AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Assembly Elections 2021: ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದ ಕಾಂಗ್ರೆಸ್; ಸಿಎಎ ಕಿತ್ತೊಗೆಯುತ್ತೇವೆ ಎಂದು ಭರವಸೆ

ಪೌರತ್ವ ತಿದ್ದುಪಡಿ ಕಾಯ್ದೆ 2019ನ್ನು ಬಹಿಷ್ಕರಿಸುವುದಾಗಿ ಹೇಳಿರುವ ಕಾಂಗ್ರೆಸ್, 5 ಲಕ್ಷ ಸರ್ಕಾರಿ ಉದ್ಯೋಗ ಮತ್ತು ತಿಂಗಳಿಗೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದಾಗಿ ಭರವಸೆ ನೀಡಿದೆ.

Assam Assembly Elections 2021: ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದ ಕಾಂಗ್ರೆಸ್; ಸಿಎಎ ಕಿತ್ತೊಗೆಯುತ್ತೇವೆ ಎಂದು ಭರವಸೆ
ರಾಹುಲ್ ಗಾಂಧಿ
TV9 Web
| Edited By: |

Updated on:Apr 06, 2022 | 6:57 PM

Share

ಗುವಾಹಟಿ: ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಇಂದು (ಮಾರ್ಚ್ 20) ತನ್ನ ಪ್ರಣಾಳಿಕೆ ಬಿಡುಗಡೆಗೊಳಿಸಿದೆ. ಅಸ್ಸಾಂನಲ್ಲಿ ಚುನಾವಣಾ ಪ್ರಚಾರದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದಾರೆ. ಅಸ್ಸಾಂ ಜನರ ಆಕಾಂಕ್ಷೆ ಈ ಪ್ರಣಾಳಿಕೆಯಲ್ಲಿದೆ ಎಂದು ಅವರು ಹೇಳಿದ್ದಾರೆ.

ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದ ರಾಹುಲ್ ಗಾಂಧಿ ಬಳಿಕ ಭಾರತೀಯ ಜನತಾ ಪಾರ್ಟಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಸ್ಸಾಂನ ಅಸ್ಮಿತೆಯ ಮೇಲೆ ಕೇಸರಿ ಪಾಳಯ ದಾಳಿ ಮಾಡುತ್ತಿದೆ. ಆರ್​ಎಸ್​ಎಸ್ ಹಾಗೂ ಬಿಜೆಪಿ ದೇಶದ ವೈವಿದ್ಯಮಯ ಸಂಸ್ಕೃತಿಯ ಮೇಲೆ ದಾಳಿ ಮಾಡುತ್ತಿರುವುದು ನಮಗೆ ತಿಳಿದಿದೆ. ನಮ್ಮ ಭಾಷೆ, ಇತಿಹಾಸ, ಯೋಚನಾ ಕ್ರಮ, ಜೀವನ ಕ್ರಮ ಎಲ್ಲದರ ಮೇಲೂ ಬಿಜೆಪಿ ಸವಾರಿ ಮಾಡಿದೆ. ಇದರ ವಿರುದ್ಧ ಕಾಂಗ್ರೆಸ್ ನಿಲ್ಲುತ್ತದೆ. ಅಸ್ಸಾಂನ ಅಸ್ಮಿತೆಯನ್ನು ಉಳಿಸುವಲ್ಲಿ ಈ ಪ್ರಣಾಳಿಕೆ ಭರವಸೆ ನೀಡುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ 2019ನ್ನು ಬಹಿಷ್ಕರಿಸುವುದಾಗಿ ಹೇಳಿರುವ ಕಾಂಗ್ರೆಸ್, 5 ಲಕ್ಷ ಸರ್ಕಾರಿ ಉದ್ಯೋಗ ಮತ್ತು ತಿಂಗಳಿಗೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದಾಗಿ ಭರವಸೆ ನೀಡಿದೆ. ಚಹಾ ಕೆಲಸಗಾರರಿಗೆ ಕನಿಷ್ಠ ಕೂಲಿ ರೂ. 365 ನೀಡುವುದಾಗಿಯೂ ಪ್ರಣಾಳಿಕೆ ತಿಳಿಸಿದೆ.

ಅಸ್ಸಾಂನಲ್ಲಿ 126 ವಿಧಾನಸಭಾ ಸ್ಥಾನಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೇ 2ರಂದು ಚುನಾವಣಾ ತೀರ್ಪು ಪ್ರಕಟವಾಗಲಿದೆ. ಚುನಾವಣೆಗೆ ಪೂರ್ವಭಾವಿಯಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಇಂದು ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಅಸ್ಸಾಂನಲ್ಲಿ ಪರಸ್ಪರ ಟೀಕಾಪ್ರಹಾರ ಮಾಡಿಕೊಂಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೇವಲ ಎರಡು ಮೂರು ಶ್ರೀಮಂತ ಉದ್ಯಮಿಗಳಿಗಾಗಿ ಕೆಲಸ ಮಾಡುತ್ತಾರೆ. ಸಾಮಾನ್ಯ ಜನರಿಗಾಗಿ ಅವರು ಕೆಲಸ ಮಾಡುವುದಿಲ್ಲ ಎಂದು ರಾಹುಲ್ ಗಾಂಧಿ ಇಂದು ಅಸ್ಸಾಂ ಜೊರ್ಹಾಟ್ ಜಿಲ್ಲೆಯ ಮರಿಯಾನಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಯುಪಿಎ ಸರ್ಕಾರದ ಅವಧಿಯಲ್ಲಿ ಗ್ಯಾಸ್ ಸಿಲಿಂಡರ್​ನ ಬೆಲೆ ರೂ. 400 ಆಗಿತ್ತು. ಎನ್​ಡಿಎ ಆಡಳಿತದಲ್ಲಿ ಈಗ ಗ್ಯಾಸ್ ಬೆಲೆ 900 ರೂ. ಆಗಿದೆ. ಇದರಿಂದ ಯಾರಿಗೆ ಲಾಭ? ಬಡವರಿಗಲ್ಲ. 2-3 ಉದ್ಯಮಿಗಳಿಗಷ್ಟೇ ಲಾಭ ಎಂದು ಕಾಂಗ್ರೆಸ್ ಬೆಲೆ ಏರಿಕೆ ವಿರುದ್ಧ ಹರಿಹಾಯ್ದಿದ್ದಾರೆ.

ಇದನ್ನೂ ಓದಿ: ಸಂತೋಷ ಸಚಿವಾಲಯ, ಉದ್ಯಮಗಳಿಗೆ ಪ್ರೋತ್ಸಾಹ; ಕೇರಳ ಯುಡಿಎಫ್ ಪ್ರಣಾಳಿಕೆಯ ಮುಖ್ಯಾಂಶಗಳು ಇಲ್ಲಿವೆ

Tamil Nadu Assembly Elections 2021: ಮದ್ಯದಂಗಡಿ ಮುಚ್ಚುವ ಭರವಸೆ, ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ; ಆಕರ್ಷಕ ಪ್ರಣಾಳಿಕೆ ಘೋಷಿಸಿದ ಕಾಂಗ್ರೆಸ್

Published On - 8:38 pm, Sat, 20 March 21

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!