AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖಿಂಪುರ ಖೇರಿ ಹಿಂಸಾಚಾರ ಕೇಸ್​; ಇಂದು ವಿಚಾರಣೆಗೆ ಹಾಜರಾದ ಕೇಂದ್ರ ಸಚಿವರ ಪುತ್ರ ಆಶೀಶ್​ ಮಿಶ್ರಾ

Lakhimpur Kheri Violence: ಆಶೀಶ್​ ಮಿಶ್ರಾ ವಿರುದ್ಧ ಪೊಲೀಸರು ಈಗಾಗಲೇ ಕೊಲೆ ಕೇಸ್​ ದಾಖಲಿಸಿದ್ದಾರೆ. ಆದರೆ ಇದುವರೆಗೂ ಅವರನ್ನು ಬಂಧಿಸಿರಲಿಲ್ಲ. ಈ ಬಗ್ಗೆ ನಿನ್ನೆ ಸುಪ್ರೀಂಕೋರ್ಟ್​ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.

ಲಖಿಂಪುರ ಖೇರಿ ಹಿಂಸಾಚಾರ ಕೇಸ್​; ಇಂದು ವಿಚಾರಣೆಗೆ ಹಾಜರಾದ ಕೇಂದ್ರ ಸಚಿವರ ಪುತ್ರ ಆಶೀಶ್​ ಮಿಶ್ರಾ
ಆಶೀಶ್​ ಮಿಶ್ರಾ
TV9 Web
| Edited By: |

Updated on:Oct 09, 2021 | 11:21 AM

Share

ಲಖಿಂಪುರ ಖೇರಿ ಹಿಂಸಾಚಾರ(Lakhimpur Kheri Violence)ಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಇಂದು ಪೊಲೀಸರೆದುರು ವಿಚಾರಣೆಗೆ ಹಾಜರಾಗಿದ್ದಾರೆ. ಮೊದಲ ಬಾರಿಗೆ ಸಮನ್ಸ್​ ನೀಡಿದಾಗ ತಪ್ಪಿಸಿಕೊಂಡಿದ್ದ ಅವರಿಂದು ಉತ್ತರಪ್ರದೇಶದ ಅಪರಾಧ ವಿಭಾಗದ ಶಾಖೆಗೆ ಹಾಜರಾಗಿದ್ದಾರೆ. ಅದರಲ್ಲೂ ಪೊಲೀಸ್​ ಕಚೇರಿಯ ಹಿಂಬಾಗಿಲಿನಿಂದ ಒಳಗೆ ಹೋಗಿದ್ದಾರೆ. ಅವರ ತಂದೆ, ಕೇಂದ್ರ ಸಚಿವ ಅಜಯ್​ ಮಿಶ್ರಾ , ಲಖಿಂಪುರ ಖೇರಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿಯೇ ಇದ್ದಾರೆ. 

ಲಖಿಂಪುರ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ವಾಹನ ಹರಿಸಿದ ಪ್ರಕರಣದಲ್ಲಿ ಆಶೀಶ್​ ಮಿಶ್ರಾ ವಿರುದ್ಧ ಆರೋಪ ಕೇಳಿಬಂದಿದೆ. ಅಲ್ಲದೆ, ಪೊಲೀಸರು ಈಗಾಗಲೇ ಕೊಲೆ ಕೇಸ್​ ದಾಖಲಿಸಿದ್ದಾರೆ. ಆದರೆ ಇದುವರೆಗೂ ಅವರನ್ನು ಬಂಧಿಸಿರಲಿಲ್ಲ. ಈ ಬಗ್ಗೆ ನಿನ್ನೆ ಸುಪ್ರೀಂಕೋರ್ಟ್​ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಆಶೀಶ್​ ಮಿಶ್ರಾಗೆ ಸಮನ್ಸ್​ ನೀಡಲಾಗಿದೆ ಎಂದು ಉತ್ತರಪ್ರದೇಶ ಸರ್ಕಾರ ಕೋರ್ಟ್​ಗೆ ಹೇಳಿತ್ತು. ಇದಕ್ಕೆ  ಪ್ರತಿಕ್ರಿಯೆ ನೀಡಿದ್ದ ಸಿಜೆಐ ಎನ್​. ವಿ.ರಮಣ, ಇದು ನಿಜಕ್ಕೂ ಅಚ್ಚರಿ ತರುವ ವಿಷಯ. ಕೊಲೆ ಕೇಸ್​ ದಾಖಲಾದ ಪ್ರತಿಯೊಬ್ಬರಿಗೂ ಹೀಗೆ ಸಮನ್ಸ್​ ಕೊಟ್ಟು ವಿಚಾರಣೆಗೆ ಕರೆಯುತ್ತೀರಾ? ಇನ್ನೂ ಯಾಕೆ ಆರೋಪಿಯನ್ನು ಬಂಧಿಸಿಲ್ಲ? ಈ ಪ್ರಕರಣದ ಆರೋಪಿಗಳನ್ನೂ ಎಲ್ಲ ಆರೋಪಿಗಳಂತೆ ನಡೆಸಿಕೊಳ್ಳಿ ಎಂದು ಕಟುವಾಗಿ ಹೇಳಿತ್ತು.

ಅದಕ್ಕೆ ಉತ್ತರಿಸಿದ್ದ ಸರ್ಕಾರದ ಪರ ಹಿರಿಯ ವಕೀಲ ಹರೀಶ್ ಸಾಲ್ವೆ, ಅಕ್ಟೋಬರ್​ 9ರಂದು ಬೆಳಗ್ಗೆ 11 ಗಂಟೆ ಹೊತ್ತಿಗೆ ಆಶೀಶ್​ ಮಿಶ್ರಾ ವಿಚಾರಣೆ ಹಾಜರಾಗುತ್ತಾರೆ. ಹಾಗೊಮ್ಮೆ ಬಾರದೆ ಇದ್ದರೆ ಖಂಡಿತವಾಗಿಯೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು. ಈ ಮಧ್ಯೆ ಆಶೀಶ್​ ಮಿಶ್ರಾ ನೇಪಾಳಕ್ಕೆ ಹಾರಿದ್ದಾರೆ ಎಂಬ ಸುದ್ದಿಯೂ ಬಂದಿತ್ತು. ಅಂತೂ ಇಂದು ಆಶೀಶ್​ ಮಿಶ್ರಾ ವಿಚಾರಣೆಗೆ ಹಾಜರಾಗಿದ್ದಾರೆ.

ಇದನ್ನೂ ಓದಿ: Video: ಹೈದರಾಬಾದ್​​ನಲ್ಲಿ ಧಾರಾಕಾರ ಮಳೆ; ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಇಬ್ಬರು

KS Bharat: ಕೆಎಸ್ ಭರತ್ ಸಿಕ್ಸ್​ ಸಿಡಿಸಿದ ಕೂಡಲೇ ಡ್ರೆಸ್ಸಿಂಗ್ ರೂಮ್​ನಲ್ಲಿದ್ದ ವಿರಾಟ್ ಕೊಹ್ಲಿ ಮಾಡಿದ್ದೇನು ನೋಡಿ

Published On - 11:11 am, Sat, 9 October 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ