AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lakhimpur Kheri Violence: ಕೇಂದ್ರ ಸಚಿವರ ಪುತ್ರ ಆಶೀಶ್​ ಮಿಶ್ರಾಗೆ ಜಾಮೀನು ನಿರಾಕರಿಸಿದ ಕೋರ್ಟ್​; ಇನ್ನಿಬ್ಬರ ಬಂಧನ

ಲಖಿಂಪುರ ಖೇರಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ರೈತರ ಮೇಲೆ ಎರಡು ವಾಹನಗಳು ಹರಿದು, ಇಬ್ಬರು ರೈತರು ಮೃತಪಟ್ಟಿದ್ದರು. ಬಳಿಕ ನಡೆದ ಹಿಂಸಾಚಾರದಲ್ಲಿ 8 ಜನರು ಸಾವನ್ನಪ್ಪಿದ್ದರು.

Lakhimpur Kheri Violence: ಕೇಂದ್ರ ಸಚಿವರ ಪುತ್ರ ಆಶೀಶ್​ ಮಿಶ್ರಾಗೆ ಜಾಮೀನು ನಿರಾಕರಿಸಿದ ಕೋರ್ಟ್​; ಇನ್ನಿಬ್ಬರ ಬಂಧನ
ಆಶೀಶ್​ ಮಿಶ್ರಾ
TV9 Web
| Updated By: Lakshmi Hegde|

Updated on: Oct 14, 2021 | 1:47 PM

Share

ಲಖಿಂಪುರ ಖೇರಿ: ಇಲ್ಲಿನ ಹಿಂಸಾಚಾರದಲ್ಲಿ (Lakhimpur Kheri violence) ಪ್ರಮುಖ ಆರೋಪಿಯಾಗಿರುವ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ (Ashish Mishra)ರಿಗೆ ಜಾಮೀನು ನೀಡಲು ಸೆಷನ್ಸ್​ ಕೋರ್ಟ್​ ನಿರಾಕರಿಸಿದೆ. ಹಾಗೇ, ಅಕ್ಟೋಬರ್​ 3ರ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಂದು ಇನ್ನಿಬ್ಬರನ್ನೂ ಬಂಧಿಸಿದ್ದಾರೆ.  ಘಟನೆಗೆ ಸಂಬಂಧಪಟ್ಟಂತೆ ಬಂಧಿತರಾಗಿರುವ ಆಶೀಶ್​ ಮಿಶ್ರಾ ಮತ್ತು ಅವರ ಸಹಚರರಾರ ಆಶಿಶ್​ ಪಾಂಡೆ  ಅವರ ಅರ್ಜಿ ವಿಚಾರಣೆ ಇಂದು ಇತ್ತು. ಆದರೆ ಸೆಷನ್ಸ್​ ಕೋರ್ಟ್​​​ನ ಮುಖ್ಯ ಮ್ಯಾಜಿಸ್ಟ್ರೇಟ್​ ಚಿಂತಾರಾಮ್​ ಜಾಮೀನು ನಿರಾಕರಿಸಿದ್ದಾರೆ ಎಂದು ಪ್ರಾಸಿಕ್ಯೂಷನ್​ ಹಿರಿಯ ಅಧಿಕಾರಿ ಎಸ್​.ಪಿ.ಯಾದವ್​ ತಿಳಿಸಿದ್ದಾರೆ.  

ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ವಾಹನ ಹರಿದು ರೈತರು ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಆಶೀಶ್​ ಮಿಶ್ರಾರನ್ನು ಅಕ್ಟೋಬರ್​9ರಂದು ರಾಜ್ಯದ ವಿಶೇಷ ತನಿಖಾ ತಂಡ (SIT) ಬಂಧಿಸಿದೆ.  ಅದರೊಂದಿಗೆ ಎಸ್​ಐಟಿ ಎದುರು ವಿಚಾರಣೆಗೆ ಹಾಜರಾಗಿದ್ದ ಅಂಕಿತ್ ದಾಸ್​​ ಮತ್ತು ಲತೀಫ್​ ಕಾಳೆ ಎಂಬುವರನ್ನೂ ಬಂಧಿಸಲಾಗಿದ್ದು, ಅವರನ್ನು 14ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.  ಅಲ್ಲಿಗೆ ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಆಶೀಶ್​ ಮಿಶ್ರಾ, ಆಶೀಶ್​ ಪಾಂಡೆ, ಲವಕುಶ್​​, ಶೇಖರ್​ ಭಾರ್ತಿ, ಅಂಕಿತ್​ ಮತ್ತು ಲತೀಫ್​ ಕಾಳೆ ಬಂಧಿತರಾಗಿದ್ದು, ಸದ್ಯಕ್ಕಂತೂ ಯಾರಿಗೂ ಜಾಮೀನು ಸಿಕ್ಕಿಲ್ಲ.

ಲಖಿಂಪುರ ಖೇರಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ರೈತರ ಮೇಲೆ ಎರಡು ವಾಹನಗಳು ಹರಿದು, ಇಬ್ಬರು ರೈತರು ಮೃತಪಟ್ಟಿದ್ದರು. ಅದಾದ ಬಳಿಕ ನಡೆದ ಹಿಂಸಾಚಾರದಲ್ಲಿ ಒಟ್ಟು 8 ಜನರು ಸಾವನ್ನಪ್ಪಿದ್ದರು. ಹೀಗೆ ರೈತರ ಮೇಲೆ ಹರಿದ ವಾಹನದಲ್ಲಿ ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಇದ್ದರು ಎಂದು ಸ್ಥಳದಲ್ಲಿದ್ದ ರೈತರು ಪ್ರತಿಪಾದಿಸಿದ್ದರು. ಆದರೆ ನಾನು ಇರಲಿಲ್ಲ ಎಂದು ಆಶೀಶ್​ ಮಿಶ್ರಾ ಹೇಳಿಕೊಂಡಿದ್ದರು.  ಆಶೀಶ್​ ಮಿಶ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದರೂ ಅವರ ಬಂಧನ ಆಗಿರಲಿಲ್ಲ. ನಂತರ ಪ್ರಕರಣವನ್ನು ಸುಮೊಟೊ ವಿಚಾರಣೆಗೆ ಎತ್ತಿಕೊಂಡಿದ್ದ ಸುಪ್ರೀಂಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಕೊಲೆ ಕೇಸ್​ ದಾಖಲಾದ ಆರೋಪಿಗೆ ಸಮನ್ಸ್​ ನೀಡುವ ಅಗತ್ಯವೇನಿದೆ? ಉಳಿದವರಂತೆ ಅವರನ್ನೂ ನಡೆಸಿಕೊಳ್ಳಿ ಎಂದು ಹೇಳಿತ್ತು. ಅದಾದ ಮರುದಿನವೇ ಆಶೀಶ್​ ಮಿಶ್ರಾ ಎಸ್​ಐಟಿ ಎದುರು ಹಾಜರಾಗಿ, ವಿಚಾರಣೆ ಎದುರಿಸಿದ್ದರು. ನಂತರ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ದಸರಾ ಸಂಭ್ರಮ ಕಿತ್ತುಕೊಂಡ ಮಳೆ; ಅಬ್ಬಯ್ಯ ಲೇಔಟ್‌ನ ಮನೆಗಳಿಗೆ ನುಗ್ಗಿದ ಮಳೆ ನೀರು, ಮುಳುಗಿದ ವಾಹನಗಳು

Nirmala Sitharaman In US: ಭಾರತದಲ್ಲಿ ಹೂಡಿಕೆ ಮಾಡಲು ಅಮೆರಿಕದ ಸಿಇಒಗಳಿಗೆ ನಿರ್ಮಲಾ ಸೀತಾರಾಮನ್ ಆಹ್ವಾನ

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ