AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದಯಪುರ ಟೈಲರ್ ಕನ್ಹಯ್ಯಾ ಲಾಲ್ ಕೊಲೆ ಹಿಂದೆ ಬಿಜೆಪಿ ಕೈವಾಡವಿದೆ: ಅಶೋಕ್ ಗೆಹ್ಲೋಟ್​

ಉದಯಪುರ ಟೈಲರ್ ಕನ್ಹಯ್ಯಾ ಲಾಲ್ ಕೊಲೆಯ ಹಿಂದೆ ಬಿಜೆಪಿ ಕೈವಾಡವಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​(Ashok Gehlot) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಟೈಲರ್ ಕನ್ಹಯ್ಯಾ ಲಾಲ್ ಹಂತಕರು ಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ) ಸಂಪರ್ಕ ಹೊಂದಿದ್ದಾರೆ ಎಂದು ಹೇಳಿದ್ದಾರೆ. ಕಳೆದ ವರ್ಷ ಜೂನ್ 28 ರಂದು ಉದಯಪುರದಲ್ಲಿ ಇಬ್ಬರು ಕನ್ಹಯ್ಯಾ ಲಾಲ್ ಅವರ ಅಂಗಡಿಗೆ ನುಗ್ಗಿ ಕತ್ತು ಸೀಳಿ ಹತ್ಯೆ ಮಾಡಿದ್ದರು.

ಉದಯಪುರ ಟೈಲರ್ ಕನ್ಹಯ್ಯಾ ಲಾಲ್ ಕೊಲೆ ಹಿಂದೆ ಬಿಜೆಪಿ ಕೈವಾಡವಿದೆ: ಅಶೋಕ್ ಗೆಹ್ಲೋಟ್​
ಅಶೋಕ್ ಗೆಹ್ಲೋಟ್​ Image Credit source: Moneycontrol
ನಯನಾ ರಾಜೀವ್
|

Updated on: Nov 13, 2023 | 12:41 PM

Share

ಉದಯಪುರ ಟೈಲರ್ ಕನ್ಹಯ್ಯಾ ಲಾಲ್ ಕೊಲೆಯ ಹಿಂದೆ ಬಿಜೆಪಿ ಕೈವಾಡವಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​(Ashok Gehlot) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಟೈಲರ್ ಕನ್ಹಯ್ಯಾ ಲಾಲ್ ಹಂತಕರು ಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ) ಸಂಪರ್ಕ ಹೊಂದಿದ್ದಾರೆ ಎಂದು ಹೇಳಿದ್ದಾರೆ. ಕಳೆದ ವರ್ಷ ಜೂನ್ 28 ರಂದು ಉದಯಪುರದಲ್ಲಿ ಇಬ್ಬರು ಕನ್ಹಯ್ಯಾ ಲಾಲ್ ಅವರ ಅಂಗಡಿಗೆ ನುಗ್ಗಿ ಕತ್ತು ಸೀಳಿ ಹತ್ಯೆ ಮಾಡಿದ್ದರು.

ಕನ್ಹಯ್ಯಾ ಲಾಲ್ ಹತ್ಯೆಯ ಹಿಂದಿನ ಆರೋಪಿಗಳನ್ನು ಆತನ ಹತ್ಯೆಗೆ ಕೆಲವು ದಿನಗಳ ಮೊದಲು ಪೊಲೀಸರು ಮತ್ತೊಂದು ಪ್ರಕರಣದಲ್ಲಿ ಬಂಧಿಸಿದ್ದರು. ಅವರನ್ನು ಬಿಡುಗಡೆ ಮಾಡಲು ಬಿಜೆಪಿ ನಾಯಕರು ಪೊಲೀಸ್ ಠಾಣೆಗೆ ಬಂದಿದ್ದರು ಎಂದು ಗೆಹ್ಲೋಟ್​ ಆರೋಪಿಸಿದ್ದಾರೆ. ನವೆಂಬರ್ 25 ರಂದು ರಾಜಸ್ಥಾನದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕೋಮು ಉದ್ವಿಗ್ನತೆಯನ್ನು ಉಂಟುಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿದೆ: ಮೋದಿ

ಕಾಂಗ್ರೆಸ್‌ಗೆ ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಹೇಳಿಕೆ ನೀಡಿದ ಬೆನ್ನಲ್ಲೇ ಗೆಹ್ಲೋಟ್ ಈ ಹೇಳಿಕೆ ನೀಡಿದ್ದಾರೆ.

ಗುರುವಾರ ಉದಯಪುರ ಬಳಿ ಚುನಾವಣಾ ರ್ಯಾಲಿಯಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಅವರ ಕ್ರೂರ ಹತ್ಯೆಯನ್ನು ಉಲ್ಲೇಖಿಸಿ ಅವರು ಈ ಹೇಳಿಕೆಯನ್ನು ನೀಡಿದ್ದರು.

ಕನ್ಹಯ್ಯಾ ಲಾಲ್ ಜಿ ಹತ್ಯೆಯು ರಾಜ್ಯ ಸರ್ಕಾರಕ್ಕೆ ದೊಡ್ಡ ಕಳಂಕವಾಗಿದೆ, ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿರುವ ಕಾಂಗ್ರೆಸ್ ಸರ್ಕಾರ ಇರುವುದರಿಂದ ಉದಯಪುರದಲ್ಲಿ ಇಂತಹ ಹೇಯ ಘಟನೆ ಸಂಭವಿಸಿದೆ ಎಂದು ಮೋದಿ ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ