Assam Assembly Elections 2021: ಜನರ ನಡುವೆ ಬಿರುಕು ಮೂಡಿಸಲು ದ್ವೇಷ ಮಾರಾಟ: ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಯಾವ ಧರ್ಮವೂ ವೈರತ್ವವನ್ನು ಕಲಿಸುವುದಿಲ್ಲ. ಆದರೆ, ಬಿಜೆಪಿ ಜನರ ನಡುವೆ ಬಿರುಕು ಮೂಡಿಸಲು ದ್ವೇಷ ಮಾರಾಟ ಮಾಡುತ್ತಿದೆ ಎಂದು ದಿಬ್ರುಘರ್​ನ ಕಾಲೇಜು ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ರಾಹುಲ್ ಗಾಂಧಿ ಹೇಳಿದರು.

Assam Assembly Elections 2021: ಜನರ ನಡುವೆ ಬಿರುಕು ಮೂಡಿಸಲು ದ್ವೇಷ ಮಾರಾಟ: ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಅಸ್ಸಾಂನಲ್ಲಿ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
Edited By:

Updated on: Apr 06, 2022 | 6:57 PM

ಗುವಾಹಾಟಿ: ಅಸ್ಸಾಂನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಯಾಗಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು (ಮಾರ್ಚ್ 19) ಅಸ್ಸಾಂನಲ್ಲಿ ತಿಳಿಸಿದರು. ಮುಂಬರುವ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಪ್ರಚಾರದಲ್ಲಿ ತೊಡಗಿರುವ ಕೈ ನಾಯಕ ಹೀಗೆ ಭರವಸೆ ನೀಡಿದರು.

ಯಾವ ಧರ್ಮವೂ ವೈರತ್ವವನ್ನು ಕಲಿಸುವುದಿಲ್ಲ. ಆದರೆ, ಬಿಜೆಪಿ ಜನರ ನಡುವೆ ಬಿರುಕು ಮೂಡಿಸಲು ದ್ವೇಷ ಮಾರಾಟ ಮಾಡುತ್ತಿದೆ ಎಂದು ದಿಬ್ರುಘರ್​ನ ಕಾಲೇಜು ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ರಾಹುಲ್ ಗಾಂಧಿ ಹೇಳಿದರು. ಬಿಜೆಪಿಯವರು ಎಲ್ಲಿಗೆ ಹೋಗುತ್ತಾರೋ ಅಲ್ಲೆಲ್ಲಾ ದ್ವೇಷ ಹಬ್ಬಿಸುತ್ತಾರೆ. ಸಮಾಜ ಒಡೆಯಲು ದ್ವೇಷವನ್ನೇ ಅಸ್ತ್ರವಾಗಿ ಬಳಸುತ್ತಾರೆ. ಆದರೆ, ಪ್ರೀತಿ ಮತ್ತು ಸಹಬಾಳ್ವೆ ಹರಡುವ ಬಗ್ಗೆ ಕಾಂಗ್ರೆಸ್ ಪಕ್ಷ ಭರವಸೆ ನೀಡುತ್ತದೆ ಎಂದು ತಿಳಿಸಿದರು.

ಆರ್​ಎಸ್​ಎಸ್ ಮೇಲೆ ಸೂಚ್ಯ ದಾಳಿ ನಡೆಸಿದ ರಾಹುಲ್ ಗಾಂಧಿ, ನಾಗ್ಪುರ್​ನ ಒಂದು ಶಕ್ತಿ ಇಡೀ ದೇಶವನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ. ದೇಶದ ಭವಿಷ್ಯವಾಗಿರುವ ಯುವಜನರು ಪ್ರೀತಿ ಹಾಗೂ ಸ್ಥೈರ್ಯದಿಂದ ಇದಕ್ಕೆ ತಡೆಯೊಡ್ಡಬೇಕು ಎಂದು ಕರೆ ನೀಡಿದರು. ಬಳಿಕ, ಚಬ್ರುಘರ್​ನ ಚಬುವಾ ಪ್ರದೇಶದಲ್ಲಿ ಚಹಾ ಕೆಲಸಗಾರರೊಂದಿಗೆ ಸಂವಾದ ನಡೆಸಿದರು.

ಅಸ್ಸಾಂನಲ್ಲಿ ಎರಡು ದಿನ ಭೇಟಿಯಲ್ಲಿರುವ ರಾಹುಲ್ ಗಾಂಧಿ, ಶನಿವಾರ (ಮಾರ್ಚ್ 20) ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಲಿದ್ದಾರೆ.

ಇದನ್ನೂ ಓದಿ: Assam Assembly elections 2021: ಕಾಂಗ್ರೆಸ್ ಜಿನ್ನಾರ ಹೆಜ್ಜೆ ಅನುಸರಿಸುತ್ತಿದ್ದು, ದೇಶವನ್ನು ನಾಶ ಮಾಡಲಿದೆ: ಶಿವರಾಜ್ ಸಿಂಗ್ ಚೌಹಾಣ್

Assam Assembly Elections 2021: ರಾಜಕೀಯದಲ್ಲಿ ಬಿಜೆಪಿ ನನ್ನನ್ನು ಮುಗಿಸಲು ಯತ್ನಿಸುತ್ತಿದೆ: ಎಐಯುಡಿಎಫ್ ಮುಖ್ಯಸ್ಥ ಮೌಲಾನಾ ಬದ್ರುದ್ದೀನ್ ಅಜ್ಮಲ್

Published On - 7:21 pm, Fri, 19 March 21

Web contact

TV9 Kannada

Read More
Follow Us