AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಭಯೋತ್ಪಾದಕ ಭಗತ್ ಸಿಂಗ್, ಅಂಬೇಡ್ಕರ್ ಕನಸನ್ನು ನನಸಾಗಿಸುತ್ತಿದ್ದಾನೆ; ವಿರೋಧಿಗಳಿಗೆ ಕೇಜ್ರಿವಾಲ್ ತಿರುಗೇಟು

Arvind Kejriwal: ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಭಯೋತ್ಪಾದಕ ಎಂದು ಕರೆಯುವ ವ್ಯಕ್ತಿ ಇಂದು ಬಡವರು ಮತ್ತು ಶ್ರೀಮಂತರ ಮಕ್ಕಳು ಒಟ್ಟಿಗೆ ಓದುವ ಶಾಲೆಗಳನ್ನು ಲೋಕಾರ್ಪಣೆ ಮಾಡುತ್ತಿದ್ದಾನೆ. ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಕನಸುಗಳನ್ನು ನನಸಾಗಿಸುತ್ತಿದ್ದಾನೆ ಎಂದು ತಮ್ಮ ವಿರೋಧಿಗಳಿಗೆ ಕೇಜ್ರಿವಾಲ್ ತಿರುಗೇಟು ನೀಡಿದ್ದಾರೆ.

ಈ ಭಯೋತ್ಪಾದಕ ಭಗತ್ ಸಿಂಗ್, ಅಂಬೇಡ್ಕರ್ ಕನಸನ್ನು ನನಸಾಗಿಸುತ್ತಿದ್ದಾನೆ; ವಿರೋಧಿಗಳಿಗೆ ಕೇಜ್ರಿವಾಲ್ ತಿರುಗೇಟು
ಅರವಿಂದ ಕೇಜ್ರಿವಾಲ್
TV9 Web
| Updated By: ಸುಷ್ಮಾ ಚಕ್ರೆ|

Updated on:Feb 19, 2022 | 4:24 PM

Share

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಭಯೋತ್ಪಾದಕ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಅರವಿಂದ್ ಕೇಜ್ರಿವಾಲ್ ನಾನೊಬ್ಬ ಸ್ವೀಟೆಸ್ಟ್​ ಭಯೋತ್ಪಾದಕ (Sweetest Terrorist) ಎಂದು ಹಾಸ್ಯ ಮಾಡಿದ್ದರು. ಅದರ ಬೆನ್ನಲ್ಲೇ ಇಂದು ಮತ್ತೆ ಪ್ರತಿಕ್ರಿಯೆ ನೀಡಿರುವ ಅರವಿಂದ್ ಕೇಜ್ರಿವಾಲ್ ರಾಜಕೀಯ ಪ್ರತಿಸ್ಪರ್ಧಿಗಳಿಂದ ಭಯೋತ್ಪಾದಕ ಎಂದು ಹಣೆಪಟ್ಟಿ ಪಡೆದ ನಾನು 12,000 ಸ್ಮಾರ್ಟ್ ತರಗತಿಗಳನ್ನು ದೇಶಕ್ಕೆ ಅರ್ಪಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 12,430 ಅತ್ಯಾಧುನಿಕ ತರಗತಿ ಕೊಠಡಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಚುನಾವಣೆಗೆ ಒಳಪಟ್ಟಿರುವ ಪಂಜಾಬ್‌ನಲ್ಲಿ ಪ್ರತ್ಯೇಕತಾವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಆರೋಪಿಸಿ ತಮ್ಮನ್ನು ಗುರಿಯಾಗಿಸಿದ ವಿರೋಧಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಾನು ಈ 12,430 ತರಗತಿ ಕೊಠಡಿಗಳನ್ನು ದೇಶಕ್ಕೆ ಅರ್ಪಿಸಿದ್ದೇನೆ. ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಭಯೋತ್ಪಾದಕ ಎಂದು ಕರೆಯುವ ವ್ಯಕ್ತಿ ಇಂದು ಬಡವರು ಮತ್ತು ಶ್ರೀಮಂತರ ಮಕ್ಕಳು ಒಟ್ಟಿಗೆ ಓದುವ ಶಾಲೆಗಳನ್ನು ಲೋಕಾರ್ಪಣೆ ಮಾಡುತ್ತಿದ್ದಾನೆ. ಅವರು ಭಯೋತ್ಪಾದನೆ ಆರೋಪ ಮಾಡುತ್ತಿರುವ ವ್ಯಕ್ತಿ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಕನಸುಗಳನ್ನು ನನಸಾಗಿಸುತ್ತಿದ್ದಾನೆ ಎಂದು ತಮ್ಮ ವಿರೋಧಿಗಳಿಗೆ ಕೇಜ್ರಿವಾಲ್ ತಿರುಗೇಟು ನೀಡಿದ್ದಾರೆ.

ಈಗ ಅಧಿಕಾರಿಗಳು, ನ್ಯಾಯಾಧೀಶರು, ರಿಕ್ಷಾ ಚಾಲಕರು ಮತ್ತು ಕೆಲಸಗಾರರ ಮಕ್ಕಳು ಒಂದೇ ಮೇಜಿನ ಮೇಲೆ ಕುಳಿತು ಒಟ್ಟಿಗೆ ಓದುತ್ತಾರೆ. ದೇಶದ ಜನರು “ಈ ಭ್ರಷ್ಟರಿಗೆ” ತಲೆಬಾಗುವುದಿಲ್ಲ ಎಂದು ಹೇಳಿದ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್, ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಕನಸುಗಳನ್ನು ನನಸಾಗಿಸುವ ತಮ್ಮ ಪ್ರಯತ್ನವನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ನಾನು ಜಗತ್ತಿನ ಸ್ವೀಟೆಸ್ಟ್ ಟೆರರಿಸ್ಟ್ ; ಕುಮಾರ್ ವಿಶ್ವಾಸ್ ಆರೋಪ ನಿರಾಕರಿಸಿದ ಕೇಜ್ರಿವಾಲ್

ಪ್ರಧಾನಿ ನರೇಂದ್ರ ಮೋದಿ, ಅರವಿಂದ್ ಕೇಜ್ರಿವಾಲ್ ಹಿಂದಿವೆ ನಿಗೂಢ ಶಕ್ತಿಗಳು: ಪಂಜಾಬ್​ನಲ್ಲಿ ರಾಹುಲ್ ಗಾಂಧಿ

Published On - 4:22 pm, Sat, 19 February 22

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್