AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂರಕ್ಷಿತ ಸ್ಮಾರಕಗಳ ಪಟ್ಟಿಯಿಂದ 18 ಸ್ಮಾರಕಗಳನ್ನು ಹೊರಗಿಟ್ಟ ಎಎಸ್​ಐ

ಭಾರತೀಯ ಪುರಾತತ್ವ ಇಲಾಖೆ(ಎಎಸ್​ಐ) ಕೇಂದ್ರ ಸಂರಕ್ಷಿತ ಸ್ಮಾರಕಗಳ ಪಟ್ಟಿಯಿಂದ 18 ಸ್ಮಾರಕಗಳನ್ನು ತೆಗೆದುಹಾಕಿದೆ. ಹರ್ಯಾಣದ ಮುಜೆಸರ್ ಗ್ರಾಮದ ಕೋಸ್ ಮಿನಾರ್ ನಂ.13 ಸೇರಿದಂತೆ ಹಲವು ಸ್ಮಾರಕಗಳನ್ನು ಪಟ್ಟಿಯಿಂದ ಹೊರಗಿಡಲಾಗಿದೆ.

ಸಂರಕ್ಷಿತ ಸ್ಮಾರಕಗಳ ಪಟ್ಟಿಯಿಂದ 18 ಸ್ಮಾರಕಗಳನ್ನು ಹೊರಗಿಟ್ಟ ಎಎಸ್​ಐ
ಎಎಸ್​ಐ
ನಯನಾ ರಾಜೀವ್
|

Updated on: Mar 26, 2024 | 8:43 AM

Share

ಭಾರತೀಯ ಪುರಾತತ್ವ ಇಲಾಖೆ(ಎಎಸ್​ಐ) ಕೇಂದ್ರ ಸಂರಕ್ಷಿತ ಸ್ಮಾರಕಗಳ ಪಟ್ಟಿಯಿಂದ 18 ಸ್ಮಾರಕಗಳನ್ನು ತೆಗೆದುಹಾಕಿದೆ. ಹರ್ಯಾಣದ ಮುಜೆಸರ್ ಗ್ರಾಮದ ಕೋಸ್ ಮಿನಾರ್ ನಂ.13 ಸೇರಿದಂತೆ ಹಲವು ಸ್ಮಾರಕಗಳನ್ನು ಪಟ್ಟಿಯಿಂದ ಹೊರಗಿಡಲಾಗಿದೆ.

ದೆಹಲಿಯ ಬಾರಾ ಖಂಬ ಸ್ಮಶಾನ, ರಂಗೂನ್​ನಲ್ಲಿರುವ ಗುನ್ನಾರ್​ ಬರ್ಕೆಲ್ ಸಮಾಧಿ, ಝಾನ್ಸಿ, ಲಕ್ನೋದ ಗೌಘಾಟ್ ಸ್ಮಶಾನ ಮತ್ತು ಉತ್ತರ ಪ್ರದೇಶದ ವಾರಾಣಸಿಯ ನಿರ್ಜನ ಗ್ರಾಮದ ಭಾಗವಾಗಿರುವ ತೆಲಿಯಾ ನಾಲಾ ಬೌದ್ಧ ಅವಶೇಷಗಳೂ ಪಟ್ಟಿಯಿಂದ ಹೊರಗುಳಿದಿವೆ.

ಪ್ರಸ್ತುತ ಎಎಸ್​ಐ ವ್ಯಾಪ್ತಿಯಲ್ಲಿ 3,693 ಸ್ಮಾರಕಗಳಿವೆ, ಪಟ್ಟಿಯಿಂದ ತೆಗೆದುಹಾಕುವಿಕೆ ಪೂರ್ಣಗೊಂಡ ನಂತರ, ಸ್ಮಾರಕಗಳ ಸಂಖ್ಯೆ 3,675ಕ್ಕೆ ಇಳಿಯುತ್ತದೆ. ಡಿಸೆಂಬರ್ 8 ರಂದು ಕೇಂದ್ರ ಸಂರಕ್ಷಿತ ಪಟ್ಟಿಯಲ್ಲಿ ಸೇರಿಸಲಾದ 3,693 ಸ್ಮಾರಕಗಳ ಪೈಕಿ 50 ನಾಪತ್ತೆಯಾಗಿವೆ ಎಂದು ಸಚಿವೆ ಸ್ಮೃತಿ ಇರಾನಿ ಸಂಸತ್ತಿಗೆ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ 11 ಹಾಗೂ ದೆಹಲಿ, ಹರ್ಯಾಣದಲ್ಲಿ ತಲಾ ಎರಡು ಸ್ಮಾರಕಗಳು ಕಾಣೆಯಾಗಿವೆ. ಅಸ್ಸಾಂ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಸ್ಮಾರಕಗಳೂ ಕಾಣೆಯಾದ ಪಟ್ಟಿಯಲ್ಲಿದೆ.

ಮತ್ತಷ್ಟು ಓದಿ: ನಿಜಾಮರು ಗಿಫ್ಟ್​​ ಕೊಟ್ಟಿದ್ದ ಜಮೀನಿನಲ್ಲಿ ಕೃಷಿ ಮಾಡಿಕೊಂಡಿದ್ದರು, ಅದನ್ನೀಗ ಪುರಾತತ್ವ ಇಲಾಖೆ ತನ್ನದು ಅನ್ನುತ್ತಿದೆ! ರೈತರ ಗತಿಯೇನು?

ಈ ಸ್ಮಾರಕಗಳನ್ನು ಪಟ್ಟಿಯಿಂದ ಕೈಬಿಟ್ಟ ಬಳಿಕ , ಕೇಂದ್ರೀಯ ಏಜೆನ್ಸಿ ಈ ಸ್ಮಾರಕಗಳನ್ನು ಸಂರಕ್ಷಿಸುವ ಹೊಣೆ ಹೊಂದಿರುವುದಿಲ್ಲ. ಜತೆಗೆ ಇದಕ್ಕೆ ಸಂಬಂಧಿಸಿದ ನಿರ್ಮಾಣ ಚಟುವಟಿಕೆಗಳನ್ನು ಅಥವಾ ಈ ಪ್ರದೇಶಗಳ ನಗರೀಕರಣಕ್ಕೆ ಎಎಸ್​ಐ ಅಡ್ಡಬರುವುದಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ