AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಕಾರ್ತದಲ್ಲಿ ನಡೆದ 2 ಶೃಂಗಸಭೆಗಳಲ್ಲಿ ಚೀನಾಕ್ಕೆ ಸ್ಪಷ್ಟ ಸಂದೇಶ ನೀಡಿದ ಪ್ರಧಾನಿ ನರೇಂದ್ರ ಮೋದಿ

ಆಸಿಯಾನ್ ರಾಜ್ಯಗಳು ಮತ್ತು ಚೀನಾ ಮಾತುಕತೆ ನಡೆಸುತ್ತಿರುವ ದಕ್ಷಿಣ ಚೀನಾ ಸಮುದ್ರದ ನೀತಿ ಸಂಹಿತೆ "ಪರಿಣಾಮಕಾರಿಯಾಗಿರಬೇಕು ಮತ್ತು UNCLOS ಅಥವಾ ಸಮುದ್ರದ ಕಾನೂನಿನ ಮೇಲಿನ ವಿಶ್ವಸಂಸ್ಥೆಯ ಸಮಾವೇಶಕ್ಕೆ ಅನುಗುಣವಾಗಿರಬೇಕು ಎಂದು ಮೋದಿ ಹೇಳಿದರು. ಅದೇ ವೇಳೆ ಚರ್ಚೆಗಳಲ್ಲಿ ನೇರವಾಗಿ ಭಾಗಿಯಾಗದ ದೇಶಗಳ ಹಿತಾಸಕ್ತಿಗಳನ್ನು ಇದು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಜಕಾರ್ತದಲ್ಲಿ ನಡೆದ 2 ಶೃಂಗಸಭೆಗಳಲ್ಲಿ ಚೀನಾಕ್ಕೆ ಸ್ಪಷ್ಟ ಸಂದೇಶ ನೀಡಿದ ಪ್ರಧಾನಿ ನರೇಂದ್ರ ಮೋದಿ
ಆಸಿಯಾನ್-ಭಾರತ ಶೃಂಗಸಭೆ
ರಶ್ಮಿ ಕಲ್ಲಕಟ್ಟ
|

Updated on:Sep 07, 2023 | 8:11 PM

Share

ಜಕಾರ್ತ ಸೆಪ್ಟೆಂಬರ್ 07: ಏಷ್ಯಾದ ಶತಮಾನಕ್ಕೆ ಕೋವಿಡ್-19 (Covid 19) ನಂತರದ ನಿಯಮಗಳ ರಚನೆಯ ಅಗತ್ಯವಿದೆ ಮತ್ತು ಎಲ್ಲಾ ದೇಶಗಳ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಬಲಪಡಿಸಲು ಜಂಟಿ ಪ್ರಯತ್ನಗಳ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra modi) ಹೇಳಿದ್ದಾರೆ. ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ ಆಸಿಯಾನ್-ಭಾರತ ಶೃಂಗಸಭೆ (Asean-India Summit) ಮತ್ತು ಪೂರ್ವ ಏಷ್ಯಾ ಶೃಂಗಸಭೆಯನ್ನು (East Asia Summit) ಉದ್ದೇಶಿಸಿ ಪ್ರಧಾನಿ ಮೋದಿಯವರು ಮಾಡಿದ ಹೇಳಿಕೆಗಳು, ಬೀಜಿಂಗ್ ಚೀನಾದ ಗಡಿಯೊಳಗಿನ ಇತರ ದೇಶಗಳ ಪ್ರದೇಶಗಳನ್ನು ಒಳಗೊಂಡಿರುವ “ಪ್ರಮಾಣಿತ ನಕ್ಷೆ” ಅನ್ನು ಬಿಡುಗಡೆ ಮಾಡಿದ ಕೆಲವು ದಿನಗಳ ನಂತರ ಬಂದಿವೆ. ಅಂದಹಾಗೆ ಭಾರತ, ಜಪಾನ್, ಇಂಡೋನೇಷ್ಯಾ, ಮಲೇಷ್ಯಾ, ಫಿಲಿಪೈನ್ಸ್, ವಿಯೆಟ್ನಾಂ ಮತ್ತು ತೈವಾನ್ ಚೀನಾದ ನಕ್ಷೆಯನ್ನು ವಿರೋಧಿಸಿವೆ.

ಆಸಿಯಾನ್-ಭಾರತ ಶೃಂಗಸಭೆಯ ಸಂದರ್ಭದಲ್ಲಿ, ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದ (ಆಸಿಯಾನ್) 10 ಸದಸ್ಯರೊಂದಿಗೆ ಸಹಕಾರವನ್ನು ಹೆಚ್ಚಿಸಲು ಮೋದಿ 12 ಅಂಶಗಳ ಯೋಜನೆಯನ್ನು ಪ್ರಸ್ತಾಪಿಸಿದರು. ಗ್ಲೋಬಲ್ ಸೌತ್‌ನ ಧ್ವನಿಗಳನ್ನು ವರ್ಧಿಸಲು ಮತ್ತು ಮುಕ್ತ ಇಂಡೋ-ಪೆಸಿಫಿಕ್ ಅನ್ನು ಖಚಿತಪಡಿಸಿಕೊಳ್ಳಲು ಉಭಯ ಪಕ್ಷಗಳು ಸಾಮಾನ್ಯ ಆಸಕ್ತಿಯನ್ನು ಹೊಂದಿವೆ ಎಂದು ಮೋದಿ ಸಭೆಗೆ ತಿಳಿಸಿದರು. ಈ ಗುರಿಗಳನ್ನು ಸಾಧಿಸಲು ಭಾರತವು ಎಲ್ಲಾ ಆಸಿಯಾನ್ ಸದಸ್ಯರೊಂದಿಗೆ ಕೆಲಸ ಮಾಡಲು ನಿರ್ಧರಿಸಿದೆ ಎಂದು ಅವರು ಹೇಳಿದರು.

ಚೀನಾದ ಪ್ರಧಾನಿ ಲಿ ಕ್ವಿಯಾಂಗ್ ಭಾಗವಹಿಸಿದ್ದ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ (ಇಎಎಸ್) ಮೋದಿ ಇದೇ ರೀತಿಯ ಹೇಳಿಕೆ ನೀಡಿದ್ದಾರೆ. ಅಂತರರಾಷ್ಟ್ರೀಯ ಕಾನೂನುಗಳಿಗೆ ಸಂಪೂರ್ಣವಾಗಿ ಬದ್ಧವಾಗಿರುವುದು ಅತ್ಯಗತ್ಯ, ಮತ್ತು ಎಲ್ಲಾ ದೇಶಗಳ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಬಲಪಡಿಸಲು ಪ್ರತಿಯೊಬ್ಬರ ಬದ್ಧತೆ ಮತ್ತು ಜಂಟಿ ಪ್ರಯತ್ನಗಳು ಸಹ ಅಗತ್ಯವಾಗಿದೆ ಎಂದು ಮೋದಿ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಹೇಳಿದ್ದಾರೆ.

ನಾನು ಮೊದಲೇ ಹೇಳಿದಂತೆ ಇಂದಿನ ಯುಗವು ಯುದ್ಧದ್ದು ಅಲ್ಲ. ಸಂವಾದ ಮತ್ತು ರಾಜತಾಂತ್ರಿಕತೆಯು ನಿರ್ಣಯಕ್ಕೆ ಏಕೈಕ ಮಾರ್ಗವಾಗಿದೆ ಎಂದು ಹಿಂದಿಯಲ್ಲಿ ಮಾತನಾಡಿದ ಮೋದಿ ಹೇಳಿದ್ದಾರೆ.

ಅನಿಶ್ಚಿತತೆಗಳಿಂದ ಸುತ್ತುವರಿದ ಜಾಗತಿಕ ಭೂದೃಶ್ಯದಲ್ಲಿ ಭಯೋತ್ಪಾದನೆ, ಉಗ್ರವಾದ ಮತ್ತು ಭೌಗೋಳಿಕ ರಾಜಕೀಯ ಸಂಘರ್ಷಗಳಂತಹ ಸವಾಲುಗಳನ್ನು ಎದುರಿಸಲು ಬಹುಪಕ್ಷೀಯತೆ ಮತ್ತು ನಿಯಮಾಧಾರಿತ ಜಾಗತಿಕ ಕ್ರಮವು ಅತ್ಯಗತ್ಯ.ಸಮಯದ ಅಗತ್ಯವು ಇಂಡೋ-ಪೆಸಿಫಿಕ್ ಆಗಿದ್ದು, ಅಲ್ಲಿ UNCLOS ಸೇರಿದಂತೆ ಅಂತರಾಷ್ಟ್ರೀಯ ಕಾನೂನು ಎಲ್ಲಾ ದೇಶಗಳಿಗೂ ಸಮಾನವಾಗಿ ಅನ್ವಯಿಸುತ್ತದೆ. ಅಲ್ಲಿ ನ್ಯಾವಿಗೇಷನ್ ಮತ್ತು ಓವರ್‌ಫ್ಲೈಟ್ ಸ್ವಾತಂತ್ರ್ಯವಿದೆ ಮತ್ತು ಎಲ್ಲರ ಅನುಕೂಲಕ್ಕಾಗಿ ಅಡೆತಡೆಯಿಲ್ಲದ ಕಾನೂನುಬದ್ಧ ವಾಣಿಜ್ಯವಿದೆ ಎಂದು ಅವರು ಹೇಳಿದ್ದಾರೆ.

ಆಸಿಯಾನ್ ರಾಜ್ಯಗಳು ಮತ್ತು ಚೀನಾ ಮಾತುಕತೆ ನಡೆಸುತ್ತಿರುವ ದಕ್ಷಿಣ ಚೀನಾ ಸಮುದ್ರದ ನೀತಿ ಸಂಹಿತೆ “ಪರಿಣಾಮಕಾರಿಯಾಗಿರಬೇಕು ಮತ್ತು UNCLOS ಅಥವಾ ಸಮುದ್ರದ ಕಾನೂನಿನ ಮೇಲಿನ ವಿಶ್ವಸಂಸ್ಥೆಯ ಸಮಾವೇಶಕ್ಕೆ ಅನುಗುಣವಾಗಿರಬೇಕು ಎಂದು ಮೋದಿ ಹೇಳಿದರು.ಅದೇ ವೇಳೆ ಚರ್ಚೆಗಳಲ್ಲಿ ನೇರವಾಗಿ ಭಾಗಿಯಾಗದ ದೇಶಗಳ ಹಿತಾಸಕ್ತಿಗಳನ್ನು ಇದು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಯಲ್ಲಿ ಮಿಲಿಟರಿ ನಿಲುಗಡೆಯಿಂದಾಗಿ ಭಾರತ-ಚೀನಾ ಸಂಬಂಧಗಳು ಪ್ರಸ್ತುತ ಆರು ದಶಕಗಳ ಕಡಿಮೆ ಮಟ್ಟದಲ್ಲಿವೆ. ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್ ಈ ವಾರಾಂತ್ಯದಲ್ಲಿ ಭಾರತ ಆಯೋಜಿಸಲಿರುವ ಜಿ 20 ಶೃಂಗಸಭೆಗೆ ಗೈರಾಗಲಿದ್ದು ಮತ್ತು ಬೀಜಿಂಗ್ ಅನ್ನು ಪ್ರಧಾನಿ ಲಿ ಅವರು ಸಭೆಯಲ್ಲಿ ಪ್ರತಿನಿಧಿಸಲಿದ್ದಾರೆ.

ಇದನ್ನೂ ಓದಿ: ಮತ್ತೊಂದು ವಿವಾದಿತ ಹೇಳಿಕೆ; ಪ್ರಧಾನಿ ಮೋದಿಯನ್ನು ಮೊಹಮ್ಮದ್ ಅಲಿ ಜಿನ್ನಾ ಜತೆ ಹೋಲಿಸಿದ ವೀರಪ್ಪ ಮೊಯ್ಲಿ

ಎರಡೂ ಶೃಂಗಸಭೆಗಳಲ್ಲಿ, ಮೋದಿ ಅವರು ಭಾರತದ ಪೂರ್ವ ನೀತಿ ಮತ್ತು ಇಂಡೋ-ಪೆಸಿಫಿಕ್‌ನ ದೃಷ್ಟಿಯಲ್ಲಿ ಆಸಿಯಾನ್‌ನ ಕೇಂದ್ರೀಯತೆಯನ್ನು ಒತ್ತಿ ಹೇಳಿದರು. ಭಾರತ ಮತ್ತು 10 ಆಸಿಯಾನ್ ರಾಜ್ಯಗಳು ಇತಿಹಾಸ ಮತ್ತು ಭೌಗೋಳಿಕತೆ, ಹಂಚಿಕೆಯ ಮೌಲ್ಯಗಳು, ಶಾಂತಿ, ಸಮೃದ್ಧಿ ಮತ್ತು ಬಹುಧ್ರುವ ಪ್ರಪಂಚದ ನಂಬಿಕೆಯಿಂದ ಸಂಪರ್ಕ ಹೊಂದಿವೆ ಎಂದು ಅವರು ಹೇಳಿದರು. ಕ್ವಾಡ್‌ನ ದೃಷ್ಟಿಯಲ್ಲಿ ಆಸಿಯಾನ್ ಕೇಂದ್ರ ಸ್ಥಾನವನ್ನು ಹೊಂದಿದೆ, ಅವರ ಸಕಾರಾತ್ಮಕ ಕಾರ್ಯಸೂಚಿಯು ಆಸಿಯಾನ್‌ನ ವಿವಿಧ ಕಾರ್ಯವಿಧಾನಗಳಿಗೆ ಪೂರಕವಾಗಿದೆ ಎಂದು ಅವರು ಹೇಳಿದರು.

ಭಾರತ ಮತ್ತು ಆಸಿಯಾನ್ 2022 ರಲ್ಲಿ ತಮ್ಮ ಸಂಬಂಧವನ್ನು ಸಮಗ್ರವಾದ ಕಾರ್ಯತಂತ್ರದ ಪಾಲುದಾರಿಕೆಗೆ ಹೆಚ್ಚಿಸಿವೆ ಮತ್ತು ಭಾರತವು ಸಿಂಗಾಪುರ್, ಇಂಡೋನೇಷ್ಯಾ ಮತ್ತು ವಿಯೆಟ್ನಾಂನಂತಹ ಸದಸ್ಯ ರಾಷ್ಟ್ರಗಳೊಂದಿಗೆ ಬಲವಾದ ಆರ್ಥಿಕ ಮತ್ತು ಭದ್ರತಾ ಸಂಬಂಧಗಳನ್ನು ಹೊಂದಿದೆ.

ಮೋದಿ ಅವರು ಮ್ಯಾನ್ಮಾರ್‌ನಲ್ಲಿ ಭಾರತದ ನೀತಿಯನ್ನು ಪ್ರಸ್ತಾಪಿಸಿದ್ದು, ಗಡಿಗಳಲ್ಲಿ ಶಾಂತಿ ಮತ್ತು ಭದ್ರತೆಯನ್ನು ಖಾತ್ರಿಪಡಿಸುವಾಗ ಮತ್ತು ಭಾರತ-ಆಸಿಯಾನ್ ಸಂಪರ್ಕವನ್ನು ಹೆಚ್ಚಿಸುವಾಗ ಆಸಿಯಾನ್‌ನ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳುತ್ತದೆ ಎಂದು ಇಎಎಸ್ ಗೆ ತಿಳಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:08 pm, Thu, 7 September 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್