AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ತನಿಖಾ ದಳದೆದುರು ಹಾಜರಾಗಲು ರೈತ ನಾಯಕರಿಗೆ ಸಮನ್ಸ್

ದೆಹಲಿ ಚಲೋ ಹೋರಾಟ ನಿರತ ರೈತರಿಗೆ ಸಮನ್ಸ್ ಜಾರಿಮಾಡಿರುವುದು ಸಹಜವಾಗಿ ರೈತ ಒಕ್ಕೂಟಗಳ ಆಕ್ರೋಶಕ್ಕೆ ಕಾರಣವಾಗಿದೆ. ‘ದೆಹಲಿ ಚಲೋ ಹತ್ತಿಕ್ಕಲು ರಾಷ್ಟ್ರೀಯ ತನಿಖಾ ದಳವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ರೈತ ನಾಯಕರು ಆರೋಪಿಸಿದ್ದಾರೆ.

ರಾಷ್ಟ್ರೀಯ ತನಿಖಾ ದಳದೆದುರು ಹಾಜರಾಗಲು ರೈತ ನಾಯಕರಿಗೆ ಸಮನ್ಸ್
ಸಾಂಕೇತಿಕ ಚಿತ್ರ
guruganesh bhat
|

Updated on:Jan 17, 2021 | 11:26 AM

Share

ದೆಹಲಿ: ನಿಷೇಧಿತ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್​ಗೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆಗಾಗಿ ನಟ ದೀಪ್ ಸಿಂಗ್ ಮತ್ತು ರೈತ ನಾಯಕ ಬಲ್ದೇವ್ ಸಿಂಗ್​ ಅವರನ್ನು ಸೇರಿ 40 ಜನರಿಗೆ ರಾಷ್ಟ್ರೀಯ ತನಿಖಾ ದಳ ಸಮನ್ಸ್ ಜಾರಿಗೊಳಿಸದೆ. ಇಂದು ರಾಷ್ಟ್ರೀಯ ತನಿಖಾ ದಳದ ಮುಖ್ಯ ಕಚೇರಿಗೆ ಹಾಜರಾಗಲು ಸೂಚಿಸಲಾಗಿದೆ.

ದೆಹಲಿ ಚಲೋ ಹೋರಾಟ ನಿರತ ರೈತರಿಗೆ ಸಮನ್ಸ್ ಜಾರಿಮಾಡಿರುವುದು ಸಹಜವಾಗಿ ರೈತ ಒಕ್ಕೂಟಗಳ ಆಕ್ರೋಶಕ್ಕೆ ಕಾರಣವಾಗಿದೆ. ಶಿರೋಮಣಿ ಅಕಾಲಿದಳದ ನಾಯಕ ಸುಖ್ಬೀರ್ ಸಿಂಗ್ ಬಾದಲ್, ‘ದೆಹಲಿ ಚಲೋ ಹತ್ತಿಕ್ಕಲು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ದಳವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ರೈತ ಚಳುವಳಿಕಾರರು ದೇಶ ವಿರೋಧಿಗಳಲ್ಲ, ಅವರನ್ನು ದೇಶ ವಿರೋಧಿಗಳೆಂದು ಬಿಂಬಿಸಲು ಪ್ರಯತ್ನಿಸಲಾಗುತ್ತಿದೆ’ ಎಂದು ಆರೋಪಿಸಿದ್ದಾರೆ.

ಅಮೆರಿಕ ಮೂಲದ ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆ ಖಲಿಸ್ತಾನ ಪರ ಹೋರಾಟದಲ್ಲಿ ಭಾಗಿಯಾದ ಆರೋಪವಿದೆ. ಸುಪ್ರೀಂ ಕೋರ್ಟ್ ಸಹ ದೆಹಲಿ ಚಲೋದಲ್ಲಿ ದೇಶ ವಿರೋಧಿ ಸಂಘಟನೆ ಭಾಗಿಯಾಗಿದೆಯೇ ಎಂದು ಇತ್ತೀಚಿಗೆ ಪ್ರಶ್ನಿಸಿ ರೈತ ಸಂಘಟನೆಗಳಿಗೆ ಸ್ಪಷ್ಟನೆ ನೀಡಲು ಸೂಚಿಸಿತ್ತು.

ಈಗಿನ ಸದಸ್ಯರು ತಜ್ಞರ ಸಮಿತಿಗೆ ಬೇಡ.. ಹೊಸ ಸದಸ್ಯರನ್ನು ನೇಮಿಸಿ: ಸುಪ್ರೀಂ ಕೋರ್ಟ್​ಗೆ ರೈತ ಸಂಘಟನೆ ಮನವಿ

Published On - 11:26 am, Sun, 17 January 21

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ