AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ವರ್ಷಗಳ ಕಾಲ ಟಿಎಂಸಿಯಲ್ಲಿದ್ದೆ ಎಂದು ಹೇಳಲು ನಾಚಿಕೆಯಾಗುತ್ತಿದೆ: ಸುವೇಂದು ಅಧಿಕಾರಿ

ನಾನು ಈ ಹಿಂದೆ ಇದ್ದ ಪಕ್ಷದಲ್ಲಿ ಶಿಸ್ತು ಇಲ್ಲ. ಅದು ಪಕ್ಷದಿಂದ ಕಂಪನಿಯಾಗಿ ಬದಲಾಗಿದೆ. 21 ವರ್ಷಗಳ ಕಾಲ ಆ ಪಕ್ಷದೊಂದಿಗೆ ಇದ್ದೆ ಎಂದು ಹೇಳಲು ನಾಚಿಕೆಯಾಗುತ್ತಿದೆ ಎಂದು ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಪಶ್ಚಿಮ ಬಂಗಾಳದ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ.

21 ವರ್ಷಗಳ ಕಾಲ ಟಿಎಂಸಿಯಲ್ಲಿದ್ದೆ ಎಂದು ಹೇಳಲು ನಾಚಿಕೆಯಾಗುತ್ತಿದೆ: ಸುವೇಂದು ಅಧಿಕಾರಿ
ಸುವೇಂದು ಅಧಿಕಾರಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Dec 27, 2020 | 12:44 PM

Share

ಕೋಲ್ಕತ್ತ: ನಾನು ತೃಣಮೂಲ ಕಾಂಗ್ರೆಸ್ ಜತೆ ಇದ್ದೆ ಎಂದು ಹೇಳಲು ನಾಚಿಕೆಯಾಗುತ್ತಿದೆ ಎಂದು ಕೆಲವು ದಿನಗಳ ಹಿಂದೆಯಷ್ಟೇ ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಪಶ್ಚಿಮ ಬಂಗಾಳದ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಈ ಹಿಂದೆ ಇದ್ದ ಪಕ್ಷದಲ್ಲಿ ಶಿಸ್ತು ಇಲ್ಲ. ಅದು ಪಕ್ಷದಿಂದ ಕಂಪನಿಯಾಗಿ ಬದಲಾಗಿದೆ. 21 ವರ್ಷಗಳ ಕಾಲ ಆ ಪಕ್ಷದೊಂದಿಗೆ ಇದ್ದೆ ಎಂದು ಹೇಳಲು ನಾಚಿಕೆಯಾಗುತ್ತಿದೆ ಎಂದಿದ್ದಾರೆ.

ಪಶ್ಚಿಮ ಬಂಗಾಳಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವ ಬೇಕಿದೆ. ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ತ್ಯಾಗದಿಂದಾಗಿಯೇ ನಾವು ಈಗ ಪಶ್ಚಿಮ ಬಂಗಾಳದಲ್ಲಿ ಬದುಕಲು ಸಾಧ್ಯವಾಗಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರ ಬರಬೇಕು. ಹಾಗಿದ್ದರೆ ಮಾತ್ರ ಪಶ್ಚಿಮ ಬಂಗಾಳದಲ್ಲಿ ಆರ್ಥಿಕ ಅಭಿವೃದ್ಧಿಯಾಗಬಹುದು. ನಿರುದ್ಯೋಗ ಸಮಸ್ಯೆಯನ್ನು ಕಡಿಮೆ ಮಾಡಬಹುದು ಎಂದರು.

ಈಶ್ವರ್ ಚಂದ್ರ ವಿದ್ಯಾಸಾಗರ್ ಅವರ ನೆಲದಲ್ಲಿ ನಮ್ಮನ್ನು ಸ್ವೀಕರಿಸಿದ್ದಕ್ಕೆ ಗೃಹ ಸಚಿವ ಅಮಿತ್ ಶಾ ಅವರಿಗೆ ನಾನು ಧನ್ಯವಾದಗಳನ್ನರ್ಪಿಸುತ್ತೇನೆ. ಬಿಜೆಪಿ ಜಗತ್ತಿನಲ್ಲಿಯೇ ಅತೀ ದೊಡ್ಡ ಪಕ್ಷವಾಗಿದೆ. ನಾನು ಈಗ ರಾಷ್ಟ್ರೀಯವಾದಿ, ಬಹುತ್ವವಾದಿ, ಶಿಸ್ತು ಮತ್ತು ದೇಶಭಕ್ತಿಯಿರುವ ಪಕ್ಷದ ಸದಸ್ಯನಾಗಿದ್ದೇನೆ. ಮುಂಬರುವ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಗೆಲ್ಲಿಸಿ ಸೋನಾರ್ ಬಾಂಗ್ಲಾ (ಸುವರ್ಣ ಬಾಂಗ್ಲಾ) ಮಾಡುವ ಹೊಣೆ ನಮ್ಮ ಮೇಲಿದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಅನುಷ್ಠಾನಗೊಳಿಸದೆ ಟಿಎಂಸಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ 73 ಲಕ್ಷ ರೈತರಿಗೆ ಮೋಸ ಮಾಡಿದೆ ಎಂದು ಆರೋಪಿಸಿದ ಸುವೇಂದು, ಬಿಜೆಪಿ ಕಾರ್ಯಕರ್ತರ ಮೇಲೆ ಇಲ್ಲಿ ಹಲ್ಲೆ ನಡೆಯುತ್ತದೆ. ಅವರ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತದೆ. ಪಕ್ಷಕ್ಕಾಗಿ 135 ಕಾರ್ಯಕರ್ತರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳ: ಅಮಿತ್ ಶಾ ಸಮ್ಮುಖದಲ್ಲಿ ಸುವೇಂದು ಅಧಿಕಾರಿ, 11 ಶಾಸಕರು, 1 ಎಂಪಿ ಬಿಜೆಪಿ ಸೇರ್ಪಡೆ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ