AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾಯಿತ ಸರ್ಕಾರವನ್ನು ಉರುಳಿಸಲು BJP ಹೊಸ ಪ್ರಯತ್ನದಲ್ಲಿದೆ: ಸಿಎಂ ಅಶೋಕ್ ಗೆಹ್ಲೋಟ್

ರಾಜಸ್ಥಾನ ಮತ್ತು ಮಹಾರಾಷ್ಟ್ರದಲ್ಲಿ ಚುನಾಯಿತ ಸರ್ಕಾರಗಳನ್ನು ಉರುಳಿಸಲು ಹೊಸ ಪ್ರಯತ್ನ ನಡೆಯುವ ಸಾಧ್ಯತೆಯಿದೆ ಎಂದು ನಿನ್ನೆ ಎಚ್ಚರಿಸಿದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್. ಕಾಂಗ್ರೆಸ್ ಶಾಸಕರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಹಿಂದೆ ರಹಸ್ಯ ಸಭೆ ನಡೆಸಿದರು ಎಂದು ಸಹ ಆರೋಪಿಸಿದರು.

ಚುನಾಯಿತ ಸರ್ಕಾರವನ್ನು ಉರುಳಿಸಲು BJP ಹೊಸ ಪ್ರಯತ್ನದಲ್ಲಿದೆ: ಸಿಎಂ ಅಶೋಕ್ ಗೆಹ್ಲೋಟ್
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್
sandhya thejappa
sandhya thejappa| Edited By: |

Updated on: Dec 06, 2020 | 5:28 PM

Share

ಜೈಪುರ: ರಾಜಸ್ಥಾನ ಮತ್ತು ಮಹಾರಾಷ್ಟ್ರದಲ್ಲಿ ಚುನಾಯಿತ ಸರ್ಕಾರಗಳನ್ನು ಉರುಳಿಸಲು ಹೊಸ ಪ್ರಯತ್ನ ನಡೆಯುವ ಸಾಧ್ಯತೆಯಿದೆ ಎಂದು ನಿನ್ನೆ ಎಚ್ಚರಿಸಿದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್. ಕಾಂಗ್ರೆಸ್ ಶಾಸಕರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಹಿಂದೆ ರಹಸ್ಯ ಸಭೆ ನಡೆಸಿದರು ಎಂದು ಸಹ ಆರೋಪಿಸಿದರು.

ಸಿರೋಹಿ ಜಿಲ್ಲೆಯಲ್ಲಿ ಪಕ್ಷದ ಕಚೇರಿಯ ಉದ್ಘಾಟನೆಯ ವೇಳೆ ಮಾತನಾಡಿದ ಗೆಹ್ಲೋಟ್, ಬಿಜೆಪಿ ಮುಖಂಡರು ರಾಜಸ್ಥಾನ ಸರ್ಕಾರವನ್ನು ಬೀಳಿಸಲು ಪ್ರಯತ್ನಿಸುತ್ತಾರೆ. ಆದರೆ ರಾಜಸ್ಥಾನದ ಜನತೆ ಕಾಂಗ್ರೆಸ್ ಸರ್ಕಾರ ಬೀಳುವುದನ್ನು ಬಯಸುವುದಿಲ್ಲ. ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್​ರನ್ನ  ಭೇಟಿಯಾದ ಬಳಿಕ ನಮ್ಮ ಶಾಸಕರು ಶಾ ಅವರನ್ನ ಈ ದೇಶದ ಗೃಹ ಸಚಿವರಾಗಿ ನೋಡಲು ಬಯಸುವುದಿಲ್ಲ  ಎಂದು ಗೆಹ್ಲೋಟ್​ ಹೇಳಿದರು.

ಐದು ರಾಜ್ಯ ಸರ್ಕಾರಗಳನ್ನು ಈಗಾಗಲೇ ಉರುಳಿಸಲಾಗಿದೆ. ಇದೀಗ ನಮ್ಮ ಸರ್ಕಾರ ಆರನೇಯದ್ದು ಆಗಲಿದೆ  ಒಂದು ಅಮಿತ್ ಶಾ ಕಾಂಗ್ರೆಸ್ ಮುಖಂಡರಿಗೆ ಹೇಳಿದರು ಎಂದು ಗೆಹ್ಲೋಟ್​ ತಿಳಿಸಿದರು. ಇದಲ್ಲದೆ, ಬಂಡಾಯ ಕಾಂಗ್ರೆಸ್ ಶಾಸಕರ ವಿಶ್ವಾಸವನ್ನು ಬಲಪಡಿಸಲು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ನ್ಯಾಯಾಧೀಶರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಗೆಹ್ಲೋಟ್ ಆರೋಪಿಸಿದ್ದಾರೆ.

ಗೆಹ್ಲೋಟ್ ಆರೋಪಕ್ಕೆ ಪ್ರತಿಕ್ರಿಯಿಸಿದ ಪ್ರತಿಪಕ್ಷ ನಾಯಕ ಗುಲಾಬ್ ಚಂದ್ ಕಟಾರಿಯಾ ಕಾಂಗ್ರೆಸ್ ಒಳಜಗಳವೇ ರಾಜ್ಯ ಸರ್ಕಾರದ ಪತನಕ್ಕೆ ಕಾರಣವಾಗಲಿದೆ ಎಂದು ಹೇಳಿದರು. ಸಿಎಂ ಅಶೋಕ್ ಗೆಹ್ಲೋಟ್ ಯಾವುದೇ ಆಧಾರವಿಲ್ಲದೆ ಅಮಿತ್ ಶಾ ವಿರುದ್ಧ ಆರೋಪಿಸುತ್ತಿದ್ದಾರೆ ಎಂದು ಕಟಾರಿಯಾ ಹೇಳಿದರು.

ಪಂಚತಾರಾ ಹೋಟೆಲ್‌ನಲ್ಲಿ ರಾಜಸ್ಥಾನ ಶಾಸಕರು ಏನು ಮಾಡ್ತಿದಾರೆ ಗೊತ್ತಾ?

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ