AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Assembly Elections 2021: ಅಸ್ಸಾಂ ಉಳಿಸಿ ಅಭಿಯಾನದ ವಿಜೇತರಿಗೆ ಕಾಂಗ್ರೆಸ್​ನಿಂದ ಐಫೋನ್, ನಗದು ಬಹುಮಾನ

Priyanka Gandhi Vadra Campaign: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮಾರ್ಚ್ 1ರಂದು ಅಸ್ಸಾಂನಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ.

Assam Assembly Elections 2021: ಅಸ್ಸಾಂ ಉಳಿಸಿ ಅಭಿಯಾನದ ವಿಜೇತರಿಗೆ ಕಾಂಗ್ರೆಸ್​ನಿಂದ  ಐಫೋನ್, ನಗದು ಬಹುಮಾನ
ಪ್ರಿಯಾಂಕಾ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on: Feb 28, 2021 | 3:44 PM

ಗುವಾಹಟಿ: ಅಸ್ಸಾಂನಲ್ಲಿ ಬಿಜೆಪಿ ಸರ್ಕಾರವನ್ನು ಇಳಿಸಿ ಅಧಿಕಾರಕ್ಕೇರಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್ ಪಕ್ಷ ಅಸ್ಸಾಂ ಬಚಾವೋ (ಅಸ್ಸಾಂ ಉಳಿಸಿ) ಎಂಬ ಅಭಿಯಾನ ನಡೆಸಿತ್ತು. ರಾಜ್ಯದಲ್ಲಿನ ಸಮಸ್ಯೆಗಳು, ಅಲ್ಲಿನ ಜನರ ಅನುಭವಿಸುತ್ತಿರುವ ಕಷ್ಟಗಳ ಬಗ್ಗೆ ಎರಡು ನಿಮಿಷದ ವಿಡಿಯೊ ಮಾಡಿ #AssamBachao ಎಂಬ ಹ್ಯಾಷ್ ಟ್ಯಾಗ್ ಬಳಸವಂತೆ ಕಾಂಗ್ರೆಸ್, ಅಲ್ಲಿನ ಜನರಿಗೆ ಆಹ್ವಾನ ನೀಡಿತ್ತು. ಈ ಸ್ಪರ್ಧೆಯ ವಿಜೇತರಿಗೆ ಕಾಂಗ್ರೆಸ್ ಐಫೋನ್ ಮತ್ತು ನಗದು ಬಹುಮಾನ ನೀಡಿದೆ. ಶನಿವಾರ ಗುವಾಹಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ (ಎಪಿಸಿಸಿ) ವಿಜೇತರಿಗೆ ಬಹುಮಾನ ವಿತರಿಸಿದೆ. ಸಾಮಾನ್ಯ ಜನರಿಗೆ ಏನು ಸಮಸ್ಯೆ ಇದೆ ಎಂಬುದನ್ನು ಆಲಿಸಿ ಆನಂತರ ಅದಕ್ಕೆ ಪರಿಹಾರ ಕೈ ಗೊಳ್ಳುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ.

ಏನಿದು ಅಭಿಯಾನ? ಚುನಾವಣೆಗೆ ಸಿದ್ಧವಾಗಿರುವ ಅಸ್ಸಾಂನಲ್ಲಿ ವಿನೂತನ ಅಭಿಯಾನ ಆರಂಭಿಸಿರುವ ಕಾಂಗ್ರೆಸ್, ಅಲ್ಲಿನ ಜನರ ಕಷ್ಟಗಳನ್ನು ಆಲಿಸಲು ಮುಂದಾಗಿದೆ. ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಎನ್​ಜಿಒ ಮತ್ತಿತರ ಸಂಘ ಸಂಸ್ಥೆಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಆಲಿಸಿದ ನಂತರ ಚುನಾವಣಾ ಪ್ರಣಾಳಿಕೆ ಸಿದ್ಧಪಡಿಸಿದ್ದಾರೆ. ಅಸ್ಸಾಂನಲ್ಲಿ 3 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27ಕ್ಕೆ ಮೊದಲ ಹಂತದ ಮತದಾನ ನಡೆಯಲಿದೆ.

ಮಾರ್ಚ್ 1ಕ್ಕೆ ಪ್ರಚಾರ ಆರಂಭಿಸಲಿದ್ದಾರೆ ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮಾರ್ಚ್ 1ರಂದು ಅಸ್ಸಾಂನಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಚುನಾವಣಾ ಪ್ರಚಾರ ಆರಂಭಿಸುವ ಮುನ್ನ ಗುವಾಹಟಿಯಲ್ಲಿರುವ ಪ್ರಸಿದ್ಧ ತೀರ್ಥಸ್ಥಳವಾದ ಕಾಮಾಖ್ಯಾ ದೇಗುಲಕ್ಕೆ ಭೇಟಿ ನೀಡಲಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ತೇಜ್​ಪುರ್‌ ಸೇರಿದಂತೆ ಉತ್ತರ ಅಸ್ಸಾಂನಲ್ಲಿ ಮಾರ್ಚ್ 2ರಂದು ಪ್ರಿಯಾಂಕಾ ಪ್ರಚಾರ ನಡೆಸಲಿದ್ದು, ಎರಡು ದಿನ ಅಸ್ಸಾಂನಲ್ಲಿರಲಿದ್ದಾರೆ.

ಪ್ರಿಯಾಂಕಾ ಸಹೋದರ ರಾಹುಲ್ ಗಾಂಧಿ ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಫೆಬ್ರವರಿ ತಿಂಗಳ ಆರಂಭದಲ್ಲಿ ಅಸ್ಸಾಂಗೆ ಭೇಟಿ ನೀಡಿದ್ದ ರಾಹುಲ್, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಈ ಬಾರಿ ಚುನಾವಣೆಯ ಅಜೆಂಡಾ ಆಗಲಿದೆ ಎಂದಿದ್ದರು. ಸಿಎಎ ವಿರೋಧ ಘೋಷಣೆ ಇರುವ ಸ್ಕಾರ್ಫ್ ಧರಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಾಹುಲ್, ನಾನು ಧರಿಸಿರುವ ಸ್ಕಾರ್ಫ್ ನಲ್ಲಿ ಸಿಎಎ ಎಂಬ ಬರಹದ ಮೇಲೆ ಕ್ರಾಸ್ ಹಾಕಲಾಗಿದೆ. ಇದರರ್ಥ ಏನೇ ಆದರೂ ಸಿಎಎ ಜಾರಿಗೆ ತರಲು ಬಿಡುವುದಿಲ್ಲ ಎಂದು ಹೇಳಿದ್ದರು.

ಅಸ್ಸಾಂ ಅರಣ್ಯಗಳನ್ನು ಉಳಿಸಲು ಮೋದಿ ಕರೆ ಭಾನುವಾರ ಮನ್ ಕೀ ಬಾತ್ ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅಸ್ಸಾಂನಲ್ಲಿನ ಅರಣ್ಯ ರಕ್ಷಣೆಗೆ ಕರೆ ನೀಡಿದ್ದಾರೆ. ಇಲ್ಲಿನ ಕಾಝಿರಂಗಾ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಣೆ ಪ್ರಾಧಿಕಾರವು ವಾರ್ಷಿಕ ಗಣತಿ ಮಾಡುತ್ತದೆ. ಕಳೆದ ಮೂರು ವಾರಗಳ ಹಿಂದೆ ಇದೇ ರೀತಿಯ ಸಮೀಕ್ಷೆ ನಡೆಸಿತ್ತು. ಸಮೀಕ್ಷೆಯ ಪ್ರಕಾರ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ನೀರು ಹಕ್ಕಿಗಳ (ಜಲಪಕ್ಷಿ) ಸಂಖ್ಯೆ ಶೇಕಡಾ 175ರಷ್ಚು ಏರಿಕೆಯಾಗಿದೆ. ಒಟ್ಟು 112 ಹಕ್ಕಿಯ ಪ್ರಬೇಧಗಳು ಇಲ್ಲಿ ಕಂಡು ಬಂದಿದೆ ಎಂದಿದ್ದಾರೆ.ಈ ಪೈಕಿ 58 ಪ್ರಬೇಧದ ಪಕ್ಷಿಗಳು ಚಳಿಗಾಲದಲ್ಲಿ ಯುರೋಪ್, ಮಧ್ಯ ಏಷ್ಯಾ ಮತ್ತು ಪೂರ್ವ ಏಷ್ಯಾದಿಂದ ವಲಸೆ ಬಂದವುಗಳಾಗಿವೆ. ಇಲ್ಲಿ ಜಲ ಸಂರಕ್ಷಣೆ ನಡೆಯುತ್ತಿದ್ದು ಮಾನವ ಹಸ್ತಕ್ಷೇಪ ಕಡಿಮೆ ಇದೆ. ಕೆಲವೊಮ್ಮೆ ಮಾನವನ ಹಸ್ತಕ್ಷೇಪ ಕೂಡಾ ಮುಖ್ಯವಾಗುತ್ತದೆ ಎಂದು ಹೇಳಿದ ಮೋದಿ ಪದ್ಮಶ್ರೀ ಪುರಸ್ಕೃತ ಜಯದೇವ್ ಪಯೇಂಗಾ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ .

 ಇದನ್ನೂ ಓದಿ: ಅಸ್ಸಾಂ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಮೈತ್ರಿ ತೊರೆದು ಕಾಂಗ್ರೆಸ್​ ಜತೆ ಕೈಜೋಡಿಸಿದ ಬಿಪಿಎಫ್

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ