ಜ್ಞಾನವಾಪಿ ಮಸೀದಿಯ ಎಎಸ್‌ಐ ಸಮೀಕ್ಷೆ ವರದಿ ಸಾರ್ವಜನಿಕಗೊಳಿಸಲಾಗುವುದು: ವಾರಣಾಸಿ ನ್ಯಾಯಾಲಯ

ಎಎಸ್ಐ ಡಿಸೆಂಬರ್ 19 ರಂದು ವಾರಣಾಸಿ ನ್ಯಾಯಾಲಯದಲ್ಲಿ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ತಾನು ಕೈಗೊಂಡ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಸಲ್ಲಿಸಿತ್ತು. ವಾರಣಾಸಿ ನ್ಯಾಯಾಲಯದ ನಿರ್ದೇಶನದ ಮೇರೆಗೆ ಎಎಸ್ಐ ಈ  ಸಮೀಕ್ಷೆಯನ್ನು ಕೈಗೊಂಡಿತ್ತು, ಮಸೀದಿಯನ್ನು ಹಿಂದೂ ದೇವಾಲಯದ ಪೂರ್ವ ಅಸ್ತಿತ್ವದಲ್ಲಿರುವ ರಚನೆಯ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸುವುದಕ್ಕಾಗಿತ್ತು ಈ ಸಮೀಕ್ಷೆ.

ಜ್ಞಾನವಾಪಿ ಮಸೀದಿಯ ಎಎಸ್‌ಐ ಸಮೀಕ್ಷೆ ವರದಿ ಸಾರ್ವಜನಿಕಗೊಳಿಸಲಾಗುವುದು: ವಾರಣಾಸಿ ನ್ಯಾಯಾಲಯ
ಜ್ಞಾನವಾಪಿ ಮಸೀದಿ
Follow us
| Updated By: Digi Tech Desk

Updated on:Feb 02, 2024 | 12:03 PM

ದೆಹಲಿ ಜನವರಿ 24: ಜ್ಞಾನವಾಪಿ ಮಸೀದಿಯ (Gyanvapi Mosque) ಕುರಿತಾದ ಭಾರತೀಯ ಪುರಾತತ್ವ ಸಮೀಕ್ಷೆಯ (ASI) ವರದಿಯನ್ನು ಸಾರ್ವಜನಿಕಗೊಳಿಸಲಾಗುವುದು. ಅದನ್ನು ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯವರಿಗೆ ಸಿಗುವಂತೆ ಮಾಡಲಾಗುವುದು ಎಂದು ವಾರಣಾಸಿ ನ್ಯಾಯಾಲಯವು (Varanasi court) ಇಂದು (ಜನವರಿ 24 ರಂದು) ತೀರ್ಪು ನೀಡಿದೆ.

ಎಎಸ್ಐ ಡಿಸೆಂಬರ್ 19 ರಂದು ವಾರಣಾಸಿ ನ್ಯಾಯಾಲಯದಲ್ಲಿ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ತಾನು ಕೈಗೊಂಡ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಸಲ್ಲಿಸಿತ್ತು. ವಾರಣಾಸಿ ನ್ಯಾಯಾಲಯದ ನಿರ್ದೇಶನದ ಮೇರೆಗೆ ಎಎಸ್ಐ ಈ  ಸಮೀಕ್ಷೆಯನ್ನು ಕೈಗೊಂಡಿತ್ತು, ಮಸೀದಿಯನ್ನು ಹಿಂದೂ ದೇವಾಲಯದ ಪೂರ್ವ ಅಸ್ತಿತ್ವದಲ್ಲಿರುವ ರಚನೆಯ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸುವುದಕ್ಕಾಗಿತ್ತು ಈ ಸಮೀಕ್ಷೆ.

ಸಂಸ್ಥೆಯು ತನ್ನ ಮನವಿಯಲ್ಲಿ, 1991 ರ ದಾವೆಯಲ್ಲಿ ಸಮೀಕ್ಷೆಯ ವರದಿಯನ್ನು ಪ್ರಸ್ತುತಪಡಿಸಬೇಕು ಎಂದು ಒತ್ತಿಹೇಳುತ್ತಾ, ಹೈಕೋರ್ಟ್‌ನ ಆದೇಶವನ್ನು ಎತ್ತಿ ತೋರಿಸಿದೆ.

ವರದಿಯ ವಿಷಯವನ್ನು ಸಾರ್ವಜನಿಕರಿಗೆ ಬಹಿರಂಗಪಡಿಸುವ ಸಂಭಾವ್ಯ ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಎಎಸ್ಐ, ವದಂತಿಗಳ ಹರಡುವಿಕೆ ಮತ್ತು ಇದು ನಡೆಯುತ್ತಿರುವ ಕೆಲಸದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಹೇಳಿತ್ತು.

ಇಂದು, ನ್ಯಾಯಾಲಯವು ಎರಡೂ ಕಡೆಯವರನ್ನು ಆಲಿಸಿದೆ. ಎಎಸ್‌ಐ ವರದಿಯ ಹಾರ್ಡ್ ಕಾಪಿಯನ್ನು ಎರಡೂ ಕಡೆಯವರಿಗೆ ಒದಗಿಸಲಾಗುವುದು ಎಂದು ಒಮ್ಮತಕ್ಕೆ ಬಂದಿತು. ಇಮೇಲ್ ಮೂಲಕ ವರದಿ ನೀಡಲು ಎಎಸ್‌ಐ ಆಕ್ಷೇಪ ವ್ಯಕ್ತಪಡಿಸಿದೆ. ಹಾಗಾಗಿ ವರದಿಯ ಹಾರ್ಡ್ ಕಾಪಿ ಪಡೆಯಲು ಎರಡೂ ಕಡೆಯವರು ಒಪ್ಪಿಕೊಂಡರು ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರದಲ್ಲಿ ಪೇಜಾವರ ಶ್ರೀಗಳ ಮುಂದಾಳತ್ವ: 48 ದಿನಗಳ ಕಾಲ ನೂರಾರು ಮಂದಿ ಪ್ರತ್ಯೇಕ ವೈದಿಕರಿಂದ ಯಜ್ಞಯಾಗ

ಜ್ಞಾನವಾಪಿ ಆವರಣದ ಸಮೀಕ್ಷೆಯ ಬಗ್ಗೆ

17 ನೇ ಶತಮಾನದ ಮಸೀದಿಯನ್ನು ಹಿಂದೂ ದೇವಾಲಯದ ಪೂರ್ವ ಅಸ್ತಿತ್ವದಲ್ಲಿರುವ ರಚನೆಯ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ASI ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಆವರಣದ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸಿತು. ವುಝೂಖಾನಾ  ಪ್ರದೇಶವನ್ನು ಹೊರತುಪಡಿಸಿ ಮಸೀದಿಯ ಸಂಪೂರ್ಣ ಆವರಣದಲ್ಲಿ ಸಮೀಕ್ಷೆ ನಡೆದಿದೆ.

ಸ್ಥಳದಲ್ಲಿ ಯಾವುದೇ ಉತ್ಖನನವನ್ನು ಮಾಡಲಾಗುವುದಿಲ್ಲ ಮತ್ತು ರಚನೆಗೆ ಯಾವುದೇ ಹಾನಿ ಉಂಟಾಗುವುದಿಲ್ಲ ಎಂದು ಎಎಸ್ಐ ಪರವಾಗಿ ಮಾಡಿದ ವಾಗ್ದಾನವನ್ನು ದಾಖಲಿಸಿಕೊಂಡು ಆದೇಶಗಳನ್ನು ನೀಡಲಾಯಿತು.

ಅಲಹಾಬಾದ್ ಹೈಕೋರ್ಟ್ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದ ನಂತರ ಮತ್ತು ಈ ಕ್ರಮವು “ನ್ಯಾಯದ ಹಿತಾಸಕ್ತಿಯಲ್ಲಿ ಅಗತ್ಯ” ಎಂದು ತೀರ್ಪು ನೀಡಿದ ನಂತರ ಸಮೀಕ್ಷೆಯು ಪ್ರಾರಂಭವಾಯಿತು. ಅಲಹಾಬಾದ್ ಹೈಕೋರ್ಟ್ ಆದೇಶದ ನಂತರ, ಜ್ಞಾನವಾಪಿ ಸಮಿತಿಯು ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತು. ಎಎಸ್‌ಐ ಸಮೀಕ್ಷೆ ಕುರಿತ ಹೈಕೋರ್ಟ್‌ನ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ಕಳೆದ ವರ್ಷ ಆಗಸ್ಟ್‌ನಲ್ಲಿ ನಿರಾಕರಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:00 pm, Wed, 24 January 24