AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜವಾಬ್ದಾರಿಯುತ, ಸುರಕ್ಷಿತ ಸಾಮಾಜಿಕ ಜಾಲತಾಣ ವ್ಯವಸ್ಥೆ ಬಗ್ಗೆ ‘ಕೂ’ನಲ್ಲಿ ಪೋಸ್ಟ್; ಐಟಿ ನಿಯಮಗಳಿಗೆ ಬೆಂಬಲ ಸೂಚಿಸಿದ ಅಶ್ವಿನಿ ವೈಷ್ಣವ್

ಕೇಂದ್ರ ಸರ್ಕಾರದ ಹೊಸ ಐಟಿ ನಿಯಮ (IT Rules)ಗಳ ಪ್ರಕಾರ ಟ್ವಿಟರ್​ ಭಾರತದಲ್ಲಿ ಮುಖ್ಯ ಅನುಸರಣಾ ಅಧಿಕಾರಿ, ನೋಡೆಲ್​ ಅಧಿಕಾರಿ ಹಾಗೂ ಸ್ಥಾನಿಕ ಕುಂದುಕೊರತೆ ಪರಿಹಾರ ಅಧಿಕಾರಿಯನ್ನು ನೇಮಕ ಮಾಡಲೇಬೇಕಾಗಿತ್ತು.

ಜವಾಬ್ದಾರಿಯುತ, ಸುರಕ್ಷಿತ ಸಾಮಾಜಿಕ ಜಾಲತಾಣ ವ್ಯವಸ್ಥೆ ಬಗ್ಗೆ ‘ಕೂ’ನಲ್ಲಿ ಪೋಸ್ಟ್; ಐಟಿ ನಿಯಮಗಳಿಗೆ ಬೆಂಬಲ ಸೂಚಿಸಿದ ಅಶ್ವಿನಿ ವೈಷ್ಣವ್
ಅಶ್ವಿನಿ ವೈಷ್ಣವ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Jul 11, 2021 | 4:03 PM

Share

ದೆಹಲಿ: ಕೇಂದ್ರ ಸಚಿವ ಸಂಪುಟದ ಹೊಸ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಭಾನುವಾರ ಕೂ ಸಾಮಾಜಿಕ ಜಾಲತಾಣ ಅಪ್ಲಿಕೇಷನ್​ಗೆ ಕಾಲಿಟ್ಟಿದ್ದಾರೆ. ತಮ್ಮ ಮೊದಲ ಪೋಸ್ಟ್​ನ್ನು ಕೂಡ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಪರಿಚಯಿಸಲ್ಪಟ್ಟ ಐಟಿ ನಿಯಮಗಳ ಬಗ್ಗೆ ಕೂನಲ್ಲಿ ಪೋಸ್ಟ್ ಮೊದಲ ಪೋಸ್ಟ್ ಮಾಡಿದ್ದಾರೆ. ಐಟಿ ಇಲಾಖೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಜೊತೆಗೆ ಮಾಹಿತಿ ತಂತ್ರಜ್ಞಾನ ಕಾಯ್ದೆ 2021ರ ಅಳವಡಿಸುವಿಕೆ ಬಗ್ಗೆ ಚರ್ಚಿಸಿದ್ದೇನೆ. ಈ ನಿಯಮಾವಳಿಗಳು ಜವಾಬ್ದಾರಿಯುತ ಹಾಗೂ ಸುರಕ್ಷಿತ ಸಾಮಾಜಿಕ ಜಾಲತಾಣ ವ್ಯವಸ್ಥೆಯನ್ನು ಭಾರತದಲ್ಲಿ ನೀಡುತ್ತದೆ ಎಂದು ಕೂನಲ್ಲಿ ಹಂಚಿಕೊಂಡ ಪೋಸ್ಟ್ ಮೂಲಕ ತಿಳಿಸಿದ್ದಾರೆ.

ಟ್ವಿಟರ್​​  (Twitter) ಭಾರತದ ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನಾಗಿ ವಿನಯ್​ ಪ್ರಕಾಶ್​​ರನ್ನು ಭಾನುವಾರ ನೇಮಕ ಮಾಡಿದೆ. ಕೇಂದ್ರ ಸರ್ಕಾರದ ಹೊಸ ಐಟಿ ನಿಯಮ (IT Rules)ಗಳ ಪ್ರಕಾರ ಟ್ವಿಟರ್​ ಭಾರತದಲ್ಲಿ ಮುಖ್ಯ ಅನುಸರಣಾ ಅಧಿಕಾರಿ, ನೋಡೆಲ್​ ಅಧಿಕಾರಿ ಹಾಗೂ ಸ್ಥಾನಿಕ ಕುಂದುಕೊರತೆ ಪರಿಹಾರ ಅಧಿಕಾರಿಯನ್ನು ನೇಮಕ ಮಾಡಲೇಬೇಕಾಗಿತ್ತು.

ಕೇವಲ ಟ್ವಿಟರ್​​ಗೆ ಮಾತ್ರವಲ್ಲ, ಭಾರತದಲ್ಲಿ 50 ಲಕ್ಷ ಬಳಕೆದಾರರನ್ನು ಹೊಂದಿರುವ ಯಾವುದೇ ಸಾಮಾಜಿಕ ಜಾಲತಾಣ ಈ ಮೂರು ರೀತಿಯ ಅಧಿಕಾರಿಗಳನ್ನು ಕಡ್ಡಾಯವಾಗಿ ನೇಮಕ ಮಾಡಬೇಕಾಗಿತ್ತು. ಆದರೆ ಈ ಐಟಿ ನಿಯಮಗಳ ಪಾಲನೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಟ್ವಿಟರ್​ ನಡುವೆ ತೀವ್ರ ಸಂಘರ್ಷ ಏರ್ಪಟ್ಟಿದ್ದು ಹೈಕೋರ್ಟ್ ಮೆಟ್ಟಿಲನ್ನೂ ಏರಿತ್ತು.

ಇದೀಗ ವಿನಯ್ ಪ್ರಕಾಶ್​ ಅವರನ್ನು ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದ್ದು, ಯಾವುದೇ ಸಮಸ್ಯೆಯಿದ್ದರೂ grievance-officer-in @ twitter.com ಮೂಲಕ ಅವರನ್ನು ಸಂಪರ್ಕಿಸಬಹುದಾಗಿದೆ. ಟ್ವಿಟರ್​ ಭಾರತದಲ್ಲಿ ಅಜಮಾಸು 1.75 ಕೋಟಿ ಬಳಕೆದಾರರನ್ನು ಹೊಂದಿದೆ. ಆದರೆ ಇತ್ತೀಚೆಗೆ ಐಟಿ ನಿಯಮಗಳ ಪಾಲನೆ ವಿಚಾರದಲ್ಲಿ ಕೇಂದ್ರದೊಂದಿಗೆ ಮನಸ್ತಾಪ ಉಂಟಾಗಿದೆ.

ಹಿರಿಯ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಬಳಿಕ ಮಾಜಿ ಐಎಎಸ್ ಅಧಿಕಾರಿ ಅಶ್ವಿನಿ ವೈಷ್ಣವ್​ರನ್ನು ನೂತನ ಐಟಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಒಡಿಶಾ ಬಿಜೆಪಿ ನಾಯಕ ಅಶ್ವಿನಿ ವೈಷ್ಣವ್ ಅಧಿಕಾರ ಸ್ವೀಕರಿಸಿದ ಬಳಿಕ, ದೇಶದ ಕಾನೂನನ್ನು ಎಲ್ಲರೂ ಗೌರವಿಸಬೇಕು ಎಂಬ ಹೇಳಿಕೆ ನೀಡಿದ್ದರು. ಇದೀಗ ಕೂ ಸಾಮಾಜಿಕ ಜಾಲತಾಣದಲ್ಲಿ ಐಟಿ ಸಚಿವರು ಕಂಡುಬಂದಿರುವುದು ಕೂಡ ಈ ನೆಲೆಯಲ್ಲಿ ಮುಖ್ಯವೇ ಆಗಿದೆ. ಸಚಿವರು ಜುಲೈನಲ್ಲಿ ಕೂಗೆ ಸೇರ್ಪಡೆಗೊಂಡಿದ್ದರು. ಆ ಬಳಿಕ ಇದೀಗ ಕೂನಲ್ಲಿ ಮೊದಲ ಪೋಸ್ಟ್ ಮಾಡಿದ್ದಾರೆ. ಕೂ ಅಪ್ಲಿಕೇಷನ್​ಗೆ ಸರ್ಕಾರದ ಬೆಂಬಲವನ್ನೂ ಸೂಚಿಸಿದ್ದಾರೆ.

ಇದನ್ನೂ ಓದಿ: ಖಾತೆ ನಿರ್ಧಾರವಾಗುವ ಮೊದಲೇ ಟ್ವಿಟರ್ ಹಿಸ್ಟರಿ ಡಿಲೀಟ್ ಮಾಡಿದ ಶೋಭಾ ಕರಂದ್ಲಾಜೆ

ಐಟಿ ನಿಯಮಗಳು ಈ ನೆಲದ ಕಾನೂನು, ಟ್ವಿಟರ್ ಅದನ್ನು ಪಾಲಿಸುವುದು ಕಡ್ಡಾಯ: ಕೇಂದ್ರ ಸರ್ಕಾರ

Follow Us
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು