Assam Assembly Elections 2021: ಅಸ್ಸಾಂನ 40 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಘೋಷಿಸಿದ ಕಾಂಗ್ರೆಸ್

ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಗೊಂಡ ಗೊಲಾಘಾಟ್ ಬಿಟುಪಾನ್ ಸೈಕಲ ಗೊಲಾಘಾಟ್​ನಿಂದ ಅಭ್ಯರ್ಥಿಯಾಗಿ ಘೋಷಣೆಗೊಂಡಿದ್ದಾರೆ. ಅದೇ ಕ್ಷೇತ್ರದಲ್ಲಿ ಕಾಂಗ್ರೆಸ್ ಮಾಜಿ ಸಚಿವ, ಈಗ ಬಿಜೆಪಿ ಸೇರಿರುವ ಅಜಂತಾ ನಿಯೋಗ್ ಬಿಜೆಪಿಯಿಂದ ಟಿಕೆಟ್ ಪಡೆದಿದ್ದಾರೆ.

Assam Assembly Elections 2021: ಅಸ್ಸಾಂನ 40 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಘೋಷಿಸಿದ ಕಾಂಗ್ರೆಸ್
ಕಾಂಗ್ರೆಸ್​ ಧ್ವಜ (ಪ್ರಾತಿನಿಧಿಕ ಚಿತ್ರ)
Follow us
| Updated By: ganapathi bhat

Updated on:Apr 06, 2022 | 7:21 PM

ಗುವಾಹಟಿ: ಮುಂಬರುವ ವಿಧಾನಸಭಾ ಚುನಾವಣೆಗೆ ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ನಿನ್ನೆ (ಮಾರ್ಚ್ 6) ಬಿಡುಗಡೆಗೊಳಿಸಿದೆ. ರಾಜ್ಯದ 40 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿಯನ್ನು ಪಕ್ಷ ಬಿಡುಗಡೆ ಮಾಡಿದೆ. ಕಾಂಗ್ರೆಸ್​ನ ಹಾಲಿ ಶಾಸಕರನ್ನು ಮತ್ತೆ ಹೊಸ ಅಭ್ಯರ್ಥಿಗಳಾಗಿ ಉಳಿಸಿಕೊಂಡಿದೆ. ಅಸ್ಸಾಂ ವಿರೋಧ ಪಕ್ಷದ ನಾಯಕರೂ ಆಗಿರುವ ದೇವದತ್ತ ಸೈಕಲ ನಜಿರಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಮಾಜಿ ಸಚಿವ ರಕಿಬುಲ್ ಹುಸೈನ್ ಸಮುಗುರಿಯಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಚಹಾ ಕೆಲಸಗಾರ ಪಂಗಡದ ಕಾಂಗ್ರೆಸ್ ಶಾಸಕರಾದ ರುಪ್​ಜ್ಯೋತಿ ಕುರ್ಮಿ ಮರಿಯಾನಿಯಿಂದ ಮತ್ತು ರೋಸ್​ಲಿನಾ ಟಿರ್ಕಿ ಸರುಪತೆರ್​ನಿಂದ ಸ್ಪರ್ಧೆ ಮಾಡಲಿದ್ದಾರೆ.

ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಗೊಂಡ ಗೊಲಾಘಾಟ್ ಬಿಟುಪಾನ್ ಸೈಕಲ ಗೊಲಾಘಾಟ್​ನಿಂದ ಅಭ್ಯರ್ಥಿಯಾಗಿ ಘೋಷಣೆಗೊಂಡಿದ್ದಾರೆ. ಅದೇ ಕ್ಷೇತ್ರದಲ್ಲಿ ಕಾಂಗ್ರೆಸ್ ಮಾಜಿ ಸಚಿವ, ಈಗ ಬಿಜೆಪಿ ಸೇರಿರುವ ಅಜಂತಾ ನಿಯೋಗ್ ಬಿಜೆಪಿಯಿಂದ ಟಿಕೆಟ್ ಪಡೆದಿದ್ದಾರೆ. ರಾಜೀವ್ ಲೋಚನ್ ಪೆಗು ಮಜುಲಿಯಿಂದ (ST ಮೀಸಲಾತಿ) ರಾಣಾ ಗೋಸ್ವಾಮಿ ಜೊರ್​ಹಾತ್​ನಿಂದ ಸ್ಪರ್ಧಿಸಲಿದ್ದಾರೆ. ತೇಜ್​ಪುರ್​ನಿಂದ ಅನುಜ್ ಕುಮಾರ್ ದಿಬ್ರುಘರ್​ನಿಂದ ರಾಜ್​ಕುಜಮಾರ್ ನೀಲನೇತ್ರ ಹಾಗೂ ದಿಗ್ಬೊಯ್​ನಿಂದ ಶಿವನಾಥ್ ಚೆಟಿಯಾ ಕೈ ಪಕ್ಷದ ಚುನಾವಣಾ ಅಭ್ಯರ್ಥಿಗಳಾಗಿದ್ದಾರೆ.

ಅಸ್ಸಾಂನಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರದ ಗದ್ದುಗೆಗೆ ಏರುವ ಉತ್ಸಾಹ ತೋರಿದೆ. ಬಿಜೆಪಿ ಪಕ್ಷದ ಭರ್ಜರಿ ಪ್ರಚಾರ ಹಾಗೂ ಸವಾಲುಗಳ ನಡುವೆಯೂ ಕಾಂಗ್ರೆಸ್ ಗೆಲುವಿನ ಹೋರಾಟ ನಡೆಸುತ್ತಿದೆ. ಬಿಜೆಪಿ ಪರವಾಗಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ನಾಯಕ ಮತ್ತು ಗೃಹ ಸಚಿವ ಅಮಿತ್ ಶಾ ಪ್ರಚಾರ ನಡೆಸಿದರೆ. ಕಾಂಗ್ರೆಸ್ ಪರವಾಗಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಬಿರುಸಿನ ಯಾತ್ರೆ ಕೈಗೊಂಡಿದ್ದಾರೆ.

ಕಾಂಗ್ರೆಸ್ ನೇತೃತ್ವದ ಮಹಾಜೋತ್ ಅಥವಾ ಗ್ರಾಂಡ್ ಅಲಯನ್ಸ್ AIUDF, BPF, CPI(M), CPI, CPI(ML) ಮತ್ತು ಅಂಚಲಿಕ್ ಗಣ ಮೋರ್ಚಾ ಪಕ್ಷಗಳನ್ನು ಹೊಂದಿದೆ. ತನ್ನ ಮೈತ್ರಿ ಪಕ್ಷಗಳೊಂದಿಗೆ ಮಾತುಕತೆಯಲ್ಲಿ ತೊಡಗಿಕೊಂಡಿರುವ ಕಾಂಗ್ರೆಸ್ ಸೀಟು ಹಂಚಿಕೆ ವಿಚಾರವಾಗಿ ಚರ್ಚೆ ನಡೆಸುತ್ತಿದೆ.

ಇದನ್ನೂ ಓದಿ: Assam Elections 2021: ಅಸ್ಸಾಂನಲ್ಲೂ ಬಿಜೆಪಿ-ಕಾಂಗ್ರೆಸ್ ನಡುವೆ ಸಮರ ಜೋರು

ಇದನ್ನೂ ಓದಿ: Assam Assembly Elections 2021: ಅಸ್ಸಾಂ ಉಳಿಸಿ ಅಭಿಯಾನದ ವಿಜೇತರಿಗೆ ಕಾಂಗ್ರೆಸ್​ನಿಂದ ಐಫೋನ್, ನಗದು ಬಹುಮಾನ

Published On - 6:47 pm, Sun, 7 March 21

ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್