AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ದೇಶದ ಅತಿ ಕಿರಿಯ ಮೇಯರ್​?; ಹೊಸ ದಾಖಲೆ ಬರೆಯೋಕೆ ಸಜ್ಜಾದ ಯುವತಿ

ಆರ್ಯ ರಾಜೇಂದ್ರನ್​ ಎಂಬ 21 ವರ್ಷದ ಕಾಲೇಜು ಯುವತಿಗೆ ಮೇಯರ್​ ಸ್ಥಾನ ನೀಡಲು ತಿರುವನಂತಪುರಂ ಜಿಲ್ಲೆಯ ಸಿಪಿಎಂ ಕಾರ್ಯದರ್ಶಿ ನಿರ್ಧರಿಸಿರುವುದಾಗಿ ವರದಿಯಾಗಿದೆ. ಈ ನಿರ್ಧಾರವನ್ನು ಪಕ್ಷದ ರಾಜ್ಯ ಸಮಿತಿ ಅಂಗೀಕರಿಸುವ ಸಾಧ್ಯತೆಯೂ ದಟ್ಟವಾಗಿದೆ.

ಕೇರಳದಲ್ಲಿ ದೇಶದ ಅತಿ ಕಿರಿಯ ಮೇಯರ್​?; ಹೊಸ ದಾಖಲೆ ಬರೆಯೋಕೆ ಸಜ್ಜಾದ ಯುವತಿ
ಆರ್ಯಾ ರಾಜೇಂದ್ರನ್
Skanda
| Edited By: |

Updated on:Dec 25, 2020 | 7:42 PM

Share

ಕೊಚ್ಚಿ: ಕೇರಳದ ಸ್ಥಳೀಯ ಚುನಾವಣೆ ಫಲಿತಾಂಶ ಪ್ರಕಟವಾಗುವುದರೊಂದಿಗೆ ರಾಜ್ಯ ರಾಜಧಾನಿ ತಿರುವನಂತಪುರಂನಲ್ಲಿ 21 ವರ್ಷದ ಯುವತಿ ಮೇಯರ್​ ಆಗುವುದು ಬಹುತೇಕ ಖಚಿತವಾಗಿದೆ. ಒಂದುವೇಳೆ ಇದು ನೆರವೇರಿದರೆ ದೇಶದ ಅತ್ಯಂತ ಕಿರಿಯ ವಯಸ್ಸಿನ ಮೇಯರ್​ ಎಂಬ ಹೆಗ್ಗಳಿಕೆಗೆ ಅವರು ಭಾಜನರಾಗಲಿದ್ದಾರೆ.

ಆರ್ಯಾ ರಾಜೇಂದ್ರನ್​ಗೆ ಮೇಯರ್​ ಸ್ಥಾನ ನೀಡಲು ತಿರುವನಂತಪುರಂ ಜಿಲ್ಲೆಯ ಸಿಪಿಎಂ ಕಾರ್ಯದರ್ಶಿ ನಿರ್ಧರಿಸಿರುವುದಾಗಿ ವರದಿಯಾಗಿದೆ. ಈ ನಿರ್ಧಾರವನ್ನು ಪಕ್ಷದ ರಾಜ್ಯ ಸಮಿತಿ ಅಂಗೀಕರಿಸುವ ಸಾಧ್ಯತೆಯೂ ದಟ್ಟವಾಗಿದೆ. ಅಂತಿಮ ಪ್ರಕಟಣೆ ಶನಿವಾರ ಹೊರಬೀಳಲಿದ್ದು ಆರ್ಯಾ ರಾಜೇಂದ್ರನ್ ಮೇಯರ್ ಆಗುವುದು ನಿಶ್ಚಿತವಾದರೆ ಇದು ದೇಶದಲ್ಲಿ ಹೊಸ ದಾಖಲೆಯಾಗಲಿದೆ.

ಆರ್ಯಾ ರಾಜೇಂದ್ರನ್ ತಿರುವನಂತಪುರಂನ ಆಲ್ ಸೈಂಟ್ಸ್ ಕಾಲೇಜಿನ ಕಾನೂನು ವಿದ್ಯಾರ್ಥಿನಿಯಾಗಿದ್ದಾರೆ. ಈ ಬಾರಿಯ ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿದ ಅತ್ಯಂತ ಕಿರಿಯ ವಯಸ್ಸಿನ ಅಭ್ಯರ್ಥಿ ಎಂಬ ಹಿರಿಮೆಯೂ ಇವರಿಗಿದೆ. ಇವರು ಮುಡವನ್​ಮುಗಳ್​ ವಾರ್ಡ್​ನಿಂದ ಗೆಲುವು ಸಾಧಿಸಿಸಿದ್ದರು.

ಕ್ರೈಸ್ತ ಸನ್ಯಾಸಿನಿ ಅಭಯಾ ಹತ್ಯೆ ಪ್ರಕರಣ: ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಸಿಬಿಐ ವಿಶೇಷ ನ್ಯಾಯಾಲಯ

Published On - 7:29 pm, Fri, 25 December 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು