AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಣಸಿ ನ್ಯಾಯಾಲಯಕ್ಕೆ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷಾ ವರದಿ ಸಲ್ಲಿಸಿದ ಎಎಸ್‌ಐ

Gyanvapi survey case: ಜ್ಞಾನವಾಪಿ ಸಮೀಕ್ಷೆ ಪ್ರಕರಣದಲ್ಲಿ ಮುಚ್ಚಿದ ಕವರ್‌ನಲ್ಲಿ ವರದಿಯನ್ನು ಸಲ್ಲಿಸಲು ಸಾಧ್ಯವಿಲ್ಲ, ಎಎಸ್‌ಐ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದೆ. ನಾವು ನ್ಯಾಯಾಲಯದ ಮುಂದೆ ನಮ್ಮ ಅರ್ಜಿಯನ್ನು ಸಲ್ಲಿಸಿದ್ದೇವೆ. ಎಎಸ್‌ಐ ವರದಿಯ ಪ್ರತಿಯನ್ನು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಾಗುವಂತೆ ಮಾಡಬೇಕು ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್  ಹೇಳಿದ್ದಾರೆ.

ವಾರಾಣಸಿ ನ್ಯಾಯಾಲಯಕ್ಕೆ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷಾ ವರದಿ ಸಲ್ಲಿಸಿದ ಎಎಸ್‌ಐ
ಜ್ಞಾನವಾಪಿ ಮಸೀದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on:Feb 02, 2024 | 12:03 PM

Share

ದೆಹಲಿ ಡಿಸೆಂಬರ್ 18: ಜ್ಞಾನವಾಪಿ ಮಸೀದಿ (Gyanvapi survey case) ಆವರಣದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಇಂದು (ಸೋಮವಾರ) ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ (Varanasi district court) ಸಲ್ಲಿಸಿದೆ. 1,000 ಪುಟಗಳ ದಾಖಲೆಯನ್ನು ಮುಚ್ಚಿದ ಕವರ್‌ನಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಹಿಂದೂ ಅರ್ಜಿದಾರರ ಪರ ವಾದ ಮಂಡಿಸುತ್ತಿರುವ ವಕೀಲ ಮದನ್ ಮೋಹನ್ ಯಾದವ್ ಅವರು, “ಮುಚ್ಚಿದ ಕವರ್‌ನಲ್ಲಿ ವರದಿಯನ್ನು ಎಎಸ್‌ಐ ಅವರ ಸ್ಥಾಯಿ ವಕೀಲ ಅಮಿತ್ ಶ್ರೀವಾಸ್ತವ ಅವರು ನ್ಯಾಯಾಲಯದ ಮುಂದೆ ಇರಿಸಿದ್ದಾರೆ” ಎಂದು ಹೇಳಿದರು. ಎಎಸ್‌ಐನ ನಾಲ್ವರು ಹಿರಿಯ ಅಧಿಕಾರಿಗಳು ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ವರದಿಯನ್ನು ಸಾರ್ವಜನಿಕಗೊಳಿಸದಂತೆ ಜ್ಞಾನವಾಪಿ ಮಸೀದಿಯ ವಕೀಲರು ನ್ಯಾಯಾಲಯವನ್ನು ಕೋರಿದರು, ಆದರೆ ಹಿಂದೂ ಕಡೆಯವರು ವರದಿಯನ್ನು ಸಾರ್ವಜನಿಕಗೊಳಿಸುವಂತೆ ನ್ಯಾಯಾಲಯವನ್ನು ಒತ್ತಾಯಿಸಿದರು.

“ಮುಚ್ಚಿದ ಕವರ್‌ನಲ್ಲಿ ವರದಿಯನ್ನು ಸಲ್ಲಿಸಲು ಸಾಧ್ಯವಿಲ್ಲ, ಎಎಸ್‌ಐ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದೆ. ನಾವು ನ್ಯಾಯಾಲಯದ ಮುಂದೆ ನಮ್ಮ ಅರ್ಜಿಯನ್ನು ಸಲ್ಲಿಸಿದ್ದೇವೆ. ಎಎಸ್‌ಐ ವರದಿಯ ಪ್ರತಿಯನ್ನು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಾಗುವಂತೆ ಮಾಡಬೇಕು ಮತ್ತು ಈ ವಿಷಯವನ್ನು ಡಿಸೆಂಬರ್ 21 ರಂದು ವಿಚಾರಣೆಯ ಸಮಯದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಜ್ಞಾನವಾಪಿ ಸಮೀಕ್ಷೆ ಪ್ರಕರಣದಲ್ಲಿ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್  ಹೇಳಿದ್ದಾರೆ.

ಇದನ್ನೂ ಓದಿ: ಚಳಿಗಾಲದ ಅಧಿವೇಶನ: 30ಕ್ಕೂ ಹೆಚ್ಚು ಸಂಸದರನ್ನು ಅಮಾನತುಗೊಳಿಸಿದ ಲೋಕಸಭಾ ಸ್ಪೀಕರ್ 

ಡಿಸೆಂಬರ್ 21 ರಂದು ನ್ಯಾಯಾಲಯವು ವರದಿ ಬಗ್ಗೆ ವಿಚಾರಣೆ ನಡೆಸಲಿದೆ.

ವರದಿಯನ್ನು ಅಂತಿಮವಾಗಿ ಆರು ವಿಸ್ತರಣೆಗಳ ನಂತರ ಸಲ್ಲಿಸಲಾಯಿತು. ನವೆಂಬರ್ 2 ರಂದು, ಆಗಸ್ಟ್‌ನಲ್ಲಿ ಪ್ರಾರಂಭವಾದ ಸಮೀಕ್ಷೆಯನ್ನು “ಪೂರ್ಣಗೊಳಿಸಿದೆ” ಎಂದು ಅದು ಹೇಳಿದೆ. ಆದರೆ, ಸಮೀಕ್ಷೆ ವೇಳೆ ಬಳಸಿದ ಸಲಕರಣೆಗಳ ವಿವರಗಳನ್ನು ಸಲ್ಲಿಸುವುದು ಸೇರಿದಂತೆ ವರದಿಯನ್ನು ಸಂಪಾದಿಸಲು ಹೆಚ್ಚಿನ ಕಾಲಾವಕಾಶವನ್ನು ಎಎಸ್‌ಐ ಕೇಳಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Mon, 18 December 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ