ಅಶೋಕ್ ಗೆಹ್ಲೋಟ್​ ಪುತ್ರ ವೈಭವ್​ಗೆ ಇಡಿ ಸಮನ್ಸ್​, ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ನಿವಾಸದ ಮೇಲೆ ಇಡಿ ದಾಳಿ

ಆರ್​ಪಿಎಸ್​ಸಿ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಸ್ರಾ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. ರಾಜಸ್ಥಾನ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ರಾಜಸ್ಥಾನದ 11 ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ಜೈಪುರದಲ್ಲಿರುವ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಗೋವಿಂದ್ ಸಿಂಗ್ ದೋತಸ್ರಾ ಅವರ ಅಧಿಕೃತ ನಿವಾಸ ಮತ್ತು ಅವರಿಗೆ ಸಂಬಂಧಿಸಿದ ಕೆಲವು ಸ್ಥಳಗಳು ಕೂಡ ಇದರಲ್ಲಿ ಸೇರಿದೆ.

ಅಶೋಕ್ ಗೆಹ್ಲೋಟ್​ ಪುತ್ರ ವೈಭವ್​ಗೆ ಇಡಿ ಸಮನ್ಸ್​, ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ನಿವಾಸದ ಮೇಲೆ ಇಡಿ ದಾಳಿ
ಗೋವಿಂದ್-ವೈಭವ್
Image Credit source: Indian Express

Updated on: Oct 26, 2023 | 11:29 AM

ಆರ್​ಪಿಎಸ್​ಸಿ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಸ್ರಾ(Govind Singh Dotasra) ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.  ವಿದೇಶಿ ವಿನಿಮಯ ನಿಯಮ ಉಲ್ಜಲಂಘನೆಗೆ ಸಂಬಂಧಿಸಿದಂತೆ  ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್  ಪುತ್ರ ವೈಭವ್‌ಗೆ ತನಿಖಾ ಸಂಸ್ಥೆ ಸಮನ್ಸ್ ಜಾರಿ ಮಾಡಿದೆ.

ರಾಜಸ್ಥಾನ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ರಾಜಸ್ಥಾನದ 11 ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ಜೈಪುರದಲ್ಲಿರುವ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಗೋವಿಂದ್ ಸಿಂಗ್ ದೋತಸ್ರಾ ಅವರ ಅಧಿಕೃತ ನಿವಾಸ ಮತ್ತು ಅವರಿಗೆ ಸಂಬಂಧಿಸಿದ ಕೆಲವು ಸ್ಥಳಗಳು ಕೂಡ ಇದರಲ್ಲಿ ಸೇರಿದೆ.

ದೆಹಲಿ ಮತ್ತು ಜೈಪುರದ ಇಡಿ ತಂಡಗಳ ಜೊತೆಗೆ ಕೇಂದ್ರ ಭದ್ರತಾ ಪಡೆ ಅಧಿಕಾರಿಗಳು ಕೂಡ ಸ್ಥಳದಲ್ಲಿ ಹಾಜರಿದ್ದರು. ಇಡಿ ತಂಡವು ದೋಟಸಾರಾ ಅವರ ಜೈಪುರ ನಿವಾಸ ಮತ್ತು ಸಿಕಾರ್‌ನಲ್ಲಿರುವ ಅವರ ವೈಯಕ್ತಿಕ ನಿವಾಸಕ್ಕೂ ತಲುಪಿದೆ.

ಸ್ವತಂತ್ರ ಶಾಸಕರ ಮೇಲೂ ಇಡಿ ಕ್ರಮ:
ಸ್ವತಂತ್ರ ಶಾಸಕ ಹಾಗೂ ಮಹುವಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಓಂ ಪ್ರಕಾಶ್ ಹೂಡ್ಲಾ ಅವರ ಏಳು ಸ್ಥಳಗಳ ಮೇಲೂ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ವಿಷಯವೂ ಕಾಗದ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿರಬಹುದು.

ಮತ್ತಷ್ಟು ಓದಿ: ಭ್ರಷ್ಟಾಚಾರ ಆರೋಪ: ಪಶ್ಚಿಮ ಬಂಗಾಳ ಸಚಿವ ಜ್ಯೋತಿಪ್ರಿಯಾ ಮಲ್ಲಿಕ್ ನಿವಾಸದ ಮೇಲೆ ಇಡಿ ದಾಳಿ

ದೋತಸ್ರಾ ಅವರು ಲಕ್ಷ್ಮಣಗಢ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಮಾಹಿತಿಗಾಗಿ, ಸಿಕರ್ ಜಿಲ್ಲೆಯ ಲಕ್ಷ್ಮಣಗಢ ಕ್ಷೇತ್ರದಿಂದ ಕಾಂಗ್ರೆಸ್ ತನ್ನ ಅಭ್ಯರ್ಥಿ ಪಟ್ಟಿಯಲ್ಲಿ ಗೋವಿಂದ್ ಸಿಂಗ್ ದೋತಸ್ರಾ ಅವರನ್ನು ಕಣಕ್ಕಿಳಿಸಿದೆ.

200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25 ರಂದು ಚುನಾವಣೆ ನಡೆಯಲಿದೆ. ಈ ಪ್ರಕರಣದಲ್ಲಿ ಮಾಜಿ ಆರ್‌ಪಿಎಸ್‌ಸಿ ಸದಸ್ಯ ಬಾಬುಲಾಲ್ ಕಟಾರ ಮತ್ತು ಅನಿಲ್ ಕುಮಾರ್ ಮೀನಾ ಎಂದು ಗುರುತಿಸಲಾದ ಇನ್ನೊಬ್ಬ ವ್ಯಕ್ತಿಯನ್ನು ಇಡಿ ಬಂಧಿಸಿದೆ. ಜೂನ್‌ನಲ್ಲಿ ಈ ತನಿಖೆಯ ಭಾಗವಾಗಿ ಇಡಿ ಮೊದಲು ರಾಜಸ್ಥಾನದ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us