AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಾಠಾ ಮೀಸಲಾತಿ: ಮುಂಬೈ ಕಡೆಗೆ ಮೆರವಣಿಗೆ ಹೊರಡುತ್ತಿದ್ದಂತೆ ಮನೋಜ್ ಜಾರಂಗೆ ಬೇಡಿಕೆಗಳಿಗೆ ಒಪ್ಪಿದ ಮಹಾರಾಷ್ಟ್ರ ಸರ್ಕಾರ

ಮರಾಠಾ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ನೇತೃತ್ವದ ತಂಡ ಮುಂಬೈಗೆ ಹೊರಡುತ್ತಿದ್ದಂತೆ ಇತ್ತ ಸರ್ಕಾರವು ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದೆ. ನವಿ ಮುಂಬೈನಿಂದ ಮುಂಬೈ ತಲುಪುವ ಮುನ್ನ ಸರ್ಕಾರದ ನಿಯೋಗ ಮನೋಜ್ ಜಾರಂಗೆ ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸಿತು. ಈ ಚರ್ಚೆ ಸಕಾರಾತ್ಮಕವಾಗಿದೆ ಎಂದು ಮನೋಜ್ ಜಾರಂಗೆ ಪಾಟೀಲ್ ಹೇಳಿದ್ದಾರೆ.

ಮರಾಠಾ ಮೀಸಲಾತಿ: ಮುಂಬೈ ಕಡೆಗೆ ಮೆರವಣಿಗೆ ಹೊರಡುತ್ತಿದ್ದಂತೆ ಮನೋಜ್ ಜಾರಂಗೆ ಬೇಡಿಕೆಗಳಿಗೆ ಒಪ್ಪಿದ ಮಹಾರಾಷ್ಟ್ರ ಸರ್ಕಾರ
Image Credit source: The Economic Times
ನಯನಾ ರಾಜೀವ್
|

Updated on: Jan 26, 2024 | 1:54 PM

Share

ಮರಾಠಾ ಮೀಸಲಾತಿ(Maratha Reservation) ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ನೇತೃತ್ವದ ತಂಡ ಮುಂಬೈಗೆ ಹೊರಡುತ್ತಿದ್ದಂತೆ ಇತ್ತ ಮಹಾರಾಷ್ಟ್ರ ಸರ್ಕಾರವು ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದೆ. ನವಿ ಮುಂಬೈನಿಂದ ಮುಂಬೈ ತಲುಪುವ ಮುನ್ನ ಸರ್ಕಾರದ ನಿಯೋಗ ಮನೋಜ್ ಜಾರಂಗೆ ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸಿತು. ಈ ಚರ್ಚೆ ಸಕಾರಾತ್ಮಕವಾಗಿದೆ ಎಂದು ಮನೋಜ್ ಜಾರಂಗೆ ಪಾಟೀಲ್ ಹೇಳಿದ್ದಾರೆ.

ಇದೇ ವೇಳೆ ಜಾರಂಗೆ ಪಾಟೀಲ್ ಅವರ ಎಲ್ಲ ಬೇಡಿಕೆಗಳನ್ನು ಅಂಗೀಕರಿಸಲಾಗಿದೆ. ಈಗ ಸರ್ಕಾರ ನಿಗದಿಪಡಿಸಿದ ನಿಯಮಗಳ ಪ್ರಕಾರವೇ ಅನುಷ್ಠಾನಗೊಳಿಸಲಾಗುವುದು ಎಂದು ಸಚಿವ ದೀಪಕ್ ಕೇಸರಕರ್ ಮಾಹಿತಿ ನೀಡಿದರು.

ದೀಪಕ್ ಕೇಸರಕರ್ ಹೇಳಿದ್ದೇನು? ಮರಾಠಾ ಮೀಸಲಾತಿ ನಾಯಕ ಮನೋಜ್ ಜಾರಂಗೆ ಪಾಟೀಲ್ ಅವರ ಎಲ್ಲ ಬೇಡಿಕೆಗಳನ್ನು ಅಂಗೀಕರಿಸಲಾಗಿದೆ. ಈಗ ಸರ್ಕಾರವು ನಿಗದಿಪಡಿಸಿದ ನಿಯಮಗಳಿವೆ, ಅದರ ಪ್ರಕಾರ ಆ ನಿರ್ಧಾರಗಳನ್ನು ಜಾರಿಗೆ ತರಲಾಗುವುದು. ಮಹಾರಾಷ್ಟ್ರದ ಇತಿಹಾಸದಲ್ಲಿ ಪ್ರಥಮ ಬಾರಿಗೆ 37 ಲಕ್ಷ ಕುಂಬಿ ಪ್ರಮಾಣಪತ್ರಗಳನ್ನು ನೀಡಿದ್ದೇವೆ. ಆದರೆ ಈಗ ಇವು 50 ಲಕ್ಷ ದಾಟಲಿವೆ.

ಮತ್ತಷ್ಟು ಓದಿ: ಮರಾಠಾ ಮೀಸಲಾತಿ: ಮಹಾರಾಷ್ಟ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ, ಇಲ್ಲಿದೆ ವಿವರ

ಜಾರಂಗೆ ಮುಂಬೈನ ಆಜಾದ್ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸುವ ನಿರ್ಧಾರ ಪ್ರಕಟಿಸಿದ್ದರು. ಈಗ ಮೀಸಲಾತಿಯೊಂದಿಗೆ ಮಾತ್ರ ಮುಂಬೈ ಬಿಡುತ್ತೇನೆ ಎಂದು ಹೇಳಿದ್ದರು.

ಕಳೆದ ನಾಲ್ಕೈದು ದಿನಗಳಿಂದ ಸರ್ಕಾರದ ನಿಯೋಗ ಅವರೊಂದಿಗೆ ಚರ್ಚೆ ನಡೆಸಿತ್ತು. ಆದರೆ ಆ ಚರ್ಚೆಯಿಂದ ಪರಿಹಾರ ಸಿಗಲಿಲ್ಲ. ಕೊನೆಗೆ ಮನೋಜ್ ಜಾರಂಗೆ ಪಾಟೀಲ್ ನವಿ ಮುಂಬೈಗೆ ಬಂದರು.

ಆ ಬಳಿಕ ಮುಂಬೈನ ಆಜಾದ್ ಮೈದಾನಕ್ಕೆ ಬರುತ್ತಿದ್ದರು. ಅದಕ್ಕೂ ಮುನ್ನ ಮತ್ತೊಮ್ಮೆ ಮನೋಜ್ ಜಾರಂಗೆ ಪಾಟೀಲ್ ಜೊತೆ ಚರ್ಚೆ ನಡೆದಿದೆ. ಈ ಚರ್ಚೆ ಯಶಸ್ವಿಯಾಗಿದೆ. ಮನೋಜ್ ಜರಂಗೆ ಪಾಟೀಲ ಅವರ ಎಲ್ಲಾ ಬೇಡಿಕೆಗಳನ್ನು ಅಂಗೀಕರಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ದೀಪಕ್ ಕೇಸರಕರ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ