AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಐಎಡಿಎಂಕೆ ಈಗ ಮೇಡಂ ಜಯಲಲಿತಾರ ಪಕ್ಷವಲ್ಲ..ಅದು ಪ್ರಧಾನಿ ಮೋದಿಯವರ ಗುಲಾಮ ಪಕ್ಷ’- ಅಸಾದುದ್ದೀನ್ ಓವೈಸಿ ಟೀಕೆ

Tamil nadu assembly election 2021: ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್​ 6ರಂದು ಚುನಾವಣೆ ನಡೆಯಲಿದ್ದು, ಮೇ 2ರಂದು ಮತಎಣಿಕೆ ನಡೆಯಲಿದೆ. ಎಎಂಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿರುವ AIMIM ಮೂರು ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡುತ್ತಿದೆ.

‘ಎಐಎಡಿಎಂಕೆ ಈಗ ಮೇಡಂ ಜಯಲಲಿತಾರ ಪಕ್ಷವಲ್ಲ..ಅದು ಪ್ರಧಾನಿ ಮೋದಿಯವರ ಗುಲಾಮ ಪಕ್ಷ’- ಅಸಾದುದ್ದೀನ್ ಓವೈಸಿ ಟೀಕೆ
ಅಸಾದುದ್ದೀನ್​ ಓವೈಸಿ
Follow us
Lakshmi Hegde
|

Updated on:Mar 13, 2021 | 12:55 PM

ಚೆನ್ನೈ: ತಮಿಳುನಾಡಿನಲ್ಲಿ ಎಐಎಡಿಎಂಕೆ (AIADMK) ಪಕ್ಷ ಭಾರತೀಯ ಜನತಾ ಪಾರ್ಟಿ (BJP)ಯೊಂದಿಗೆ ಮೈತ್ರಿ ಮಾಡಿಕೊಂಡಿದ್ದನ್ನು ಎಐಎಂಐಎಂ (AIMIM) ಅಸಾದುದ್ದೀನ್ ಓವೈಸಿ ತೀವ್ರವಾಗಿ ಟೀಕಿಸಿದ್ದಾರೆ. ಜಯಲಲಿತಾ ಅವರು ನಮ್ಮೊಂದಿಗೆ ಇಲ್ಲ. ದುರದೃಷ್ಟಕ್ಕೆ ಅವರ ಪಕ್ಷ ಈಗ ಪ್ರಧಾನಿ ನರೇಂದ್ರ ಮೋದಿಯವರ ಗುಲಾಮ ಪಕ್ಷವಾಗಿ ಬದಲಾಗಿದೆ ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಏಪ್ರಿಲ್ 6ರಂದು ವಿಧಾನಸಭಾ ಚುನಾವಣೆ ನಡೆಯಲದೆ. ಅಸಾದುದ್ದೀನ್ ಓವೈಸಿ ಈ ಬಾರಿ ಟಿಟಿವಿ ದಿನಕರನ್​ ನೇತೃತ್ವದAMMKಯೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಹಾಗೇ ಈಗಾಗಲೇ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ನಿನ್ನೆ ಚೆನ್ನೈನಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡ ಅವರು ಎಐಎಡಿಎಂಕೆ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಇಂದು AIADMK ಮೇಡಂ ಜಯಲಲಿತಾ ಅವರ ಪಕ್ಷವಾಗಿ ಉಳಿದಿಲ್ಲ. ಜಯಲಲಿತಾ ಬದುಕಿದ್ದಾಗ ಒಂದಿನವೂ ಬಿಜೆಪಿಯನ್ನು ಹತ್ತಿರ ಸೇರಿಸಿಕೊಳ್ಳಲಿಲ್ಲ. ಆದರೆ ಈಗ AIADMK ಬಿಜೆಪಿಯ ಗುಲಾಮ ಪಕ್ಷವಾಗಿ ಬದಲಾಗಿದೆ ಎಂದು ಟೀಕಿಸಿದ್ದಾರೆ. ಇನ್ನು ಕಾಂಗ್ರೆಸ್​ನೊಟ್ಟಿಗೆ ಮೈತ್ರಿ ಮಾಡಿಕೊಂಡ ಡಿಎಂಕೆ ಬಗ್ಗೆಯೂ ಓವೈಸಿ ವ್ಯಂಗ್ಯ ಮಾಡಿದ್ದಾರೆ.

ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್​ 6ರಂದು ಚುನಾವಣೆ ನಡೆಯಲಿದ್ದು, ಮೇ 2ರಂದು ಮತಎಣಿಕೆ ನಡೆಯಲಿದೆ. ಇದರಲ್ಲಿ ಎಎಂಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿರುವ AIMIM ಮೂರು ಕ್ಷೇತ್ರಗಳಲ್ಲಿ (ವನಿಯಂಬಾಡಿ, ಕೃಷ್ಣಗಿರಿ ಮತ್ತು ಶಂಕರಪುರಂ) ಮಾತ್ರ ಸ್ಪರ್ಧೆ ಮಾಡುತ್ತಿದೆ. ಅಸಾದುದ್ದೀನ್ ಓವೈಸಿ ತಮಿಳುನಾಡಿನಲ್ಲಿ ಡಿಎಂಕೆ ಅಥವಾ ಎಎಂಎಂಕೆ.. ಎರಡು ಪಕ್ಷಗಳಲ್ಲಿ ಒಂದರೊಟ್ಟಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದರು. ಆದರೆ ಡಿಎಂಕೆ ಮೈತ್ರಿಯಲ್ಲಿರುವ ಉಳಿದ ಮುಸ್ಲಿಂ ಪಕ್ಷಗಳು ಓವೈಸಿ ಆಗಮನವನ್ನು ಒಪ್ಪಲಿಲ್ಲ.

ಇದನ್ನೂ ಓದಿ: ತಮಿಳುನಾಡು ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ: ಟಿಟಿವಿ ದಿನಕರನ್ ಜೊತೆ ಅಸಾದುದ್ದೀನ್ ಓವೈಸಿ ಮೈತ್ರಿ

ತಮಿಳುನಾಡು ವಿಧಾನಸಭೆ ಚುನಾವಣೆ: ‘ಕರ್ನಾಟಕದ ಸಿಂಗಂ’ ಅಣ್ಣಾ ಮಲೈ ಸ್ಪರ್ಧಿಸುತ್ತಿರುವ ಕ್ಷೇತ್ರ ಯಾವುದು? ಆ ಕ್ಷೇತ್ರದ ಮಹಿಮೆ ಏನು?

Published On - 12:48 pm, Sat, 13 March 21

ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?