AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಮತಾ ನಾಡಲ್ಲಿ ಪಕ್ಷ ಸಂಘಟನೆಗಿಳಿದ ಅಸ್ಸಾದುದ್ದೀನ್ ಒವೈಸಿ; TMC ನಾಯಕರು ಹೇಳಿದ್ದೇನು?

ಈ ಭೇಟಿ ಮತ್ತು ಮಾತುಕತೆಗಳಿಗೆ ಆಡಳಿತಾರೂಢ ಟಿಎಂಸಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಇಲ್ಲಿನ ಮುಸ್ಲಿಮರು ಹೆಚ್ಚಾಗಿ ಬಂಗಾಳಿ ಮಾತನಾಡುವವರು, ಅವರೆಂದಿಗೂ ಒವೈಸಿಯನ್ನು ಬೆಂಬಲಿಸುವುದಿಲ್ಲ. ಈ ವಿಷಯ ಒವೈಸಿ ಅವರಿಗೆ ಚೆನ್ನಾಗಿ ತಿಳಿದಿದೆ ಎಂದು ಟಿಎಂಸಿ ನಾಯಕರು ವ್ಯಂಗ್ಯವಾಡಿದ್ದಾರೆ.

ಮಮತಾ ನಾಡಲ್ಲಿ ಪಕ್ಷ ಸಂಘಟನೆಗಿಳಿದ ಅಸ್ಸಾದುದ್ದೀನ್ ಒವೈಸಿ; TMC ನಾಯಕರು ಹೇಳಿದ್ದೇನು?
ಅಸ್ಸಾದುದ್ದೀನ್ ಒವೈಸಿ
ಪೃಥ್ವಿಶಂಕರ
| Edited By: |

Updated on: Jan 03, 2021 | 3:18 PM

Share

ಕೊಲ್ಕತ್ತಾ: AIMIM ಮುಖ್ಯಸ್ಥ ಅಸ್ಸಾದುದ್ದೀನ್ ಒವೈಸಿ ಭಾನುವಾರ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಫ್ಯೂಚುರಾ ಷರೀಫ್‌ಗೆ ಆಗಮಿಸಿ ರಾಜ್ಯದ ರಾಜಕೀಯ ಸನ್ನಿವೇಶ ಮತ್ತು ಮುಂಬರುವ ವಿಧಾನಸಭಾ ಚುನಾವಣೆಗಳ ಕುರಿತು ಪ್ರಮುಖ ಮುಸ್ಲಿಂ ಮುಖಂಡ ಅಬ್ಬಾಸ್ ಸಿದ್ದಿಕಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಅವರ ಪಕ್ಷದ ಮೂಲಗಳು ತಿಳಿಸಿವೆ.

TMC ಸರ್ಕಾರ ಅಸ್ಸಾದುದ್ದೀನ್ ಒವೈಸಿಯನ್ನು ವಿಮಾನ ನಿಲ್ದಾಣದಲ್ಲೇ ತಡೆದು ನಿಲ್ಲಿಸುವ ಸಾಧ್ಯತೆಯಿದ್ದ ಕಾರಣ ಸಭೆಯನ್ನು ರಹಸ್ಯವಾಗಿಡಲು ಓವೈಸಿ ಬಯಸಿದ್ದರು. ನಂತರ ಕೋಲ್ಕತಾ ವಿಮಾನ ನಿಲ್ದಾಣದಿಂದ ನೇರವಾಗಿ ಅಬ್ಬಾಸ್ ಸಿದ್ದಿಕಿ ಅವರನ್ನು ಭೇಟಿಯಾಗಲು ಹೂಗ್ಲಿಗೆ ತೆರಳಿದ್ದಾರೆ ಎಂದು ಎಐಎಂಐಎಂ ರಾಜ್ಯ ಕಾರ್ಯದರ್ಶಿ ಜಮೀರುಲ್ ಹಸನ್ ಹೇಳಿಕೆ ನೀಡಿದ್ದಾರೆ.

ಸಿದ್ದಿಕಿ ಅವರೊಂದಿಗೆ ವರ್ಚುವಲ್ ಸಭೆ ನಡೆಸಲು ಒವೈಸಿ ನಿರ್ಧರಿಸಿದ್ದರು. ಆದರೆ ನಂತರ ಮನಸ್ಸು ಬದಲಿಸಿ ಸಿದ್ದಿಕಿ ಅವರನ್ನು ಭೇಟಿ ಮಾಡಲು ಬಂಗಾಳಕ್ಕೆ ತೆರಳಿದರು. ಕಳೆದ ವರ್ಷ ಬಿಹಾರ ಚುನಾವಣೆಯ ಸಂದರ್ಭದಲ್ಲಿ ಒವೈಸಿ ಪಕ್ಷ ಉತ್ತಮ ಪ್ರದರ್ಶನ ನೀಡಿತ್ತು. ಅಲ್ಲದೆ ಬಾಂಗ್ಲಾ ಗಡಿಯಲ್ಲಿರುವ ಪ್ರದೇಶಗಳಲ್ಲಿ ಐದು ಸ್ಥಾನಗಳನ್ನು ಗಳಿಸಿತ್ತು. ಹೀಗಾಗಿ ಪಶ್ಚಿಮ ಬಂಗಾಳದಲ್ಲಿ ಸೀಟು ಹಂಚಿಕೆ ಒಪ್ಪಂದದ ಬಗ್ಗೆ ಸಿದ್ದಿಕಿ ಅವರೊಂದಿಗೆ ಮಾತುಕತೆ ನಡೆಸಿರಬಹುದು ಎಂದು ಜಮೀರುಲ್ ಹಸನ್ ಹೇಳಿದರು.

ಈ ಭೇಟಿ ಮತ್ತು ಮಾತುಕತೆಗಳಿಗೆ ಆಡಳಿತಾರೂಢ ಟಿಎಂಸಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಇಲ್ಲಿನ ಮುಸ್ಲಿಮರು ಹೆಚ್ಚಾಗಿ ಬಂಗಾಳಿ ಮಾತನಾಡುವವರು, ಅವರೆಂದಿಗೂ ಒವೈಸಿಯನ್ನು ಬೆಂಬಲಿಸುವುದಿಲ್ಲ. ಈ ವಿಷಯ ಒವೈಸಿ ಅವರಿಗೆ ಚೆನ್ನಾಗಿ ತಿಳಿದಿದೆ. ಅವರು ಅಬ್ಬಾಸ್ ಸಿದ್ದಿಕಿ ಅವರೊಂದಿಗೆ ಸಂಬಂಧವನ್ನು ಬೆಳೆಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅದು ಯಾವುದೇ ಫಲಿತಾಂಶವನ್ನು ನೀಡುವುದಿಲ್ಲ. ಬಂಗಾಳದ ಮುಸ್ಲಿಮರು ಮಮತಾ ಬ್ಯಾನರ್ಜಿಯವರೊಂದಿಗಿದ್ದಾರೆ ಎಂದು ಹಿರಿಯ ಟಿಎಂಸಿ ಮುಖಂಡ ಮತ್ತು ಪಕ್ಷದ ಸಂಸದ ಸೌಗತಾ ರಾಯ್ ಹೇಳಿಕೆ ನೀಡಿದ್ದಾರೆ.

ಪ. ಬಂಗಾಳ ಅಸೆಂಬ್ಲಿ ಚುನಾವಣೆ: ಮಮತಾ ಬ್ಯಾನರ್ಜಿಗೆ ಶುರುವಾಯ್ತು ಓವೈಸಿ ನಡುಕ!

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್