AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖಿಂಪುರ ಖೇರಿ ಹಿಂಸಾಚಾರ ಕೇಸ್​; ಇಂದು ವಿಚಾರಣೆಗೆ ಹಾಜರಾದ ಕೇಂದ್ರ ಸಚಿವರ ಪುತ್ರ ಆಶೀಶ್​ ಮಿಶ್ರಾ

Lakhimpur Kheri Violence: ಆಶೀಶ್​ ಮಿಶ್ರಾ ವಿರುದ್ಧ ಪೊಲೀಸರು ಈಗಾಗಲೇ ಕೊಲೆ ಕೇಸ್​ ದಾಖಲಿಸಿದ್ದಾರೆ. ಆದರೆ ಇದುವರೆಗೂ ಅವರನ್ನು ಬಂಧಿಸಿರಲಿಲ್ಲ. ಈ ಬಗ್ಗೆ ನಿನ್ನೆ ಸುಪ್ರೀಂಕೋರ್ಟ್​ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.

ಲಖಿಂಪುರ ಖೇರಿ ಹಿಂಸಾಚಾರ ಕೇಸ್​; ಇಂದು ವಿಚಾರಣೆಗೆ ಹಾಜರಾದ ಕೇಂದ್ರ ಸಚಿವರ ಪುತ್ರ ಆಶೀಶ್​ ಮಿಶ್ರಾ
ಆಶೀಶ್​ ಮಿಶ್ರಾ
TV9 Web
| Edited By: |

Updated on:Oct 09, 2021 | 11:21 AM

Share

ಲಖಿಂಪುರ ಖೇರಿ ಹಿಂಸಾಚಾರ(Lakhimpur Kheri Violence)ಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಇಂದು ಪೊಲೀಸರೆದುರು ವಿಚಾರಣೆಗೆ ಹಾಜರಾಗಿದ್ದಾರೆ. ಮೊದಲ ಬಾರಿಗೆ ಸಮನ್ಸ್​ ನೀಡಿದಾಗ ತಪ್ಪಿಸಿಕೊಂಡಿದ್ದ ಅವರಿಂದು ಉತ್ತರಪ್ರದೇಶದ ಅಪರಾಧ ವಿಭಾಗದ ಶಾಖೆಗೆ ಹಾಜರಾಗಿದ್ದಾರೆ. ಅದರಲ್ಲೂ ಪೊಲೀಸ್​ ಕಚೇರಿಯ ಹಿಂಬಾಗಿಲಿನಿಂದ ಒಳಗೆ ಹೋಗಿದ್ದಾರೆ. ಅವರ ತಂದೆ, ಕೇಂದ್ರ ಸಚಿವ ಅಜಯ್​ ಮಿಶ್ರಾ , ಲಖಿಂಪುರ ಖೇರಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿಯೇ ಇದ್ದಾರೆ. 

ಲಖಿಂಪುರ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ವಾಹನ ಹರಿಸಿದ ಪ್ರಕರಣದಲ್ಲಿ ಆಶೀಶ್​ ಮಿಶ್ರಾ ವಿರುದ್ಧ ಆರೋಪ ಕೇಳಿಬಂದಿದೆ. ಅಲ್ಲದೆ, ಪೊಲೀಸರು ಈಗಾಗಲೇ ಕೊಲೆ ಕೇಸ್​ ದಾಖಲಿಸಿದ್ದಾರೆ. ಆದರೆ ಇದುವರೆಗೂ ಅವರನ್ನು ಬಂಧಿಸಿರಲಿಲ್ಲ. ಈ ಬಗ್ಗೆ ನಿನ್ನೆ ಸುಪ್ರೀಂಕೋರ್ಟ್​ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಆಶೀಶ್​ ಮಿಶ್ರಾಗೆ ಸಮನ್ಸ್​ ನೀಡಲಾಗಿದೆ ಎಂದು ಉತ್ತರಪ್ರದೇಶ ಸರ್ಕಾರ ಕೋರ್ಟ್​ಗೆ ಹೇಳಿತ್ತು. ಇದಕ್ಕೆ  ಪ್ರತಿಕ್ರಿಯೆ ನೀಡಿದ್ದ ಸಿಜೆಐ ಎನ್​. ವಿ.ರಮಣ, ಇದು ನಿಜಕ್ಕೂ ಅಚ್ಚರಿ ತರುವ ವಿಷಯ. ಕೊಲೆ ಕೇಸ್​ ದಾಖಲಾದ ಪ್ರತಿಯೊಬ್ಬರಿಗೂ ಹೀಗೆ ಸಮನ್ಸ್​ ಕೊಟ್ಟು ವಿಚಾರಣೆಗೆ ಕರೆಯುತ್ತೀರಾ? ಇನ್ನೂ ಯಾಕೆ ಆರೋಪಿಯನ್ನು ಬಂಧಿಸಿಲ್ಲ? ಈ ಪ್ರಕರಣದ ಆರೋಪಿಗಳನ್ನೂ ಎಲ್ಲ ಆರೋಪಿಗಳಂತೆ ನಡೆಸಿಕೊಳ್ಳಿ ಎಂದು ಕಟುವಾಗಿ ಹೇಳಿತ್ತು.

ಅದಕ್ಕೆ ಉತ್ತರಿಸಿದ್ದ ಸರ್ಕಾರದ ಪರ ಹಿರಿಯ ವಕೀಲ ಹರೀಶ್ ಸಾಲ್ವೆ, ಅಕ್ಟೋಬರ್​ 9ರಂದು ಬೆಳಗ್ಗೆ 11 ಗಂಟೆ ಹೊತ್ತಿಗೆ ಆಶೀಶ್​ ಮಿಶ್ರಾ ವಿಚಾರಣೆ ಹಾಜರಾಗುತ್ತಾರೆ. ಹಾಗೊಮ್ಮೆ ಬಾರದೆ ಇದ್ದರೆ ಖಂಡಿತವಾಗಿಯೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು. ಈ ಮಧ್ಯೆ ಆಶೀಶ್​ ಮಿಶ್ರಾ ನೇಪಾಳಕ್ಕೆ ಹಾರಿದ್ದಾರೆ ಎಂಬ ಸುದ್ದಿಯೂ ಬಂದಿತ್ತು. ಅಂತೂ ಇಂದು ಆಶೀಶ್​ ಮಿಶ್ರಾ ವಿಚಾರಣೆಗೆ ಹಾಜರಾಗಿದ್ದಾರೆ.

ಇದನ್ನೂ ಓದಿ: Video: ಹೈದರಾಬಾದ್​​ನಲ್ಲಿ ಧಾರಾಕಾರ ಮಳೆ; ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಇಬ್ಬರು

KS Bharat: ಕೆಎಸ್ ಭರತ್ ಸಿಕ್ಸ್​ ಸಿಡಿಸಿದ ಕೂಡಲೇ ಡ್ರೆಸ್ಸಿಂಗ್ ರೂಮ್​ನಲ್ಲಿದ್ದ ವಿರಾಟ್ ಕೊಹ್ಲಿ ಮಾಡಿದ್ದೇನು ನೋಡಿ

Published On - 11:11 am, Sat, 9 October 21

Follow Us
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ