Sign In

By signing in or creating an account, you agree with Associated Broadcasting Company's Terms & Conditions and Privacy Policy.

Arvind Kejriwal: ದೆಹಲಿ ಅಬಕಾರಿ ನೀತಿ ಪ್ರಕರಣ; ಸಿಎಂ ಅರವಿಂದ ಕೇಜ್ರಿವಾಲ್​ಗೆ ಸಿಬಿಐ ಸಮನ್ಸ್

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ಗೆ ಸಿಬಿಐ ಶುಕ್ರವಾರ ಸಮನ್ಸ್ ನೀಡಿದೆ ಎಂದು ಮೂಲಗಳು ತಿಳಿಸಿವೆ.

Arvind Kejriwal: ದೆಹಲಿ ಅಬಕಾರಿ ನೀತಿ ಪ್ರಕರಣ; ಸಿಎಂ ಅರವಿಂದ ಕೇಜ್ರಿವಾಲ್​ಗೆ ಸಿಬಿಐ ಸಮನ್ಸ್
ಅರವಿಂದ ಕೇಜ್ರಿವಾಲ್
Follow us
Ganapathi Sharma
|

Updated on:Apr 14, 2023 | 6:01 PM

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ಗೆ (Arvind Kejriwal) ಸಿಬಿಐ (CBI) ಶುಕ್ರವಾರ ಸಮನ್ಸ್ ನೀಡಿದೆ ಎಂದು ಮೂಲಗಳು ತಿಳಿಸಿವೆ. ಇದೇ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿತ್ತು. ಭಾನುವಾರದ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್​ಗೆ ಸಿಬಿಐ ಸೂಚಿಸಿದೆ ಎಂದು ಮೂಲಗಳು ಹೇಳಿವೆ. ಸದ್ಯ ಮನೀಶ್ ಸಿಸೋಡಿಯಾ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಏಪ್ರಿಲ್ 17ರ ವರೆಗೆ ಅವರು ನ್ಯಾಯಾಂಗ ಬಂಧನದಲ್ಲಿ ಇರಲಿದ್ದು, ನಂತರ ನ್ಯಾಯಾಲಯ ಏನು ಆಚದೇಶ ನೀಡಲಿದೆ ಎಂಬುದನ್ನು ಕಾದುನೋಡಬೇಕಿದೆ.

ಕೇಜ್ರಿವಾಲ್ ಸರ್ಕಾರ ಭಾರೀ ವಂಚನೆ ಎಸಗಿದೆ ಎಂದು ಸಿಬಿಐ ಆರೋಪಿಸಿದೆ. ಸಂಸ್ಥೆಯೊಂದರ ಪರವಾಗಿ ಅಬಕಾರಿ ನೀತಿ ರೂಪಿಸಲು ಲಂಚ ಪಡೆಯಲಾಗಿತ್ತು ಎಂದೂ ಸಿಬಿಐ ಆಪಾದಿಸಿದೆ. ಆದರೆ, ಎಎಪಿಯು ಈ ಆರೋಪಗಳನ್ನು ತಳ್ಳಿಹಾಕಿದ್ದು, ರಾಜಕೀಯ ಸೇಡಿನಿಂದ ಕೂಡಿದ ಕ್ರಮ ಎಂದು ದೂರಿದೆ. ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಕೇಜ್ರಿವಾಲ್ ಅವರೇ ಹಗರಣದ ಮಾಸ್ಟರ್ ಮೈಂಡ್ ಎಂದು ಬಿಜೆಪಿ ಹಲವು ಬಾರಿ ಪ್ರತಿಪಾದಿಸಿದೆ. ಆದರೆ, ಈ ಆರೋಪಗಳನ್ನು ಕೇಜ್ರಿವಾಲ್ ಅಲ್ಲಗಳೆದಿದ್ದಾರೆ. ಇದೀಗ ಈ ಪ್ರಕರಣದಲ್ಲಿ ಸಿಬಿಐಯು ಕೇಜ್ರಿವಾಲ್​ಗೆ ಇದೇ ಮೊದಲ ಬಾರಿಗೆ ಸಮನ್ಸ್ ನೀಡಿದೆ.

ಇದನ್ನೂ ಓದಿ: ದಿಲ್ಲಿಯಲ್ಲಿ ಉಚಿತ ವಿದ್ಯುತ್ ನಿಂತುಹೋಯ್ತಂತೆ! ಕಾರಣವೇನು?

ಸಮನ್ಸ್​ ದೊರೆತ ಬೆನ್ನಲ್ಲೇ ಕೇಜ್ರಿವಾಲ್ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಮ್ ಆದ್ಮಿ ಪಕ್ಷವನ್ನು ಚುನಾವಣಾ ಆಯೋಗವು ಅಧಿಕೃತವಾಗಿ ರಾಷ್ಟ್ರೀಯ ಪಕ್ಷವೆಂದು ಗುರುತಿಸಿದೆ. ಹೀಗಾಗಿ ಇನ್ನು ಮುಂದೆ ಎಲ್ಲಾ ಎಎಪಿ ನಾಯಕರು ಜೈಲಿಗೆ ಹೋಗಲು ಸಿದ್ಧರಾಗಿರಬೇಕು ಎಂದು ಕೇಜ್ರಿವಾಲ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಮಧ್ಯೆ, ಸಾರ್ವಜನಿಕ ಆಸ್ತಿ ವಿರೂಪಗೊಳಿಸುವಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಪೊಲೀಸರೂ ಕೇಜ್ರಿವಾಲ್​ಗೆ​ ಸಮನ್ಸ್ ನೀಡಿದ್ದು, ಏಪ್ರಿಲ್ 27 ರಂದು ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:33 pm, Fri, 14 April 23

Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ