AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ ಚುನಾವಣೆಗೆ ‘ಸುಶಾಂತ್ ಸಾವು’ ಪ್ರಚಾರದ ಅಸ್ತ್ರ

ದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ನಿಗೂಡ ಸಾವಿನ ಪ್ರಕರಣ ಸಂಪೂರ್ಣ ರಾಜಕೀಯಗೊಂಡಿದೆ. ಅದರಲ್ಲೂ ಬಿಜೆಪಿ ಈ ಪ್ರಕರಣವನ್ನು ಇಷ್ಟು ಗಂಭೀರವಾಗಿ ಯಾಕೆ ಪರಿಗಣಿಸಿದೆ ಎಂಬ ಅನುಮಾನಗಳು ಪದೇ ಪದೆ ಕಾಡುತ್ತಲೇ ಇತ್ತು. ಈಗ ಆ ಅನುಮಾನ ಬಟಾಬಯಲಾಗಿದೆ. ಬಿಹಾರದಲ್ಲಿ ಇದೀಗ ಅದೇ ದೊಡ್ಡ ಸುದ್ದಿಯಾಗಿದೆ. ಬಿಹಾರ ಬಿಜೆಪಿ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲ ಬಿಹಾರ ವಿಧಾನಸಭಾ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಮುಂದಿನ ತಿಂಗಳು ನಡೆಯಲಿರುವ ಎಲೆಕ್ಷನ್‌ಗೆ ಈಗಾಗಲೇ ಬಿಜೆಪಿ ಅಖಾಡ ಸಿದ್ಧಮಾಡಿಟ್ಟುಕೊಂಡಿದೆ. ಆದ್ರೆ ಚುನಾವಣಾ ಪ್ರಚಾರಕ್ಕೆ ನಟ […]

ಬಿಹಾರ ಚುನಾವಣೆಗೆ ‘ಸುಶಾಂತ್ ಸಾವು’ ಪ್ರಚಾರದ ಅಸ್ತ್ರ
ಆಯೇಷಾ ಬಾನು
|

Updated on: Sep 08, 2020 | 7:46 AM

Share

ದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ನಿಗೂಡ ಸಾವಿನ ಪ್ರಕರಣ ಸಂಪೂರ್ಣ ರಾಜಕೀಯಗೊಂಡಿದೆ. ಅದರಲ್ಲೂ ಬಿಜೆಪಿ ಈ ಪ್ರಕರಣವನ್ನು ಇಷ್ಟು ಗಂಭೀರವಾಗಿ ಯಾಕೆ ಪರಿಗಣಿಸಿದೆ ಎಂಬ ಅನುಮಾನಗಳು ಪದೇ ಪದೆ ಕಾಡುತ್ತಲೇ ಇತ್ತು. ಈಗ ಆ ಅನುಮಾನ ಬಟಾಬಯಲಾಗಿದೆ. ಬಿಹಾರದಲ್ಲಿ ಇದೀಗ ಅದೇ ದೊಡ್ಡ ಸುದ್ದಿಯಾಗಿದೆ.

ಬಿಹಾರ ಬಿಜೆಪಿ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲ ಬಿಹಾರ ವಿಧಾನಸಭಾ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಮುಂದಿನ ತಿಂಗಳು ನಡೆಯಲಿರುವ ಎಲೆಕ್ಷನ್‌ಗೆ ಈಗಾಗಲೇ ಬಿಜೆಪಿ ಅಖಾಡ ಸಿದ್ಧಮಾಡಿಟ್ಟುಕೊಂಡಿದೆ. ಆದ್ರೆ ಚುನಾವಣಾ ಪ್ರಚಾರಕ್ಕೆ ನಟ ಸುಶಾಂತ್ ಸಿಂಗ್ ಸಾವನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ. ಈಗಾಗಲೇ ಬಿಜೆಪಿ ತನ್ನ ಕರಪತ್ರಗಳಲ್ಲಿ ಸುಶಾಂತ್ ಫೋಟೊ ಜೊತೆಗೆ ಜಸ್ಟೀಸ್ ಫಾರ್ ಸುಶಾಂತ್ ಎಂದು ಬರೆದಿರುವ ಪೋಸ್ಟರ್, ಸ್ಟಿಕ್ಕರ್‌ಗಳನ್ನ ಬಿಡುಗಡೆ ಮಾಡಿದೆ. ಬಿಹಾರದ ಬಿಜೆಪಿ ಸಾಂಸ್ಕೃತಿಕ ಘಟಕ ಕಲಾ ಸಂಸ್ಕೃತಿ ಮಂಚ್ ಹೊರತಂದಿರುವ ಸ್ಟಿಕ್ಕರ್, ಮಾಸ್ಕ್‌ಗಳಲ್ಲಿ ಸುಶಾಂತ್ ಚಿತ್ರವಿದ್ದು, ನಾವು ಮರೆತಿಲ್ಲ, ಮರೆಯಲೂ ಬಿಡುವುದಿಲ್ಲ ಎಂಬ ಸಂದೇಶಗಳು ಇವೆ.

ಸುಶಾಂತ್ ಸಾವಿನ ಪ್ರಕರಣದ ಸಿಬಿಐ ತನಿಖೆ ಹಿಂದೆ ನಿತೀಶ್ ಕುಮಾರ್ ನೇತೃತ್ವದ ಸರ್ಕಾರದ ಪ್ರಮುಖ ಪಾತ್ರವಿದೆ. ಈ ಬಗ್ಗೆ ಸಂದೇಶವನ್ನು ಜನರಿಗೆ ನೀಡುವ ಉದ್ದೇಶದಿಂದ ಸುಮಾರು 25 ಸಾವಿರ ಸ್ಟಿಕ್ಕರ್‌ಗಳನ್ನು ಮತ್ತು 30 ಸಾವಿರ ಮಾಸ್ಕ್ ಗಳನ್ನು ಸುಶಾಂತ್ ಭಾವಚಿತ್ರ ಸಮೇತ ಮುದ್ರಿಸಿ ಹಲವು ಕಡೆ ವಿತರಿಸಿದೆ‌ ಎನ್ನಲಾಗಿದೆ. ಇದಿಷ್ಟೇ ಅಲ್ಲ ಬಿಜೆಪಿ ಸುಶಾಂತ್ ಸಿಂಗ್ ಸಾವನ್ನು ಮತಗಳಾಗಿ ಪರಿವರ್ತಿಸಲು ಇನ್ನೂ ಹಲವು ತಂತ್ರಗಳನ್ನ ಮಾಡಿದೆ..

ಮತಕ್ಕಾಗಿ ಸುಶಾಂತ್ ಸಿಂಗ್ ಮಂತ್ರ: ಈಗಾಗಲೇ ಬಿಜೆಪಿ ಸುಶಾಂತ್ ಸಿಂಗ್ ಜೀವನ ಮತ್ತು ಸಾಧನೆ ಕುರಿತ ವಿಡಿಯೋ ರೆಡಿಮಾಡಿಟ್ಟುಕೊಂಡಿದೆ. ಎರಡು ಕಂತುಗಳಲ್ಲಿ ವಿಡಿಯೋ ಸಿದ್ಧ ಮಾಡಿಟ್ಟುಕೊಂಡಿದೆ. ಅದನ್ನ ಶೀಘ್ರದಲ್ಲೇ ಸೋಷಿಯಲ್ ಮೀಡಿಯಾಗಳಲ್ಲಿ ಬಿಜೆಪಿ ರಿಲೀಸ್ ಮಾಡಲಿದೆ. ಇನ್ನು ಪಾಟ್ನಾದ ರಾಜೀವ್ ನಗರ ಚೌಕಕ್ಕೆ ಸುಶಾಂತ್ ಹೆಸರಿಡಲು ಪ್ಲ್ಯಾನ್ ಮಾಡಿದ್ದು, ಈ ಸಂಬಂಧ ಬಿಹಾರ ಸಿಎಂ ನಿತೀಶ್ ಕುಮಾರ್‌ಗೆ ಪತ್ರ ಬರೆದಿದೆ.

ಬಿಜೆಪಿಯ ಈ ಪ್ರಚಾರ ತಂತ್ರವನ್ನು, ನಟನ ಸಾವನ್ನು ಮತಗಳಿಗಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿಯ ನಿಲುವನ್ನು ಕಾಂಗ್ರೆಸ್ ಖಂಡಿಸಿ‌ದೆ. ಸುಶಾಂತ್ ಫೋಟೋ ಬಳಸಿ ರೆಡಿ ಮಾಡಿರುವ ಪೋಸ್ಟರ್ ಮತ್ತು ಸ್ಟಿಕ್ಕರ್ ವಿಚಾರವಾಗಿ ಬಿಜೆಪಿ ಮತ್ತು ಬಿಜೆಪಿಯೇತರ ಪಕ್ಷಗಳ ನಡುವೆ ವಾದ-ವಿವಾದ ಶುರುವಾಗಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್