AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Liquor Policy Scam: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಆಗಸ್ಟ್​ 8ರವರೆಗೆ ವಿಸ್ತರಣೆ

ದೆಹಲಿ ಕೋರ್ಟ್​ ಗುರುವಾರ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 8 ರವರೆಗೆ ವಿಸ್ತರಿಸಿದೆ. ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳದ (ಸಿಬಿಐ) ದೂರಿನಿಂದ ಅವರು ಆಘಾತಕ್ಕೊಳಗಾಗಿದ್ದಾರೆ. ಕೇಜ್ರಿವಾಲ್ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

Delhi Liquor Policy Scam: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಆಗಸ್ಟ್​ 8ರವರೆಗೆ ವಿಸ್ತರಣೆ
ಅರವಿಂದ್ ಕೇಜ್ರಿವಾಲ್
ನಯನಾ ರಾಜೀವ್
|

Updated on: Jul 25, 2024 | 12:13 PM

Share

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ಆಗಸ್ಟ್​ 8ರವರೆಗೆ ವಿಸ್ತರಿಸಲಾಗಿದೆ. ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಮದ್ಯದ ವ್ಯಾಪಾರಿಗಳಿಗೆ ಪರವಾನಗಿ ನೀಡಲು ದೆಹಲಿ ಸರ್ಕಾರದ 2021-22 ರ ಅಬಕಾರಿ ನೀತಿಯು ಕಾರ್ಟೆಲೈಸೇಶನ್‌ಗೆ ಅವಕಾಶ ಮಾಡಿಕೊಟ್ಟಿದೆ ಮತ್ತು ಅದಕ್ಕಾಗಿ ಲಂಚವನ್ನು ಪಾವತಿಸಿದ ಕೆಲವು ಡೀಲರ್‌ಗಳಿಗೆ ಸಹಾಯ ಮಾಡಿದೆ ಎಂದು ಆರೋಪಿಸಲಾಗಿದೆ. ಆದರೆ ಇದನ್ನು ಆಮ್ ಆದ್ಮಿ ಪಕ್ಷ ನಿರಾಕರಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಮಾರ್ಚ್ 21 ರಿಂದ ಜೈಲಿನಲ್ಲಿದ್ದಾರೆ ಮತ್ತು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ. ಮೇ 10 ರಂದು, ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಅವರಿಗೆ 21 ದಿನಗಳ ಮಧ್ಯಂತರ ಜಾಮೀನು ನೀಡಿತು. ಚುನಾವಣೆ ಮುಗಿದ ತಕ್ಷಣ ಜೂನ್ 2ರಂದು ಜೈಲಿಗೆ ಮರಳಿದ್ದರು.

ಮತ್ತಷ್ಟು ಓದಿ: ‘ಸಿಎಂಗೆ ಮನೆಯಲ್ಲಿ ಮಾಡಿದ ಅಡುಗೆಯನ್ನೇ ಬಡಿಸಲಾಗಿತ್ತು; ಕೇಜ್ರಿವಾಲ್ ಆರೋಗ್ಯದ ಕುರಿತು ದೆಹಲಿ ಎಲ್‌ಜಿ ಪತ್ರ

ಕಳೆದ ವಿಚಾರಣೆಯಲ್ಲಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜುಲೈ 25 ರವರೆಗೆ ವಿಸ್ತರಿಸಿದ್ದರು. ತಿಹಾರ್ ಜೈಲಿನಿಂದ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಅವರ ಹಾಜರಾರಾಗಿದ್ದರು. ಕೇಜ್ರಿವಾಲ್ ಮತ್ತು ಇತರ ಆರೋಪಿಗಳ ಪರ ವಕೀಲರಿಗೆ ಪೂರಕ ಆರೋಪ ಪಟ್ಟಿಯ ಪ್ರತಿಯನ್ನು ನೀಡುವಂತೆ ಜಾರಿ ನಿರ್ದೇಶನಾಲಯಕ್ಕೆ (ಇಡಿ) ನ್ಯಾಯಾಲಯ ಸೂಚಿಸಿದೆ.

ಜುಲೈ 9 ರಂದು, ಅರವಿಂದ್ ಕೇಜ್ರಿವಾಲ್ ಮತ್ತು ಎಎಪಿ ವಿರುದ್ಧ ಸಲ್ಲಿಸಲಾದ ಪೂರಕ ಚಾರ್ಜ್ ಶೀಟ್ ಅನ್ನು ನ್ಯಾಯಾಲಯವು ಪರಿಗಣಿಸಿತ್ತು. ವಿನೋದ್ ಚೌಹಾಣ್ ಮತ್ತು ಆಶಿಶ್ ಮಾಥುರ್ ವಿರುದ್ಧ ಸಲ್ಲಿಸಲಾದ ಪೂರಕ ಚಾರ್ಜ್ ಶೀಟ್ ಅನ್ನು ಸಹ ನ್ಯಾಯಾಲಯವು ಪರಿಗಣನೆಗೆ ತೆಗೆದುಕೊಂಡಿದೆ.

ನ್ಯಾಯಾಲಯವು ಚಾರ್ಜ್ ಶೀಟ್ ಅನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್, ವಿನೋದ್ ಚೌಹಾಣ್ ಮತ್ತು ಎಎಪಿಗೆ ಪ್ರೊಡಕ್ಷನ್ ವಾರಂಟ್ ಹೊರಡಿಸಿತ್ತು. ತನಿಖಾ ಅಧಿಕಾರಿ (ಐಒ) ಮೂಲಕ ಆಶಿಶ್ ಮಾಥುರ್ ಅವರಿಗೆ ಸಮನ್ಸ್ ನೀಡಲಾಗಿದೆ.

ಮಾರ್ಚ್ 21 ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿತ್ತು. ಜುಲೈ 1 ರಂದು ಇಡಿ ವಿನೋದ್ ಚೌಹಾಣ್ ಮತ್ತು ಆಶಿಶ್ ಮಾಥುರ್ ವಿರುದ್ಧ ಮತ್ತೊಂದು ಪೂರಕ ಪ್ರಾಸಿಕ್ಯೂಷನ್ ದೂರನ್ನು ದಾಖಲಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK