AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ ಆಶೀಶ್​ ಮಿಶ್ರಾಗೆ ಪೊಲೀಸರಿಂದ ಸಮನ್ಸ್​

ಲಖಿಂಪುರ ಖೇರಿಯಲ್ಲಿ ರೈತರತ್ತ ಕಾರು ಹರಿದ ಪ್ರಕರಣದಲ್ಲಿ ತಮ್ಮ ಪಾತ್ರವೇನೂ ಇಲ್ಲ ಎಂದು ಆಶೀಶ್​ ಮಿಶ್ರಾ ಹೇಳಿಕೊಂಡಿದ್ದಾರೆ. ನಾನು ಘಟನೆ ನಡೆದಾಗ ಲಖಿಂಪುರದಲ್ಲಿ ಇರಲಿಲ್ಲ ಎಂದೂ ಹೇಳಿದ್ದಾರೆ.

ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ ಆಶೀಶ್​ ಮಿಶ್ರಾಗೆ ಪೊಲೀಸರಿಂದ ಸಮನ್ಸ್​
ಆಶೀಶ್​ ಮಿಶ್ರಾ
TV9 Web
| Edited By: |

Updated on:Oct 07, 2021 | 5:44 PM

Share

ಲಖಿಂಪುರ ಖೇರಿ ಹಿಂಸಾಚಾರ (Lakhimpur Kheri violence) ಪ್ರಕರಣದಲ್ಲಿ ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ (Ashish Mishra)ರಿಗೆ ಉತ್ತರಪ್ರದೇಶ ಪೊಲೀಸರು ಇಂದು ಸಮನ್ಸ್​ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.  ಇನ್ನು ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಈಗಾಗಲೇ ಆಶೀಶ್​ ಮಿಶ್ರಾ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಅಂದು ರೈತರಿಗೆ ಡಿಕ್ಕಿ ಹೊಡೆದ ಬೆಂಗಾವಲು ವಾಹನದಲ್ಲಿ ಇದ್ದ ಆಶೀಶ್​ ಪಾಂಡೆ ಮತ್ತು ಲವಕುಶ್​ ಎಂಬುವರನ್ನು ಇಂದು ಬಂಧಿಸಲಾಗಿದೆ. ಇವರಿಬ್ಬರೂ ಆಶೀಶ್​ ಮಿಶ್ರಾ ಆಪ್ತರೂ ಹೌದು ಎಂದು ಲಖನೌ ರೇಂಜ್​​ನ ಐಜಿ ಲಕ್ಷ್ಮೀ ಸಿಂಗ್​ ತಿಳಿಸಿದ್ದಾರೆ.  

ರೈತರಿಗೆ ವಾಹನಗಳು ಡಿಕ್ಕಿ ಹೊಡೆದ ಸ್ಥಳದಿಂದ ಕಿಯೋಸ್ಕ್​ ಯಂತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಅದಕ್ಕೆ ಸಂಬಂಧಪಟ್ಟ ವಿಧಿವಿಜ್ಞಾನ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಆಶೀಶ್​ ಮಿಶ್ರಾ ನಾಪತ್ತೆಯಾಗಿದ್ದು, ಅವರನ್ನು ಹುಡುಕುವ ಕೆಲಸ ಆಗುತ್ತಿದೆ ಎಂದೂ ಲಕ್ಷ್ಮೀ ಸಿಂಗ್​ ಮಾಹಿತಿ ನೀಡಿದ್ದಾರೆ. ರೈತರಿಗೆ ಡಿಕ್ಕಿ ಹೊಡೆದ ಕಾರಿನಲ್ಲಿ ಆಶೀಶ್​ ಮಿಶ್ರಾ ಇದ್ದರು ಮತ್ತು ಅವರು ರೈತರತ್ತ ಗುಂಡನ್ನೂ ಹಾರಿಸಿದ್ದಾರೆ ಎಂಬುದು ಎಫ್​ಐಆರ್​ನಲ್ಲಿ ದಾಖಲಾಗಿದೆ. ಸದ್ಯಕ್ಕಂತೂ ಅವರು ಕಾಣಿಸುತ್ತಿಲ್ಲ. ಶೋಧ ಮುಂದುವರಿಸುತ್ತೇವೆ ಎಂದೂ ಲಕ್ಷ್ಮೀಸಿಂಗ್​ ಹೇಳಿದ್ದಾರೆ.

ಆರೋಪ ನಿರಾಕರಿಸಿರುವ ಆಶೀಶ್​ ಮಿಶ್ರಾ ಲಖಿಂಪುರ ಖೇರಿಯಲ್ಲಿ ರೈತರತ್ತ ಕಾರು ಹರಿದ ಪ್ರಕರಣದಲ್ಲಿ ತಮ್ಮ ಪಾತ್ರವೇನೂ ಇಲ್ಲ ಎಂದು ಆಶೀಶ್​ ಮಿಶ್ರಾ ಹೇಳಿಕೊಂಡಿದ್ದಾರೆ. ನಾನು ಘಟನೆ ನಡೆದಾಗ ಲಖಿಂಪುರ ಖೇರಿಯಲ್ಲಿ ಇರಲಿಲ್ಲ.  ಬೆಳಗ್ಗೆ 9ಗಂಟೆಯಿಂದಲೂ ಬೇರೆ ಒಂದು ಕಾರ್ಯಕ್ರಮದಲ್ಲಿ ಇದ್ದೆ ಎಂದಿದ್ದಾರೆ. ಹಾಗೇ, ಕೇಂದ್ರ ಸಚಿವ ಅಜಯ್​ ಮಿಶ್ರಾ ಕೂಡ ಇದನ್ನೇ ಹೇಳಿದ್ದಾರೆ. ಹಾಗೂ ಒಮ್ಮೆ ನನ್ನ ಪುತ್ರ ಇರುವುದು ಸಾಬೀತಾದರೆ ತಾವು ರಾಜೀನಾಮೆ ನೀಡುವುದಾಗಿಯೂ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಹರ್ಯಾಣದಲ್ಲೂ ಪ್ರತಿಭಟನಾ ನಿರತ ರೈತರತ್ತ ನುಗ್ಗಿದ ಕಾರು; ಪೊಲೀಸರಿಗೆ ದೂರು ನೀಡಿದ ಗಾಯಾಳು ರೈತ

ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವರ ಪುತ್ರನ ಆಪ್ತರಿಬ್ಬರ ಬಂಧನ !

Published On - 5:34 pm, Thu, 7 October 21

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!