AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣದಲ್ಲಿ ಖಾತೆ ತೆರೆಯಲು ಎಎಪಿ ವಿಫಲ; ದೊಡ್ಡ ಪಾಠದ ಬಗ್ಗೆ ಕೇಜ್ರಿವಾಲ್ ಹೇಳಿದ್ದೇನು?

"ಹರ್ಯಾಣದಲ್ಲಿ ಫಲಿತಾಂಶಗಳು ಏನೆಂದು ನೋಡೋಣ. ಚುನಾವಣೆಯಲ್ಲಿ ಒಬ್ಬರು ಎಂದಿಗೂ ಅತಿಯಾದ ಆತ್ಮವಿಶ್ವಾಸವನ್ನು ಹೊಂದಿರಬಾರದು ಎಂಬುದು ಇದರ ದೊಡ್ಡ ಪಾಠ" ಎಂದು ಎಎಪಿ ಪುರಸಭೆಯ ಕೌನ್ಸಿಲರ್‌ಗಳ ಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್ ಹೇಳಿದ್ದಾರೆ.

ಹರ್ಯಾಣದಲ್ಲಿ ಖಾತೆ ತೆರೆಯಲು ಎಎಪಿ ವಿಫಲ; ದೊಡ್ಡ ಪಾಠದ ಬಗ್ಗೆ ಕೇಜ್ರಿವಾಲ್ ಹೇಳಿದ್ದೇನು?
ಅರವಿಂದ ಕೇಜ್ರಿವಾಲ್
ರಶ್ಮಿ ಕಲ್ಲಕಟ್ಟ
|

Updated on: Oct 08, 2024 | 5:00 PM

Share

ದೆಹಲಿ ಅಕ್ಟೋಬರ್ 08: ಹರ್ಯಾಣದಲ್ಲಿ (Haryana Election Results) ಬಿಜೆಪಿ (BJP) ಭಾರಿ ಗೆಲುವಿನತ್ತ ಸಾಗುತ್ತಿರುವಾಗ ಫಲಿತಾಂಶದಿಂದ ನಾವು “ದೊಡ್ಡ ಪಾಠ” ಕಲಿತಿದ್ದೇವೆ. ಅದೇನೆಂದರೆ ಒಬ್ಬರು ಎಂದಿಗೂ ಅತಿಯಾದ ಆತ್ಮವಿಶ್ವಾಸವನ್ನು ಹೊಂದಿರಬಾರದು ಎಂದು ಅರವಿಂದ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ. ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಅಥವಾ ಎಎಪಿ, 89 ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿ, ರಾಜ್ಯದಲ್ಲಿ ತನ್ನ ಖಾತೆಯನ್ನು ತೆರೆಯಲು ವಿಫಲವಾಗಿದೆ. ಎಕ್ಸಿಟ್ ಪೋಲ್ ಭವಿಷ್ಯವನ್ನು ತಲೆಕೆಳಗಾಗಿಸಿ ಬಿಜೆಪಿ ಹರ್ಯಾಣದಲ್ಲಿ ಸತತ ಮೂರನೇ ಬಾರಿಗೆ ದಾಖಲೆ ಬರೆಯಲಿದೆ. 90 ಸ್ಥಾನಗಳ ಪೈಕಿ 50ರಲ್ಲಿ ಮುನ್ನಡೆ ಸಾಧಿಸಿದೆ.

“ಹರ್ಯಾಣದಲ್ಲಿ ಫಲಿತಾಂಶಗಳು ಏನೆಂದು ನೋಡೋಣ. ಚುನಾವಣೆಯಲ್ಲಿ ಒಬ್ಬರು ಎಂದಿಗೂ ಅತಿಯಾದ ಆತ್ಮವಿಶ್ವಾಸವನ್ನು ಹೊಂದಿರಬಾರದು ಎಂಬುದು ಇದರ ದೊಡ್ಡ ಪಾಠ” ಎಂದು ಎಎಪಿ ಪುರಸಭೆಯ ಕೌನ್ಸಿಲರ್‌ಗಳ ಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್ ಹೇಳಿದ್ದಾರೆ.

ರಾಷ್ಟ್ರೀಯ ಮಟ್ಟದಲ್ಲಿ ಎಎಪಿಯ ಇಂಡಿಯಾ ಮೈತ್ರಿಕೂಟದ ಪಾಲುದಾರ ಕಾಂಗ್ರೆಸ್ ಮೊದಲ ಗಂಟೆಯಲ್ಲಿ ಅಗ್ರಸ್ಥಾನದಲ್ಲಿದ್ದು ನಂತರ ಎರಡನೇ ಸ್ಥಾನಕ್ಕೆ ಕುಸಿದಿದೆ. ಎಕ್ಸಿಟ್ ಪೋಲ್‌ಗಳನ್ನು ತಪ್ಪಾಗಿ ಸಾಬೀತುಪಡಿಸುವ ಮೂಲಕ, ಬಿಜೆಪಿ ತನ್ನ ಮುನ್ನಡೆ ಕಾಯ್ದುಕೊಂಡಿತು ಮತ್ತು ಅಂತರವನ್ನು ಹೆಚ್ಚಿಸಿತು, ವಿರೋಧಿ ಆಡಳಿತದ ಹೊರತಾಗಿಯೂ ಬಿಜೆಪಿ ಹ್ಯಾಟ್ರಿಕ್ ಸಾಧಿಸುವ ಹಾದಿಯಲ್ಲಿದೆ.

ಎಎಪಿ ಅಭ್ಯರ್ಥಿಗಳು ತಮ್ಮ ಬಿಜೆಪಿ ಮತ್ತು ಕಾಂಗ್ರೆಸ್ ವಿರೋಧಿಗಳಿಗಿಂತ ಬಹುತೇಕ ಎಲ್ಲಾ ಸ್ಥಾನಗಳಲ್ಲಿ ಹಿಂದುಳಿದಿದ್ದಾರೆ. “ಯಾವುದೇ ಚುನಾವಣೆಯನ್ನು ಲಘುವಾಗಿ ಪರಿಗಣಿಸಬಾರದು. ಪ್ರತಿ ಚುನಾವಣೆ ಮತ್ತು ಪ್ರತಿ ಸ್ಥಾನವು ಕಠಿಣವಾಗಿದೆ,” ಎಂದು ಕೇಜ್ರಿವಾಲ್ ಸಲಹೆ ನೀಡಿದ್ದಾರೆ. ಈ ಹಿಂದೆ ದೆಹಲಿಯ ಮಾಜಿ ಮುಖ್ಯಮಂತ್ರಿ ಹರ್ಯಾಣದಲ್ಲಿ ಚುನಾವಣಾ ಪ್ರಚಾರದ ವೇಳೆ ಎಎಪಿ ಬೆಂಬಲವಿಲ್ಲದೆ ರಾಜ್ಯದಲ್ಲಿ ಯಾವುದೇ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದರು.

ಆದಾಗ್ಯೂ, ಒಂದು ದಶಕದ ನಂತರ ಚುನಾವಣೆ ನಡೆದ ಜಮ್ಮು ಮತ್ತು ಕಾಶ್ಮೀರದಲ್ಲಿ ಎಎಪಿ ಅಚ್ಚರಿಯ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. 2020 ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಮೊದಲ ಬಾರಿಗೆ ಚುನಾವಣಾ ಗೆಲುವನ್ನು ನೀಡಿದ ಪಕ್ಷದ ಮೆಹರಾಜ್ ಮಲಿಕ್ – ಇಂದು ದೋಡಾ ಸ್ಥಾನವನ್ನು ಬಿಜೆಪಿಯಿಂದ ಕಸಿದುಕೊಂಡರು.

ಇದನ್ನೂ ಓದಿ: ಹರ್ಯಾಣದಲ್ಲಿ ಕೈ ಹಿಡಿಯಲಿಲ್ಲ ಗ್ಯಾರಂಟಿ; ಕಾಂಗ್ರೆಸ್ ಹಿನ್ನಡೆಗೆ ಕಾರಣಗಳಿವು

2014 ರ ಚುನಾವಣೆಯಲ್ಲಿ ಬಿಜೆಪಿಯ ಶಕ್ತಿ ರಾಜ್ ಅವರು ದೋಡಾವನ್ನು ಗೆದ್ದರು, ಆದರೆ 1962 ರಲ್ಲಿ ಮೊದಲ ಚುನಾವಣೆ ನಂತರ ಈ ಸ್ಥಾನವು ಸಾಂಪ್ರದಾಯಿಕವಾಗಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ನಡುವೆ ಪಲ್ಟಿಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ