AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸೀದಿ ನೆಲಸಮದ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿದ ಓವೈಸಿ; ಉತ್ತರ ಪ್ರದೇಶ ಸಿಎಂ ವಿರುದ್ಧ ಕಿಡಿ

ಮೇ ತಿಂಗಳಲ್ಲಿ ಬಾರಾಬಂಕಿ ಜಿಲ್ಲೆಯಲ್ಲಿರುವ ಗರೀಬ್​ ನವಾಜ್​ ಅಲ್​ ಮರೂಫ್​ ಎಂಬ ಮಸೀದಿಯನ್ನು ಅಕ್ರಮ ಕಟ್ಟಡದ ಹೆಸರಲ್ಲಿ ನೆಲಸಮ ಮಾಡಲಾಗಿತ್ತು. ಆ ಬಗ್ಗೆ ಇದೀಗ ಓವೈಸಿ ಉಲ್ಲೇಖ ಮಾಡಿದ್ದಾರೆ.

ಮಸೀದಿ ನೆಲಸಮದ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿದ ಓವೈಸಿ; ಉತ್ತರ ಪ್ರದೇಶ ಸಿಎಂ ವಿರುದ್ಧ ಕಿಡಿ
ಅಸಾದುದ್ದೀನ್​ ಓವೈಸಿ
TV9 Web
| Edited By: |

Updated on:Sep 09, 2021 | 7:14 PM

Share

ಬಾರಾಬಂಕಿ: ಮಸೀದಿಗೆ ಸಂಬಂಧಪಟ್ಟಂತೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಇಂದು ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ. ಉತ್ತರಪ್ರದೇಶದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಅವರು ಬಾರಾಬಂಕಿಯಲ್ಲಿ ರ್ಯಾಲಿ ನಡೆಸಿದರು. ಈ ವೇಳೆ ಮಾತನಾಡಿ, ಒಬ್ಬ ಅಧಿಕಾರಿಗೆ ಆಜಾನ್​ (ಮುಸ್ಲಿಮರ ಪ್ರಾರ್ಥನೆ)ನಿಂದ ತುಂಬ ತೊಂದರೆಯಾಗುತ್ತದೆ ಎಂಬ ಒಂದೇ ಕಾರಣಕ್ಕೆ ಆ ಮಸೀದಿಯನ್ನೇ ಧ್ವಂಸಗೊಳಿಸಲಾಯಿತು ಎಂದು ಓವೈಸಿ ಹೇಳಿದರು.  ಹಾಗೇ, ಯೋಗಿ ಆದಿತ್ಯನಾಥ್​ರನ್ನು ಉಲ್ಲೇಖಿಸಿ, ‘ಅವರಪ್ಪನ ಮಸೀದಿ’ ಎಂದು ವ್ಯಂಗ್ಯವಾಡಿದರು.

ಮೇ ತಿಂಗಳಲ್ಲಿ ಬಾರಾಬಂಕಿ ಜಿಲ್ಲೆಯಲ್ಲಿರುವ ಗರೀಬ್​ ನವಾಜ್​ ಅಲ್​ ಮರೂಫ್​ ಎಂಬ ಮಸೀದಿಯನ್ನು ಅಕ್ರಮ ಕಟ್ಟಡದ ಹೆಸರಲ್ಲಿ ನೆಲಸಮ ಮಾಡಲಾಗಿತ್ತು. ಅದನ್ನು ಸ್ಥಳೀಯ ಜಿಲ್ಲಾಡಳಿತವೇ ಮುಂದಾಗಿ ಮಾಡಿತ್ತು. ಆದರೆ ಆ ಮಸೀದಿ ನೆಲಸಮವಾದ ಬೆನ್ನಲ್ಲೇ ಆಕ್ರೋಶವೂ ವ್ಯಕ್ತವಾಗಿ ಈ ಓವೈಸಿ ಕೂಡ ಅದನ್ನು ಖಂಡಿಸಿದ್ದರು. ಆದರೆ ಅದನ್ನೀಗ ಮತ್ತೆ ಉಲ್ಲೇಖಿಸಿ ಮಾತನಾಡಿದ್ದಾರೆ.

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಸದ್ಯ ಮೂರು ದಿನಗಳ ಉತ್ತರಪ್ರದೇಶ ಪ್ರವಾಸದಲ್ಲಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಕೂಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2014ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಜಾತ್ಯತೀತತೆ ಎಂಬುದು ದುರ್ಬಲವಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: T20 World Cup: ಟಿ 20 ವಿಶ್ವಕಪ್​ಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ; ಕ್ರಿಸ್ ಮೋರಿಸ್, ಫಾಫ್ ಡು ಪ್ಲೆಸಿಸ್​ಗೆ ತಂಡದಲ್ಲಿಲ್ಲ ಸ್ಥಾನ!

ಅಫ್ಘಾನಿಸ್ತಾನ ಅಕ್ಕಪಕ್ಕದ ದೇಶಗಳಿಗೆ ಆತಂಕ ತರಬಾರದು: ಬ್ರಿಕ್ಸ್​ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

Published On - 7:14 pm, Thu, 9 September 21

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ