AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Assembly Elections 2021: ಜನರ ನಡುವೆ ಬಿರುಕು ಮೂಡಿಸಲು ದ್ವೇಷ ಮಾರಾಟ: ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಯಾವ ಧರ್ಮವೂ ವೈರತ್ವವನ್ನು ಕಲಿಸುವುದಿಲ್ಲ. ಆದರೆ, ಬಿಜೆಪಿ ಜನರ ನಡುವೆ ಬಿರುಕು ಮೂಡಿಸಲು ದ್ವೇಷ ಮಾರಾಟ ಮಾಡುತ್ತಿದೆ ಎಂದು ದಿಬ್ರುಘರ್​ನ ಕಾಲೇಜು ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ರಾಹುಲ್ ಗಾಂಧಿ ಹೇಳಿದರು.

Assam Assembly Elections 2021: ಜನರ ನಡುವೆ ಬಿರುಕು ಮೂಡಿಸಲು ದ್ವೇಷ ಮಾರಾಟ: ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಅಸ್ಸಾಂನಲ್ಲಿ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
TV9 Web
| Updated By: ganapathi bhat|

Updated on:Apr 06, 2022 | 6:57 PM

Share

ಗುವಾಹಾಟಿ: ಅಸ್ಸಾಂನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಯಾಗಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು (ಮಾರ್ಚ್ 19) ಅಸ್ಸಾಂನಲ್ಲಿ ತಿಳಿಸಿದರು. ಮುಂಬರುವ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಪ್ರಚಾರದಲ್ಲಿ ತೊಡಗಿರುವ ಕೈ ನಾಯಕ ಹೀಗೆ ಭರವಸೆ ನೀಡಿದರು.

ಯಾವ ಧರ್ಮವೂ ವೈರತ್ವವನ್ನು ಕಲಿಸುವುದಿಲ್ಲ. ಆದರೆ, ಬಿಜೆಪಿ ಜನರ ನಡುವೆ ಬಿರುಕು ಮೂಡಿಸಲು ದ್ವೇಷ ಮಾರಾಟ ಮಾಡುತ್ತಿದೆ ಎಂದು ದಿಬ್ರುಘರ್​ನ ಕಾಲೇಜು ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ರಾಹುಲ್ ಗಾಂಧಿ ಹೇಳಿದರು. ಬಿಜೆಪಿಯವರು ಎಲ್ಲಿಗೆ ಹೋಗುತ್ತಾರೋ ಅಲ್ಲೆಲ್ಲಾ ದ್ವೇಷ ಹಬ್ಬಿಸುತ್ತಾರೆ. ಸಮಾಜ ಒಡೆಯಲು ದ್ವೇಷವನ್ನೇ ಅಸ್ತ್ರವಾಗಿ ಬಳಸುತ್ತಾರೆ. ಆದರೆ, ಪ್ರೀತಿ ಮತ್ತು ಸಹಬಾಳ್ವೆ ಹರಡುವ ಬಗ್ಗೆ ಕಾಂಗ್ರೆಸ್ ಪಕ್ಷ ಭರವಸೆ ನೀಡುತ್ತದೆ ಎಂದು ತಿಳಿಸಿದರು.

ಆರ್​ಎಸ್​ಎಸ್ ಮೇಲೆ ಸೂಚ್ಯ ದಾಳಿ ನಡೆಸಿದ ರಾಹುಲ್ ಗಾಂಧಿ, ನಾಗ್ಪುರ್​ನ ಒಂದು ಶಕ್ತಿ ಇಡೀ ದೇಶವನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ. ದೇಶದ ಭವಿಷ್ಯವಾಗಿರುವ ಯುವಜನರು ಪ್ರೀತಿ ಹಾಗೂ ಸ್ಥೈರ್ಯದಿಂದ ಇದಕ್ಕೆ ತಡೆಯೊಡ್ಡಬೇಕು ಎಂದು ಕರೆ ನೀಡಿದರು. ಬಳಿಕ, ಚಬ್ರುಘರ್​ನ ಚಬುವಾ ಪ್ರದೇಶದಲ್ಲಿ ಚಹಾ ಕೆಲಸಗಾರರೊಂದಿಗೆ ಸಂವಾದ ನಡೆಸಿದರು.

ಅಸ್ಸಾಂನಲ್ಲಿ ಎರಡು ದಿನ ಭೇಟಿಯಲ್ಲಿರುವ ರಾಹುಲ್ ಗಾಂಧಿ, ಶನಿವಾರ (ಮಾರ್ಚ್ 20) ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಲಿದ್ದಾರೆ.

ಇದನ್ನೂ ಓದಿ: Assam Assembly elections 2021: ಕಾಂಗ್ರೆಸ್ ಜಿನ್ನಾರ ಹೆಜ್ಜೆ ಅನುಸರಿಸುತ್ತಿದ್ದು, ದೇಶವನ್ನು ನಾಶ ಮಾಡಲಿದೆ: ಶಿವರಾಜ್ ಸಿಂಗ್ ಚೌಹಾಣ್

Assam Assembly Elections 2021: ರಾಜಕೀಯದಲ್ಲಿ ಬಿಜೆಪಿ ನನ್ನನ್ನು ಮುಗಿಸಲು ಯತ್ನಿಸುತ್ತಿದೆ: ಎಐಯುಡಿಎಫ್ ಮುಖ್ಯಸ್ಥ ಮೌಲಾನಾ ಬದ್ರುದ್ದೀನ್ ಅಜ್ಮಲ್

Published On - 7:21 pm, Fri, 19 March 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್