AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶೋಕ್ ಗೆಹ್ಲೋಟ್ ರಾಜಸ್ಥಾನ ಸರ್ಕಾರವನ್ನು ಭ್ರಷ್ಟಾಚಾರದ ಅಡ್ಡಾ ಮಾಡಿದ್ದಾರೆ: ಅಮಿತ್ ಶಾ

ಭ್ರಷ್ಟಾಚಾರ ಹಣದಿಂದ ಬೊಕ್ಕಸವನ್ನು ತುಂಬುವಲ್ಲಿ ಸಚಿನ್ ಪೈಲಟ್ ಅವರ ಕೊಡುಗೆಗಿಂತ ಅಶೋಕ್ ಗೆಹ್ಲೋಟ್‌ ಕೊಡುಗೆ ಜಾಸ್ತಿ ಇರುವುದರಿಂದ ಕಾಂಗ್ರೆಸ್ ಯಾವಾಗಲೂ ಮುಖ್ಯಮಂತ್ರಿ ಗೆಹ್ಲೋಟ್​​ಗೆ ಆದ್ಯತೆ ನೀಡುತ್ತದೆ ಎಂದ ಅಮಿತ್ ಶಾ.

ಅಶೋಕ್ ಗೆಹ್ಲೋಟ್ ರಾಜಸ್ಥಾನ ಸರ್ಕಾರವನ್ನು ಭ್ರಷ್ಟಾಚಾರದ ಅಡ್ಡಾ ಮಾಡಿದ್ದಾರೆ: ಅಮಿತ್ ಶಾ
ಅಮಿತ್ ಶಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Apr 15, 2023 | 6:42 PM

Share

ಭರತ್‌ಪುರ: ರಾಜಸ್ಥಾನದಲ್ಲಿ (Rajasthan) ಆಂತರಿಕ ಕಲಹದ ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress) ವಿರುದ್ಧ ಟೀಕಾ ಪ್ರಹಾರ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) “ಭ್ರಷ್ಟಾಚಾರ” ಹಣದಿಂದ  ಬೊಕ್ಕಸವನ್ನು ತುಂಬುವಲ್ಲಿ ಸಚಿನ್ ಪೈಲಟ್ ಅವರ ಕೊಡುಗೆಗಿಂತ ಅಶೋಕ್ ಗೆಹ್ಲೋಟ್‌ ಕೊಡುಗೆ ಜಾಸ್ತಿ ಇರುವುದರಿಂದ ಕಾಂಗ್ರೆಸ್ ಯಾವಾಗಲೂ ಮುಖ್ಯಮಂತ್ರಿ ಗೆಹ್ಲೋಟ್ ಗೆ ಆದ್ಯತೆ ನೀಡುತ್ತದೆ ಎಂದು ಶನಿವಾರ ಹೇಳಿದ್ದಾರೆ. ಪೈಲಟ್ ಯಾವುದೇ ನೆಪದಲ್ಲಿ ಧರಣಿ ಕುಳಿತಿದ್ದಾರೆ, ಆದರೆ ಅವರಿಗೆ ಬೆಂಬಲ ಇರುವುದಿಲ್ಲ. ಏಕೆಂದರೆ ಕಾಂಗ್ರೆಸ್ ಪಕ್ಷದ ಬೊಕ್ಕಸವನ್ನು ತುಂಬುವಲ್ಲಿ ಸಚಿನ್ ಪೈಲಟ್ ಕೊಡುಗೆ ಕಡಿಮೆ ಮತ್ತು ಗೆಹ್ಲೋಟ್ ಅವರ ಕೊಡುಗೆ ಹೆಚ್ಚು ಎಂದು ಭರತ್‌ಪುರದಲ್ಲಿ ಬೂತ್ ಮಟ್ಟದ ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅಮಿತ್ ಶಾ ಹೇಳಿದರು.

ಗೆಹ್ಲೋಟ್ ಅವರು ರಾಜಸ್ಥಾನ ಸರ್ಕಾರವನ್ನು ಭ್ರಷ್ಟಾಚಾರದ ಅಡ್ಡಾ ಮಾಡಿದ್ದು, ರಾಜ್ಯವನ್ನು ಲೂಟಿ ಮಾಡಿದ್ದಾರೆ. ಈ ಭ್ರಷ್ಟಾಚಾರದ ಹಣ ಕಾಂಗ್ರೆಸ್ ಪಕ್ಷದ ಬೊಕ್ಕಸಕ್ಕೆ ಹೋಗಿದೆ ಎಂದು ಶಾ ಆರೋಪಿಸಿದ್ದಾರೆ. 2008 ರ ಜೈಪುರ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸಿದ ನಂತರ, ವೋಟ್ ಬ್ಯಾಂಕ್ ರಾಜಕೀಯದ ಕಾರಣ ಕಾಂಗ್ರೆಸ್ ಸರ್ಕಾರವು ಹೈಕೋರ್ಟ್‌ನಲ್ಲಿ ಸರಿಯಾದ ವಾದವನ್ನು ಮಂಡಿಸಲಿಲ್ಲ ಎಂದು ಅಮಿತ್ ಶಾ ಆರೋಪಿಸಿದ್ದಾರೆ.

ಸ್ಫೋಟ ಸಂತ್ರಸ್ತರ ಸಾವಿನ ಬಗ್ಗೆ ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ರಾಜಸ್ಥಾನದಲ್ಲಿ 3-ಡಿ ಸರ್ಕಾರವಿದೆ. ಮೂರು ಡಿಎಸ್ ಎಂದರೆ ದಂಗೆ (ಗಲಭೆಗಳು), ಮಹಿಳೆಯರೊಂದಿಗೆ ದುರ್ವರ್ತನೆ ಮತ್ತು ‘ದಲಿತ’ ದೌರ್ಜನ್ಯಗಳು.

ಇದನ್ನೂ ಓದಿ:ಉತ್ತರ ಪ್ರದೇಶ: ಮಗ ಅಸಾದ್ ಅಹ್ಮದ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿಲ್ಲ ಅತೀಕ್ ಅಹ್ಮದ್

ಜನರು ಈ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ಹೊರದಬ್ಬುತ್ತಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 2/3 ಬಹುಮತದೊಂದಿಗೆ ಸರ್ಕಾರವನ್ನು ರಚಿಸುತ್ತದೆ. ರಾಜಸ್ಥಾನದಲ್ಲಿ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಎಲ್ಲಾ 25 ಸ್ಥಾನಗಳನ್ನು ಗೆಲ್ಲುತ್ತದೆ ಎಂದಿದ್ದಾರೆ ಅಮಿತ್ ಶಾ ಮೋದಿ ಸರ್ಕಾರದ ಕಾರ್ಯವೈಖರಿ, ಪಕ್ಷದ ಸಿದ್ಧಾಂತ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯ ಆಧಾರದ ಮೇಲೆ ಬಿಜೆಪಿ ಚುನಾವಣೆಗೆ ಸ್ಪರ್ಧಿಸಲಿದೆ ಎಂದು ಅವರು ಹೇಳಿದ್ದಾರೆ. ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜಸ್ಥಾನದ ಇತಿಹಾಸದಲ್ಲಿ ಅತ್ಯಂತ ಭ್ರಷ್ಟ ಸರ್ಕಾರಗಳಲ್ಲಿ ಒಂದು. ಜನರು ಬೇಸತ್ತಿದ್ದಾರೆ ಎಂದಿದ್ದಾರೆ ಅಮಿತ್ ಶಾ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:39 pm, Sat, 15 April 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?