AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Assembly Elections 2021: ಅಸ್ಸಾಂನ 40 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಘೋಷಿಸಿದ ಕಾಂಗ್ರೆಸ್

ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಗೊಂಡ ಗೊಲಾಘಾಟ್ ಬಿಟುಪಾನ್ ಸೈಕಲ ಗೊಲಾಘಾಟ್​ನಿಂದ ಅಭ್ಯರ್ಥಿಯಾಗಿ ಘೋಷಣೆಗೊಂಡಿದ್ದಾರೆ. ಅದೇ ಕ್ಷೇತ್ರದಲ್ಲಿ ಕಾಂಗ್ರೆಸ್ ಮಾಜಿ ಸಚಿವ, ಈಗ ಬಿಜೆಪಿ ಸೇರಿರುವ ಅಜಂತಾ ನಿಯೋಗ್ ಬಿಜೆಪಿಯಿಂದ ಟಿಕೆಟ್ ಪಡೆದಿದ್ದಾರೆ.

Assam Assembly Elections 2021: ಅಸ್ಸಾಂನ 40 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಘೋಷಿಸಿದ ಕಾಂಗ್ರೆಸ್
ಕಾಂಗ್ರೆಸ್​ ಧ್ವಜ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Apr 06, 2022 | 7:21 PM

Share

ಗುವಾಹಟಿ: ಮುಂಬರುವ ವಿಧಾನಸಭಾ ಚುನಾವಣೆಗೆ ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ನಿನ್ನೆ (ಮಾರ್ಚ್ 6) ಬಿಡುಗಡೆಗೊಳಿಸಿದೆ. ರಾಜ್ಯದ 40 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿಯನ್ನು ಪಕ್ಷ ಬಿಡುಗಡೆ ಮಾಡಿದೆ. ಕಾಂಗ್ರೆಸ್​ನ ಹಾಲಿ ಶಾಸಕರನ್ನು ಮತ್ತೆ ಹೊಸ ಅಭ್ಯರ್ಥಿಗಳಾಗಿ ಉಳಿಸಿಕೊಂಡಿದೆ. ಅಸ್ಸಾಂ ವಿರೋಧ ಪಕ್ಷದ ನಾಯಕರೂ ಆಗಿರುವ ದೇವದತ್ತ ಸೈಕಲ ನಜಿರಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಮಾಜಿ ಸಚಿವ ರಕಿಬುಲ್ ಹುಸೈನ್ ಸಮುಗುರಿಯಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಚಹಾ ಕೆಲಸಗಾರ ಪಂಗಡದ ಕಾಂಗ್ರೆಸ್ ಶಾಸಕರಾದ ರುಪ್​ಜ್ಯೋತಿ ಕುರ್ಮಿ ಮರಿಯಾನಿಯಿಂದ ಮತ್ತು ರೋಸ್​ಲಿನಾ ಟಿರ್ಕಿ ಸರುಪತೆರ್​ನಿಂದ ಸ್ಪರ್ಧೆ ಮಾಡಲಿದ್ದಾರೆ.

ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಗೊಂಡ ಗೊಲಾಘಾಟ್ ಬಿಟುಪಾನ್ ಸೈಕಲ ಗೊಲಾಘಾಟ್​ನಿಂದ ಅಭ್ಯರ್ಥಿಯಾಗಿ ಘೋಷಣೆಗೊಂಡಿದ್ದಾರೆ. ಅದೇ ಕ್ಷೇತ್ರದಲ್ಲಿ ಕಾಂಗ್ರೆಸ್ ಮಾಜಿ ಸಚಿವ, ಈಗ ಬಿಜೆಪಿ ಸೇರಿರುವ ಅಜಂತಾ ನಿಯೋಗ್ ಬಿಜೆಪಿಯಿಂದ ಟಿಕೆಟ್ ಪಡೆದಿದ್ದಾರೆ. ರಾಜೀವ್ ಲೋಚನ್ ಪೆಗು ಮಜುಲಿಯಿಂದ (ST ಮೀಸಲಾತಿ) ರಾಣಾ ಗೋಸ್ವಾಮಿ ಜೊರ್​ಹಾತ್​ನಿಂದ ಸ್ಪರ್ಧಿಸಲಿದ್ದಾರೆ. ತೇಜ್​ಪುರ್​ನಿಂದ ಅನುಜ್ ಕುಮಾರ್ ದಿಬ್ರುಘರ್​ನಿಂದ ರಾಜ್​ಕುಜಮಾರ್ ನೀಲನೇತ್ರ ಹಾಗೂ ದಿಗ್ಬೊಯ್​ನಿಂದ ಶಿವನಾಥ್ ಚೆಟಿಯಾ ಕೈ ಪಕ್ಷದ ಚುನಾವಣಾ ಅಭ್ಯರ್ಥಿಗಳಾಗಿದ್ದಾರೆ.

ಅಸ್ಸಾಂನಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರದ ಗದ್ದುಗೆಗೆ ಏರುವ ಉತ್ಸಾಹ ತೋರಿದೆ. ಬಿಜೆಪಿ ಪಕ್ಷದ ಭರ್ಜರಿ ಪ್ರಚಾರ ಹಾಗೂ ಸವಾಲುಗಳ ನಡುವೆಯೂ ಕಾಂಗ್ರೆಸ್ ಗೆಲುವಿನ ಹೋರಾಟ ನಡೆಸುತ್ತಿದೆ. ಬಿಜೆಪಿ ಪರವಾಗಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ನಾಯಕ ಮತ್ತು ಗೃಹ ಸಚಿವ ಅಮಿತ್ ಶಾ ಪ್ರಚಾರ ನಡೆಸಿದರೆ. ಕಾಂಗ್ರೆಸ್ ಪರವಾಗಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಬಿರುಸಿನ ಯಾತ್ರೆ ಕೈಗೊಂಡಿದ್ದಾರೆ.

ಕಾಂಗ್ರೆಸ್ ನೇತೃತ್ವದ ಮಹಾಜೋತ್ ಅಥವಾ ಗ್ರಾಂಡ್ ಅಲಯನ್ಸ್ AIUDF, BPF, CPI(M), CPI, CPI(ML) ಮತ್ತು ಅಂಚಲಿಕ್ ಗಣ ಮೋರ್ಚಾ ಪಕ್ಷಗಳನ್ನು ಹೊಂದಿದೆ. ತನ್ನ ಮೈತ್ರಿ ಪಕ್ಷಗಳೊಂದಿಗೆ ಮಾತುಕತೆಯಲ್ಲಿ ತೊಡಗಿಕೊಂಡಿರುವ ಕಾಂಗ್ರೆಸ್ ಸೀಟು ಹಂಚಿಕೆ ವಿಚಾರವಾಗಿ ಚರ್ಚೆ ನಡೆಸುತ್ತಿದೆ.

ಇದನ್ನೂ ಓದಿ: Assam Elections 2021: ಅಸ್ಸಾಂನಲ್ಲೂ ಬಿಜೆಪಿ-ಕಾಂಗ್ರೆಸ್ ನಡುವೆ ಸಮರ ಜೋರು

ಇದನ್ನೂ ಓದಿ: Assam Assembly Elections 2021: ಅಸ್ಸಾಂ ಉಳಿಸಿ ಅಭಿಯಾನದ ವಿಜೇತರಿಗೆ ಕಾಂಗ್ರೆಸ್​ನಿಂದ ಐಫೋನ್, ನಗದು ಬಹುಮಾನ

Published On - 6:47 pm, Sun, 7 March 21

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು