Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಳವಿಯಾ ಟ್ವೀಟ್​​ಗೆ ಟೀಕೆ; ಸಚಿನ್ ಪೈಲಟ್‌ಗೆ ಅಶೋಕ್ ಗೆಹ್ಲೋಟ್ ಬೆಂಬಲ

ಕಾಂಗ್ರೆಸ್ ನಾಯಕ ರಾಜೇಶ್ ಪೈಲಟ್ ಭಾರತೀಯ ವಾಯುಪಡೆಯ ವೀರ ಪೈಲಟ್ ಆಗಿದ್ದರು. ಅವರನ್ನು ಅವಮಾನಿಸುವ ಮೂಲಕ ಬಿಜೆಪಿ ಭಾರತೀಯ ವಾಯುಪಡೆಯ ತ್ಯಾಗವನ್ನು ಅವಮಾನಿಸುತ್ತಿದೆ. ಇಡೀ ದೇಶ ಇದನ್ನು ಖಂಡಿಸಬೇಕು ಎಂದು ಗೆಹ್ಲೋಟ್ ಹೇಳಿದ್ದಾರೆ. ಸಚಿನ್ ಪೈಲಟ್ ಮತ್ತು ಗೆಹ್ಲೋಟ್ ನಡುವಿನ ಗುದ್ದಾಟಗಳು ರಹಸ್ಯವಾಗಿಯೇನೂ ಇರಲಿಲ್ಲ. ಆದರೆ ಈ ವರ್ಷ ರಾಜಸ್ಥಾನದದಲ್ಲಿ ಚುನಾವಣೆ ನಡೆಯಲಿದ್ದು ಎರಡೂ ನಾಯಕರು ಜತೆಯಾಗಿ ನಿಂತಿದ್ದಾರೆ ಎಂಬುದನ್ನು ಈ ನಡೆ ತೋರಿಸುತ್ತದೆ.

ಮಾಳವಿಯಾ ಟ್ವೀಟ್​​ಗೆ ಟೀಕೆ; ಸಚಿನ್ ಪೈಲಟ್‌ಗೆ ಅಶೋಕ್ ಗೆಹ್ಲೋಟ್ ಬೆಂಬಲ
ಅಶೋಕ್ ಗೆಹ್ಲೋಟ್- ಸಚಿನ್ ಪೈಲಟ್
Follow us
ರಶ್ಮಿ ಕಲ್ಲಕಟ್ಟ
|

Updated on: Aug 16, 2023 | 9:04 PM

ದೆಹಲಿ ಆಗಸ್ಟ್ 16: ಭಾರತೀಯ ವಾಯುಪಡೆಯಲ್ಲಿದ್ದಾಗ ರಾಜೇಶ್ ಪೈಲಟ್ (Rajesh Pilot), ಮಿಜೋರಾಂನಲ್ಲಿ ದೇಶದ ನಾಗರಿಕರ ಮೇಲೆ ಬಾಂಬ್ ಎಸೆದಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿತ್ತು. ಈ ಆರೋಪಕ್ಕೆ ಸಚಿನ್ ಪೈಲಟ್ ಖಡಕ್ ಉತ್ತರವನ್ನೂ ಕೊಟ್ಟಿದ್ದರು. ಇದೀಗ ರಾಜಸ್ಥಾನ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಅಶೋಕ್ ಗೆಹ್ಲೋಟ್ (Ashok Gehlot)ಕೂಡಾ ತಮ್ಮ ಸಹೋದ್ಯೋಗಿ ಸಚಿನ್ ಪೈಲಟ್ (Sachin Pilot) ಬೆಂಬಲಕ್ಕೆ ನಿಂತಿದ್ದಾರೆ.ಮಾರ್ಚ್ 5, 1966 ರಂದು ಮಿಜೋರಾಂನ ರಾಜಧಾನಿ ಐಜ್ವಾಲ್‌ನಲ್ಲಿ ಬಾಂಬ್ ದಾಳಿ ಮಾಡಿದ ಭಾರತೀಯ ವಾಯುಪಡೆಯ ವಿಮಾನಗಳನ್ನು ರಾಜೇಶ್ ಪೈಲಟ್ ಮತ್ತು ಸುರೇಶ್ ಕಲ್ಮಾಡಿ ಹಾರಿಸುತ್ತಿದ್ದರು ಎಂದು ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವೀಟ್ ಮಾಡಿದ್ದಾರೆ. ಇದಾದ ನಂತರ ಇಬ್ಬರೂ ಕಾಂಗ್ರೆಸ್ ಟಿಕೆಟ್‌ಗಳಲ್ಲಿ ಸಂಸದರು ಮತ್ತು ಸರ್ಕಾರದಲ್ಲಿ ಸಚಿವರಾದರು.. ಇಂದಿರಾ ಗಾಂಧಿ ಅವರು ರಾಜಕೀಯದಲ್ಲಿ ಸ್ಥಾನವನ್ನು ಪ್ರತಿಫಲವಾಗಿ ನೀಡಿದರು. ಈಶಾನ್ಯದಲ್ಲಿ ತಮ್ಮದೇ ಜನರ ಮೇಲೆ ವಾಯುದಾಳಿ ನಡೆಸಿದವರಿಗೆ ಗೌರವ ನೀಡಿದರು ಎಂಬುದು ಸ್ಪಷ್ಟವಾಗಿದೆ ಎಂದಿದ್ದರು ಮಾಳವಿಯಾ

ಮಾಳವಿಯಾ ಟ್ವೀಟ್ ಗೆ ಪ್ರತಿಕ್ರಿಯಿಸಿದ ಗೆಹ್ಲೋಟ್ ಪ್ರತಿಕ್ರಿಯಿಸಿ ಬಿಜೆಪಿಯು ಐಎಎಫ್‌ನ ತ್ಯಾಗವನ್ನು ಅವಮಾನಿಸುತ್ತಿದೆ ಎಂದಿದ್ದಾರೆ.

“ಕಾಂಗ್ರೆಸ್ ನಾಯಕ ರಾಜೇಶ್ ಪೈಲಟ್ ಭಾರತೀಯ ವಾಯುಪಡೆಯ ವೀರ ಪೈಲಟ್ ಆಗಿದ್ದರು. ಅವರನ್ನು ಅವಮಾನಿಸುವ ಮೂಲಕ ಬಿಜೆಪಿ ಭಾರತೀಯ ವಾಯುಪಡೆಯ ತ್ಯಾಗವನ್ನು ಅವಮಾನಿಸುತ್ತಿದೆ. ಇಡೀ ದೇಶ ಇದನ್ನು ಖಂಡಿಸಬೇಕು ಎಂದು ಗೆಹ್ಲೋಟ್ ಹೇಳಿದ್ದಾರೆ.

ಸಚಿನ್ ಪೈಲಟ್ ಮತ್ತು ಗೆಹ್ಲೋಟ್ ನಡುವಿನ ಗುದ್ದಾಟಗಳು ರಹಸ್ಯವಾಗಿಯೇನೂ ಇರಲಿಲ್ಲ. ಆದರೆ ಈ ವರ್ಷ ರಾಜಸ್ಥಾನದದಲ್ಲಿ ಚುನಾವಣೆ ನಡೆಯಲಿದ್ದು ಎರಡೂ ನಾಯಕರು ಜತೆಯಾಗಿ ನಿಂತಿದ್ದಾರೆ ಎಂಬುದನ್ನು ಈ ನಡೆ ತೋರಿಸುತ್ತದೆ.

ಇದನ್ನೂ ಓದಿ: ರಾಜೇಶ್ ಪೈಲಟ್ ಬಾಂಬ್ ಹಾಕಿದ್ದಾರೆ ಎಂದು ಬಗ್ಗೆ ಮಾಳವಿಯಾ ಟ್ವೀಟ್; ಫ್ಯಾಕ್ಟ್ ಚೆಕ್ ಮಾಡಿ ಪ್ರತಿಕ್ರಿಯಿಸಿದ ಸಚಿನ್ ಪೈಲಟ್

ಮಾಳವಿಯಾ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದ ಸಚಿನ್ ಪೈಲಟ್, ಅಮಿತ್ ಮಾಳವಿಯಾ ಅವರೇ, ನೀವು ತಪ್ಪು ದಿನಾಂಕ ಮತ್ತು ಸತ್ಯವಲ್ಲದ್ದನ್ನು ಹೇಳುತ್ತಿದ್ದೀರಿ.ಹೌದು, ಭಾರತೀಯ ವಾಯುಪಡೆಯ ಪೈಲಟ್ ಆಗಿ, ನನ್ನ ದಿವಂಗತ ತಂದೆ ಬಾಂಬ್‌ಗಳನ್ನು ಹಾಕಿದ್ದರು. ಆದರೆ ಅದು ಹಿಂದಿನ ಪೂರ್ವ ಪಾಕಿಸ್ತಾನದಲ್ಲಿ 1971ರಲ್ಲಿ. ಇಂಡೋ-ಪಾಕ್ ಯುದ್ಧವೇಳೆ ಆಗಿದ್ದು.ನೀವು ಹೇಳುವಂತೆ ಅಲ್ಲ, ಮಾರ್ಚ್ 5, 1966 ರಂದು ಮಿಜೋರಾಂನಲ್ಲಿ ಅಲ್ಲ. ಅವರು 29 ಅಕ್ಟೋಬರ್ 1966ರಲ್ಲಿ IAF ಗೆ ನೇಮಕಗೊಂಡರು! (ಪ್ರಮಾಣಪತ್ರ ಲಗತ್ತಿಸಲಾಗಿದೆ). ಜೈ ಹಿಂದ್ ಮತ್ತು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದಿದ್ದಾರೆ.

ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, 1962 ರಲ್ಲಿ ಆಗಿನ ಪ್ರಧಾನಿ ಜವಾಹರಲಾಲ್ ನೆಹರು “ಮಿಜೋರಾಂನಲ್ಲಿ ಜನರ ಮೇಲೆ ದಾಳಿ ಮಾಡಲು” ರೇಡಿಯೊ ಮೂಲಕ ವಾಯುಪಡೆಗೆ ಆದೇಶಿಸಿದ್ದರು ಎಂದು ಮೋದಿ ಹೇಳಿದ್ದು, ಈಶಾನ್ಯ ಭಾಗವು ಚೀನಾದ ಆಕ್ರಮಣದ ಸಮಯದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಹೆಣಗಾಡಿದ್ದು ಕಾಂಗ್ರೆಸ್‌ ಅವರನ್ನು ನಿರ್ಲಕ್ಷಿಸಿತ್ತು ಎಂದು ಆರೋಪಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ