Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Political Crisis: ಅಶೋಕ್ ಗೆಹ್ಲೋಟ್ ಇಂದು ಸೋನಿಯಾ ಗಾಂಧಿಯನ್ನು ಭೇಟಿ ಮಾಡುವ ಸಾಧ್ಯತೆ

ಅಶೋಕ್ ಗೆಹ್ಲೋಟ್ ಇಂದು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಎಂದು ವರದಿ ಮಾಡಲಾಗಿದೆ. 

Rajasthan Political Crisis: ಅಶೋಕ್ ಗೆಹ್ಲೋಟ್ ಇಂದು ಸೋನಿಯಾ ಗಾಂಧಿಯನ್ನು ಭೇಟಿ ಮಾಡುವ ಸಾಧ್ಯತೆ
Ashok GehlotImage Credit source: NDTV
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 28, 2022 | 3:46 PM

ರಾಜಸ್ಥಾನ ರಾಜಕೀಯ ಬಿಕ್ಕಟ್ಟು ನಡುವೆ ಅಶೋಕ್ ಗೆಹ್ಲೋಟ್ ಇಂದು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಎಂದು ವರದಿ ಮಾಡಲಾಗಿದೆ. ರಾಜಸ್ಥಾನ ಮುಖ್ಯಮಂತ್ರಿ ಇಂದು ತಮ್ಮ ಪ್ರಮುಖ ಆಪ್ತರನ್ನು ಭೇಟಿ ಮಾಡಿದರು. ಸೋನಿಯಾ ಗಾಂಧಿ ಭೇಟಿಗಾಗಿ ಅವರು ದೆಹಲಿಗೆ ತೆರಳುವ ಸಾಧ್ಯತೆಯಿದೆ.

ಬಂಡಾಯ ಎದ್ದಿರುವ 90ಕ್ಕೂ ಹೆಚ್ಚು ರಾಜಸ್ಥಾನದ ಶಾಸಕರನ್ನು ಮತ್ತೆ ಒಗ್ಗೂಡಿಸಲು ಅವರ ಮೂವರು ಆಪ್ತ ಶಾಸಕರಿಗೆ ಪಕ್ಷವು ನೋಟಿಸ್ ನೀಡಿದ ಒಂದು ದಿನದ ನಂತರ ಈ ಬೆಳವಣೆಗೆ ನಡೆದಿದೆ. ರಾಜಸ್ಥಾನದ ಸಚಿವರಾದ ಶಾಂತಿ ಧರಿವಾಲ್ ಮತ್ತು ಮಹೇಶ್ ಜೋಶಿ ಮತ್ತು ಧರ್ಮೇಂದ್ರ ರಾಥೋಡ್ ಅವರ ಗಂಭೀರ ಅಶಿಸ್ತಿನಗಾಗಿ ನೋಟಿಸ್ ನೀಡಿದೆ. 10 ದಿನಗಳ ಒಳಗಾಗಿ ವಿವರ ನೀಡುವಂತೆ ಹೇಳಿದೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ತಯಾರಾಗಿರುವ ಅಶೋಕ್ ಗೆಹ್ಲೋಟ್ ಅವರ ಸ್ಥಾನವನ್ನು ರಾಜಸ್ಥಾನದ ಮುಖ್ಯಮಂತ್ರಿಯಾಗಿ ಅವರ ಪ್ರತಿಸ್ಪರ್ಧಿ ಸಚಿನ್ ಪೈಲಟ್ ನೇಮಿಸುತ್ತಾರೆ ಎಂಬ ವಿಚಾರವಾಗಿ ಶಾಸಕರು ಭಾನುವಾರ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಆದರೆ ಪಕ್ಷದ ಉನ್ನತ ಮೂಲಗಳ ಪ್ರಕಾರ 71 ವರ್ಷದ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಸ್ಪರ್ಧೆಯಲ್ಲಿದ್ದಾರೆ ಎಂದು ಹೇಳಿದರು. ನಿನ್ನೆ ಸಂಜೆ, ಕಾಂಗ್ರೆಸ್ ನಾಯಕರಾದ ಅಂಬಿಕಾ ಸೋನಿ ಮತ್ತು ಆನಂದ್ ಶರ್ಮಾ ಅವರು ಸೋನಿಯಾ ಗಾಂಧಿಯವರೊಂದಿಗೆ ಸಭೆಯ ನಂತರ ಅಶೋಕ್ ಗೆಹ್ಲೋಟ್ ಅವರೊಂದಿಗೆ ಸೃಷ್ಟಿಸಿದ ಬಿಕ್ಕಟ್ಟನ್ನು ಪರಿಹರಿಸಲು ಮಾತನಾಡಿದ್ದಾರೆ.

ರಾಜಸ್ಥಾನದ ಮುಖ್ಯಮಂತ್ರಿ ಹುದ್ದೆಯನ್ನು ಬಿಟ್ಟುಕೊಡಲು ಗೆಹ್ಲೋಟ್ ನಿರಾಕರಿಸಿರುವುದು ಬಿಕ್ಕಟ್ಟಿನ ತಿರುಳಾಗಿದೆ. ಕಾಂಗ್ರೆಸ್‌ನ ಒಬ್ಬ ವ್ಯಕ್ತಿ, ಒಂದು ಹುದ್ದೆ ಎಂಬ ನೀತಿಗೆ ಅನುಗುಣವಾಗಿ ದ್ವಿಪಾತ್ರಕ್ಕೆ ಅವಕಾಶ ನೀಡುವುದಿಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ ನಂತರ ಶ್ರೀ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸ್ಥಾನವನ್ನು ತ್ಯಜಿಸಲು ಒಪ್ಪಿಕೊಂಡಿದ್ದರು. ಇದೀಗ ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನಿಂದ ಕಾಂಗ್ರೆಸ್ ಅನೇಕ ಗೊಂದಲುಗಳು ಸೃಷ್ಟಿಯಾಗಿದೆ. ಇದೀಗ ಈ ಬಗ್ಗೆ ಸೋನಿಯಾ ಗಾಂಧಿಯವರೊಂದಿಗೆ ಸಭೆ ನಡೆಸಬಹುದು ಎಂದು ಹೇಳಲಾಗಿದೆ.

ಭಾನುವಾರ ಗೆಹ್ಲೋಟ್ ಅವರ ಮನೆಯಲ್ಲಿ ನಡೆದ ಶಾಸಕರ ಸಭೆಯಲ್ಲಿ ರಾಜಸ್ಥಾನದ ಪರಿವರ್ತನೆಯನ್ನು ಔಪಚಾರಿಕ ಎಂದು ಘೋಷಿಸಲಾಯಿತು. ಸಚಿನ್ ಪೈಲಟ್ ಸೇರಿದಂತೆ 107 ಕಾಂಗ್ರೆಸ್ ಶಾಸಕರ ಪೈಕಿ 25 ಮಂದಿ ಮಾತ್ರ ಹಾಜರಾಗಿದ್ದರು. ಶಾಸಕರು ಗಾಂಧಿ ಕುಟುಂಬ ತೆಗೆದುಕೊಂಡ ನಿರ್ಧಾರವನ್ನು ಬಹಿರಂಗವಾಗಿ ಧಿಕ್ಕರಿಸಿದರು ಮತ್ತು ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯ ನಂತರವೇ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಷರತ್ತುಗಳನ್ನು ಹಾಕಿದರು. ಗೆಹ್ಲೋಟ್ ಕಾಂಗ್ರೆಸ್ ಮುಖ್ಯಸ್ಥರಾದರೆ, ಅದು ಹಿತಾಸಕ್ತಿ ಸಂಘರ್ಷವನ್ನು ರೂಪಿಸುತ್ತದೆ ಏಕೆಂದರೆ ಅವರು ರಾಜಸ್ಥಾನದಲ್ಲಿ ತಮ್ಮದೇ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಸ್ವತಃ ಅಧಿಕಾರವನ್ನು ಹೊಂದಿರುತ್ತಾರೆ.

Published On - 12:25 pm, Wed, 28 September 22

ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ