AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಮತಾ ನಾಡಲ್ಲಿ ಪಕ್ಷ ಸಂಘಟನೆಗಿಳಿದ ಅಸ್ಸಾದುದ್ದೀನ್ ಒವೈಸಿ; TMC ನಾಯಕರು ಹೇಳಿದ್ದೇನು?

ಈ ಭೇಟಿ ಮತ್ತು ಮಾತುಕತೆಗಳಿಗೆ ಆಡಳಿತಾರೂಢ ಟಿಎಂಸಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಇಲ್ಲಿನ ಮುಸ್ಲಿಮರು ಹೆಚ್ಚಾಗಿ ಬಂಗಾಳಿ ಮಾತನಾಡುವವರು, ಅವರೆಂದಿಗೂ ಒವೈಸಿಯನ್ನು ಬೆಂಬಲಿಸುವುದಿಲ್ಲ. ಈ ವಿಷಯ ಒವೈಸಿ ಅವರಿಗೆ ಚೆನ್ನಾಗಿ ತಿಳಿದಿದೆ ಎಂದು ಟಿಎಂಸಿ ನಾಯಕರು ವ್ಯಂಗ್ಯವಾಡಿದ್ದಾರೆ.

ಮಮತಾ ನಾಡಲ್ಲಿ ಪಕ್ಷ ಸಂಘಟನೆಗಿಳಿದ ಅಸ್ಸಾದುದ್ದೀನ್ ಒವೈಸಿ; TMC ನಾಯಕರು ಹೇಳಿದ್ದೇನು?
ಅಸ್ಸಾದುದ್ದೀನ್ ಒವೈಸಿ
ಪೃಥ್ವಿಶಂಕರ
| Edited By: |

Updated on: Jan 03, 2021 | 3:18 PM

Share

ಕೊಲ್ಕತ್ತಾ: AIMIM ಮುಖ್ಯಸ್ಥ ಅಸ್ಸಾದುದ್ದೀನ್ ಒವೈಸಿ ಭಾನುವಾರ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಫ್ಯೂಚುರಾ ಷರೀಫ್‌ಗೆ ಆಗಮಿಸಿ ರಾಜ್ಯದ ರಾಜಕೀಯ ಸನ್ನಿವೇಶ ಮತ್ತು ಮುಂಬರುವ ವಿಧಾನಸಭಾ ಚುನಾವಣೆಗಳ ಕುರಿತು ಪ್ರಮುಖ ಮುಸ್ಲಿಂ ಮುಖಂಡ ಅಬ್ಬಾಸ್ ಸಿದ್ದಿಕಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಅವರ ಪಕ್ಷದ ಮೂಲಗಳು ತಿಳಿಸಿವೆ.

TMC ಸರ್ಕಾರ ಅಸ್ಸಾದುದ್ದೀನ್ ಒವೈಸಿಯನ್ನು ವಿಮಾನ ನಿಲ್ದಾಣದಲ್ಲೇ ತಡೆದು ನಿಲ್ಲಿಸುವ ಸಾಧ್ಯತೆಯಿದ್ದ ಕಾರಣ ಸಭೆಯನ್ನು ರಹಸ್ಯವಾಗಿಡಲು ಓವೈಸಿ ಬಯಸಿದ್ದರು. ನಂತರ ಕೋಲ್ಕತಾ ವಿಮಾನ ನಿಲ್ದಾಣದಿಂದ ನೇರವಾಗಿ ಅಬ್ಬಾಸ್ ಸಿದ್ದಿಕಿ ಅವರನ್ನು ಭೇಟಿಯಾಗಲು ಹೂಗ್ಲಿಗೆ ತೆರಳಿದ್ದಾರೆ ಎಂದು ಎಐಎಂಐಎಂ ರಾಜ್ಯ ಕಾರ್ಯದರ್ಶಿ ಜಮೀರುಲ್ ಹಸನ್ ಹೇಳಿಕೆ ನೀಡಿದ್ದಾರೆ.

ಸಿದ್ದಿಕಿ ಅವರೊಂದಿಗೆ ವರ್ಚುವಲ್ ಸಭೆ ನಡೆಸಲು ಒವೈಸಿ ನಿರ್ಧರಿಸಿದ್ದರು. ಆದರೆ ನಂತರ ಮನಸ್ಸು ಬದಲಿಸಿ ಸಿದ್ದಿಕಿ ಅವರನ್ನು ಭೇಟಿ ಮಾಡಲು ಬಂಗಾಳಕ್ಕೆ ತೆರಳಿದರು. ಕಳೆದ ವರ್ಷ ಬಿಹಾರ ಚುನಾವಣೆಯ ಸಂದರ್ಭದಲ್ಲಿ ಒವೈಸಿ ಪಕ್ಷ ಉತ್ತಮ ಪ್ರದರ್ಶನ ನೀಡಿತ್ತು. ಅಲ್ಲದೆ ಬಾಂಗ್ಲಾ ಗಡಿಯಲ್ಲಿರುವ ಪ್ರದೇಶಗಳಲ್ಲಿ ಐದು ಸ್ಥಾನಗಳನ್ನು ಗಳಿಸಿತ್ತು. ಹೀಗಾಗಿ ಪಶ್ಚಿಮ ಬಂಗಾಳದಲ್ಲಿ ಸೀಟು ಹಂಚಿಕೆ ಒಪ್ಪಂದದ ಬಗ್ಗೆ ಸಿದ್ದಿಕಿ ಅವರೊಂದಿಗೆ ಮಾತುಕತೆ ನಡೆಸಿರಬಹುದು ಎಂದು ಜಮೀರುಲ್ ಹಸನ್ ಹೇಳಿದರು.

ಈ ಭೇಟಿ ಮತ್ತು ಮಾತುಕತೆಗಳಿಗೆ ಆಡಳಿತಾರೂಢ ಟಿಎಂಸಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಇಲ್ಲಿನ ಮುಸ್ಲಿಮರು ಹೆಚ್ಚಾಗಿ ಬಂಗಾಳಿ ಮಾತನಾಡುವವರು, ಅವರೆಂದಿಗೂ ಒವೈಸಿಯನ್ನು ಬೆಂಬಲಿಸುವುದಿಲ್ಲ. ಈ ವಿಷಯ ಒವೈಸಿ ಅವರಿಗೆ ಚೆನ್ನಾಗಿ ತಿಳಿದಿದೆ. ಅವರು ಅಬ್ಬಾಸ್ ಸಿದ್ದಿಕಿ ಅವರೊಂದಿಗೆ ಸಂಬಂಧವನ್ನು ಬೆಳೆಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅದು ಯಾವುದೇ ಫಲಿತಾಂಶವನ್ನು ನೀಡುವುದಿಲ್ಲ. ಬಂಗಾಳದ ಮುಸ್ಲಿಮರು ಮಮತಾ ಬ್ಯಾನರ್ಜಿಯವರೊಂದಿಗಿದ್ದಾರೆ ಎಂದು ಹಿರಿಯ ಟಿಎಂಸಿ ಮುಖಂಡ ಮತ್ತು ಪಕ್ಷದ ಸಂಸದ ಸೌಗತಾ ರಾಯ್ ಹೇಳಿಕೆ ನೀಡಿದ್ದಾರೆ.

ಪ. ಬಂಗಾಳ ಅಸೆಂಬ್ಲಿ ಚುನಾವಣೆ: ಮಮತಾ ಬ್ಯಾನರ್ಜಿಗೆ ಶುರುವಾಯ್ತು ಓವೈಸಿ ನಡುಕ!

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ