕೇಜ್ರಿವಾಲ್

ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ ಮತ್ತು ದೆಹಲಿಯಲ್ಲಿ ಜನರಿಗಾಗಿ ಕೆಲಸ ಮಾಡುತ್ತಿರುವುದರಿಂದ ನನ್ನನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಪ್ರತಿಪಾದಿಸಿದರು.

ಜೈಲಿನಲ್ಲಿದ್ದಾಗ ಬಿಜೆಪಿ ಅಭಿವೃದ್ಧಿ ಕಾರ್ಯಗಳನ್ನು ನಿಲ್ಲಿಸಿದೆ ಎಂದು ಆರೋಪಿಸಿದ ಕೇಜ್ರಿವಾಲ್, ಜಾಮೀನಿನ ಮೇಲೆ ಹೊರಬಂದ ನಂತರ ಎಎಪಿ ಸರ್ಕಾರವು ಗುಂಡಿಬಿದ್ದಿರುವ ರಸ್ತೆಗಳ ದುರಸ್ತಿ, ಚರಂಡಿಗಳನ್ನು ಸ್ವಚ್ಛಗೊಳಿಸುವುದು ಮತ್ತು ನೀರು ಸರಬರಾಜು ಮಾಡುವ ಕೆಲಸವನ್ನು ಪುನರಾರಂಭಿಸಿದೆ ಎಂದು ಹೇಳಿದರು.

2015 ರಿಂದ ಎಎಪಿ ಆಳ್ವಿಕೆ ನಡೆಸುತ್ತಿರುವ ದೆಹಲಿಯಲ್ಲಿ ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಯಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us