AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖಿಂಪುರ ಖೇರಿ ಹಿಂಸಾಚಾರ ಕೇಸ್​; ಇಂದು ವಿಚಾರಣೆಗೆ ಹಾಜರಾದ ಕೇಂದ್ರ ಸಚಿವರ ಪುತ್ರ ಆಶೀಶ್​ ಮಿಶ್ರಾ

Lakhimpur Kheri Violence: ಆಶೀಶ್​ ಮಿಶ್ರಾ ವಿರುದ್ಧ ಪೊಲೀಸರು ಈಗಾಗಲೇ ಕೊಲೆ ಕೇಸ್​ ದಾಖಲಿಸಿದ್ದಾರೆ. ಆದರೆ ಇದುವರೆಗೂ ಅವರನ್ನು ಬಂಧಿಸಿರಲಿಲ್ಲ. ಈ ಬಗ್ಗೆ ನಿನ್ನೆ ಸುಪ್ರೀಂಕೋರ್ಟ್​ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.

ಲಖಿಂಪುರ ಖೇರಿ ಹಿಂಸಾಚಾರ ಕೇಸ್​; ಇಂದು ವಿಚಾರಣೆಗೆ ಹಾಜರಾದ ಕೇಂದ್ರ ಸಚಿವರ ಪುತ್ರ ಆಶೀಶ್​ ಮಿಶ್ರಾ
ಆಶೀಶ್​ ಮಿಶ್ರಾ
TV9 Web
| Updated By: Lakshmi Hegde|

Updated on:Oct 09, 2021 | 11:21 AM

Share

ಲಖಿಂಪುರ ಖೇರಿ ಹಿಂಸಾಚಾರ(Lakhimpur Kheri Violence)ಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಇಂದು ಪೊಲೀಸರೆದುರು ವಿಚಾರಣೆಗೆ ಹಾಜರಾಗಿದ್ದಾರೆ. ಮೊದಲ ಬಾರಿಗೆ ಸಮನ್ಸ್​ ನೀಡಿದಾಗ ತಪ್ಪಿಸಿಕೊಂಡಿದ್ದ ಅವರಿಂದು ಉತ್ತರಪ್ರದೇಶದ ಅಪರಾಧ ವಿಭಾಗದ ಶಾಖೆಗೆ ಹಾಜರಾಗಿದ್ದಾರೆ. ಅದರಲ್ಲೂ ಪೊಲೀಸ್​ ಕಚೇರಿಯ ಹಿಂಬಾಗಿಲಿನಿಂದ ಒಳಗೆ ಹೋಗಿದ್ದಾರೆ. ಅವರ ತಂದೆ, ಕೇಂದ್ರ ಸಚಿವ ಅಜಯ್​ ಮಿಶ್ರಾ , ಲಖಿಂಪುರ ಖೇರಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿಯೇ ಇದ್ದಾರೆ. 

ಲಖಿಂಪುರ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ವಾಹನ ಹರಿಸಿದ ಪ್ರಕರಣದಲ್ಲಿ ಆಶೀಶ್​ ಮಿಶ್ರಾ ವಿರುದ್ಧ ಆರೋಪ ಕೇಳಿಬಂದಿದೆ. ಅಲ್ಲದೆ, ಪೊಲೀಸರು ಈಗಾಗಲೇ ಕೊಲೆ ಕೇಸ್​ ದಾಖಲಿಸಿದ್ದಾರೆ. ಆದರೆ ಇದುವರೆಗೂ ಅವರನ್ನು ಬಂಧಿಸಿರಲಿಲ್ಲ. ಈ ಬಗ್ಗೆ ನಿನ್ನೆ ಸುಪ್ರೀಂಕೋರ್ಟ್​ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಆಶೀಶ್​ ಮಿಶ್ರಾಗೆ ಸಮನ್ಸ್​ ನೀಡಲಾಗಿದೆ ಎಂದು ಉತ್ತರಪ್ರದೇಶ ಸರ್ಕಾರ ಕೋರ್ಟ್​ಗೆ ಹೇಳಿತ್ತು. ಇದಕ್ಕೆ  ಪ್ರತಿಕ್ರಿಯೆ ನೀಡಿದ್ದ ಸಿಜೆಐ ಎನ್​. ವಿ.ರಮಣ, ಇದು ನಿಜಕ್ಕೂ ಅಚ್ಚರಿ ತರುವ ವಿಷಯ. ಕೊಲೆ ಕೇಸ್​ ದಾಖಲಾದ ಪ್ರತಿಯೊಬ್ಬರಿಗೂ ಹೀಗೆ ಸಮನ್ಸ್​ ಕೊಟ್ಟು ವಿಚಾರಣೆಗೆ ಕರೆಯುತ್ತೀರಾ? ಇನ್ನೂ ಯಾಕೆ ಆರೋಪಿಯನ್ನು ಬಂಧಿಸಿಲ್ಲ? ಈ ಪ್ರಕರಣದ ಆರೋಪಿಗಳನ್ನೂ ಎಲ್ಲ ಆರೋಪಿಗಳಂತೆ ನಡೆಸಿಕೊಳ್ಳಿ ಎಂದು ಕಟುವಾಗಿ ಹೇಳಿತ್ತು.

ಅದಕ್ಕೆ ಉತ್ತರಿಸಿದ್ದ ಸರ್ಕಾರದ ಪರ ಹಿರಿಯ ವಕೀಲ ಹರೀಶ್ ಸಾಲ್ವೆ, ಅಕ್ಟೋಬರ್​ 9ರಂದು ಬೆಳಗ್ಗೆ 11 ಗಂಟೆ ಹೊತ್ತಿಗೆ ಆಶೀಶ್​ ಮಿಶ್ರಾ ವಿಚಾರಣೆ ಹಾಜರಾಗುತ್ತಾರೆ. ಹಾಗೊಮ್ಮೆ ಬಾರದೆ ಇದ್ದರೆ ಖಂಡಿತವಾಗಿಯೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು. ಈ ಮಧ್ಯೆ ಆಶೀಶ್​ ಮಿಶ್ರಾ ನೇಪಾಳಕ್ಕೆ ಹಾರಿದ್ದಾರೆ ಎಂಬ ಸುದ್ದಿಯೂ ಬಂದಿತ್ತು. ಅಂತೂ ಇಂದು ಆಶೀಶ್​ ಮಿಶ್ರಾ ವಿಚಾರಣೆಗೆ ಹಾಜರಾಗಿದ್ದಾರೆ.

ಇದನ್ನೂ ಓದಿ: Video: ಹೈದರಾಬಾದ್​​ನಲ್ಲಿ ಧಾರಾಕಾರ ಮಳೆ; ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಇಬ್ಬರು

KS Bharat: ಕೆಎಸ್ ಭರತ್ ಸಿಕ್ಸ್​ ಸಿಡಿಸಿದ ಕೂಡಲೇ ಡ್ರೆಸ್ಸಿಂಗ್ ರೂಮ್​ನಲ್ಲಿದ್ದ ವಿರಾಟ್ ಕೊಹ್ಲಿ ಮಾಡಿದ್ದೇನು ನೋಡಿ

Published On - 11:11 am, Sat, 9 October 21

Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್
ವಾಲ್ಮೀಕಿ ಸಮುದಾಯದ ಸದಸ್ಯರಿಂದ ನಾಳೆ ತುಮಕೂರಲ್ಲಿ ಬೃಹತ್ ರ‍್ಯಾಲಿ
ವಾಲ್ಮೀಕಿ ಸಮುದಾಯದ ಸದಸ್ಯರಿಂದ ನಾಳೆ ತುಮಕೂರಲ್ಲಿ ಬೃಹತ್ ರ‍್ಯಾಲಿ