AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದಯಪುರ ಟೈಲರ್ ಕನ್ಹಯ್ಯಾ ಲಾಲ್ ಕೊಲೆ ಹಿಂದೆ ಬಿಜೆಪಿ ಕೈವಾಡವಿದೆ: ಅಶೋಕ್ ಗೆಹ್ಲೋಟ್​

ಉದಯಪುರ ಟೈಲರ್ ಕನ್ಹಯ್ಯಾ ಲಾಲ್ ಕೊಲೆಯ ಹಿಂದೆ ಬಿಜೆಪಿ ಕೈವಾಡವಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​(Ashok Gehlot) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಟೈಲರ್ ಕನ್ಹಯ್ಯಾ ಲಾಲ್ ಹಂತಕರು ಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ) ಸಂಪರ್ಕ ಹೊಂದಿದ್ದಾರೆ ಎಂದು ಹೇಳಿದ್ದಾರೆ. ಕಳೆದ ವರ್ಷ ಜೂನ್ 28 ರಂದು ಉದಯಪುರದಲ್ಲಿ ಇಬ್ಬರು ಕನ್ಹಯ್ಯಾ ಲಾಲ್ ಅವರ ಅಂಗಡಿಗೆ ನುಗ್ಗಿ ಕತ್ತು ಸೀಳಿ ಹತ್ಯೆ ಮಾಡಿದ್ದರು.

ಉದಯಪುರ ಟೈಲರ್ ಕನ್ಹಯ್ಯಾ ಲಾಲ್ ಕೊಲೆ ಹಿಂದೆ ಬಿಜೆಪಿ ಕೈವಾಡವಿದೆ: ಅಶೋಕ್ ಗೆಹ್ಲೋಟ್​
ಅಶೋಕ್ ಗೆಹ್ಲೋಟ್​ Image Credit source: Moneycontrol
ನಯನಾ ರಾಜೀವ್
|

Updated on: Nov 13, 2023 | 12:41 PM

Share

ಉದಯಪುರ ಟೈಲರ್ ಕನ್ಹಯ್ಯಾ ಲಾಲ್ ಕೊಲೆಯ ಹಿಂದೆ ಬಿಜೆಪಿ ಕೈವಾಡವಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​(Ashok Gehlot) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಟೈಲರ್ ಕನ್ಹಯ್ಯಾ ಲಾಲ್ ಹಂತಕರು ಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ) ಸಂಪರ್ಕ ಹೊಂದಿದ್ದಾರೆ ಎಂದು ಹೇಳಿದ್ದಾರೆ. ಕಳೆದ ವರ್ಷ ಜೂನ್ 28 ರಂದು ಉದಯಪುರದಲ್ಲಿ ಇಬ್ಬರು ಕನ್ಹಯ್ಯಾ ಲಾಲ್ ಅವರ ಅಂಗಡಿಗೆ ನುಗ್ಗಿ ಕತ್ತು ಸೀಳಿ ಹತ್ಯೆ ಮಾಡಿದ್ದರು.

ಕನ್ಹಯ್ಯಾ ಲಾಲ್ ಹತ್ಯೆಯ ಹಿಂದಿನ ಆರೋಪಿಗಳನ್ನು ಆತನ ಹತ್ಯೆಗೆ ಕೆಲವು ದಿನಗಳ ಮೊದಲು ಪೊಲೀಸರು ಮತ್ತೊಂದು ಪ್ರಕರಣದಲ್ಲಿ ಬಂಧಿಸಿದ್ದರು. ಅವರನ್ನು ಬಿಡುಗಡೆ ಮಾಡಲು ಬಿಜೆಪಿ ನಾಯಕರು ಪೊಲೀಸ್ ಠಾಣೆಗೆ ಬಂದಿದ್ದರು ಎಂದು ಗೆಹ್ಲೋಟ್​ ಆರೋಪಿಸಿದ್ದಾರೆ. ನವೆಂಬರ್ 25 ರಂದು ರಾಜಸ್ಥಾನದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕೋಮು ಉದ್ವಿಗ್ನತೆಯನ್ನು ಉಂಟುಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿದೆ: ಮೋದಿ

ಕಾಂಗ್ರೆಸ್‌ಗೆ ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಹೇಳಿಕೆ ನೀಡಿದ ಬೆನ್ನಲ್ಲೇ ಗೆಹ್ಲೋಟ್ ಈ ಹೇಳಿಕೆ ನೀಡಿದ್ದಾರೆ.

ಗುರುವಾರ ಉದಯಪುರ ಬಳಿ ಚುನಾವಣಾ ರ್ಯಾಲಿಯಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಅವರ ಕ್ರೂರ ಹತ್ಯೆಯನ್ನು ಉಲ್ಲೇಖಿಸಿ ಅವರು ಈ ಹೇಳಿಕೆಯನ್ನು ನೀಡಿದ್ದರು.

ಕನ್ಹಯ್ಯಾ ಲಾಲ್ ಜಿ ಹತ್ಯೆಯು ರಾಜ್ಯ ಸರ್ಕಾರಕ್ಕೆ ದೊಡ್ಡ ಕಳಂಕವಾಗಿದೆ, ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿರುವ ಕಾಂಗ್ರೆಸ್ ಸರ್ಕಾರ ಇರುವುದರಿಂದ ಉದಯಪುರದಲ್ಲಿ ಇಂತಹ ಹೇಯ ಘಟನೆ ಸಂಭವಿಸಿದೆ ಎಂದು ಮೋದಿ ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!