AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನಲ್ಲಿ ಆಧಾರ್ ಕಾರ್ಡ್ ಅರ್ಜಿದಾರರಿಗೆ ಹೊಸ ಷರತ್ತು ವಿಧಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ

ಆಧಾರ್ ಕಾರ್ಡ್‌ಗಾಗಿ ಅರ್ಜಿಗಳು ಜನಸಂಖ್ಯೆಗಿಂತ ಹೆಚ್ಚಿವೆ. ಅನುಮಾನಾಸ್ಪದ ನಾಗರಿಕರಿದ್ದಾರೆ ಎಂಬುದನ್ನು  ಇದು ಸೂಚಿಸುತ್ತದೆ. ಹೊಸ ಅರ್ಜಿದಾರರು ತಮ್ಮ ಎನ್‌ಆರ್‌ಸಿ ಅರ್ಜಿ ರಶೀದಿ ಸಂಖ್ಯೆಯನ್ನು (ARN) ಸಲ್ಲಿಸಬೇಕು ಎಂದು ನಾವು ನಿರ್ಧರಿಸಿದ್ದೇವೆ" ಎಂದು ಅಸ್ಸಾಂ ಸಿಎಂ ಹೇಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ.

ಅಸ್ಸಾಂನಲ್ಲಿ ಆಧಾರ್ ಕಾರ್ಡ್ ಅರ್ಜಿದಾರರಿಗೆ ಹೊಸ ಷರತ್ತು ವಿಧಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ
ಹಿಮಂತ ಬಿಸ್ವಾ ಶರ್ಮ
ರಶ್ಮಿ ಕಲ್ಲಕಟ್ಟ
|

Updated on:Sep 07, 2024 | 7:47 PM

Share

ಗುವಾಹಟಿ ಸೆಪ್ಟೆಂಬರ್ 07: ರಾಜ್ಯದಲ್ಲಿ ಆಧಾರ್ ಕಾರ್ಡ್‌ಗಾಗಿ ಹೊಸ ಅರ್ಜಿದಾರರು ತಮ್ಮ ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಅರ್ಜಿ ರಶೀದಿ ಸಂಖ್ಯೆಯನ್ನು ಸಲ್ಲಿಸಬೇಕು ಎಂದು ಅಸ್ಸಾಂ (Assam) ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಶನಿವಾರ ಹೇಳಿದ್ದಾರೆ. ಆಧಾರ್ ಕಾರ್ಡ್‌ಗಾಗಿ ಅರ್ಜಿಗಳು ಜನಸಂಖ್ಯೆಗಿಂತ ಹೆಚ್ಚಿವೆ. ಅನುಮಾನಾಸ್ಪದ ನಾಗರಿಕರಿದ್ದಾರೆ ಎಂಬುದನ್ನು  ಇದು ಸೂಚಿಸುತ್ತದೆ. ಹೊಸ ಅರ್ಜಿದಾರರು ತಮ್ಮ ಎನ್‌ಆರ್‌ಸಿ ಅರ್ಜಿ ರಶೀದಿ ಸಂಖ್ಯೆಯನ್ನು (ARN) ಸಲ್ಲಿಸಬೇಕು ಎಂದು ನಾವು ನಿರ್ಧರಿಸಿದ್ದೇವೆ” ಎಂದು ಶರ್ಮಾ ಹೇಳಿರುವುದಾಗಿ ಪಿಟಿಐ ಉಲ್ಲೇಖಿಸಿದೆ.

ಈ ಕ್ರಮವು “ಅಕ್ರಮ ವಿದೇಶಿಗರ ಒಳಹರಿವನ್ನು ತಡೆಯುತ್ತದೆ” ಮತ್ತು ಆಧಾರ್ ಕಾರ್ಡ್‌ಗಳನ್ನು ನೀಡುವಲ್ಲಿ ರಾಜ್ಯ ಸರ್ಕಾರವು “ಅತ್ಯಂತ ಕಟ್ಟುನಿಟ್ಟಾಗಿ” ಇರುತ್ತದೆ. ಅಸ್ಸಾಂನಲ್ಲಿ ಆಧಾರ್ ಪಡೆಯುವುದು ಸುಲಭವಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಪ್ರಕ್ರಿಯೆಯಲ್ಲಿ ಬಯೋಮೆಟ್ರಿಕ್ಸ್ ಲಾಕ್ ಆಗಿರುವ 9.55 ಲಕ್ಷ ಜನರಿಗೆ ಎನ್‌ಆರ್‌ಸಿ ಅರ್ಜಿ ರಶೀದಿ ಸಂಖ್ಯೆಯನ್ನು ಸಲ್ಲಿಸುವುದು ಅನ್ವಯಿಸುವುದಿಲ್ಲ ಮತ್ತು ಅವರು ತಮ್ಮ ಕಾರ್ಡ್‌ಗಳನ್ನು ಪಡೆಯುತ್ತಾರೆ ಎಂದಿದ್ದಾರೆ ಶರ್ಮಾ.

ಕಳೆದ ಎರಡು ತಿಂಗಳಲ್ಲಿ ಹಲವಾರು ಬಾಂಗ್ಲಾದೇಶೀಯರನ್ನು ಬಂಧಿಸಿ ನೆರೆಯ ದೇಶದ ಅಧಿಕಾರಿಗಳಿಗೆ ಹಸ್ತಾಂತರಿಸಿರುವುದರಿಂದ ಅಕ್ರಮ ವಿದೇಶಿಯರನ್ನು ಗುರುತಿಸುವ ಪ್ರಕ್ರಿಯೆಯನ್ನು ತಮ್ಮ ಸರ್ಕಾರ ತೀವ್ರಗೊಳಿಸಲಿದೆ ಎಂದು ಅಸ್ಸಾಂ ಸಿಎಂ ಹೇಳಿದ್ದಾರೆ.

‘ಅಸ್ಸಾಂನಲ್ಲಿ ಜನಸಂಖ್ಯಾಶಾಸ್ತ್ರ ಬದಲಾವಣೆ’ ಕುರಿತು ಹಿಮಂತ ಶರ್ಮಾ

ಈ ಹಿಂದೆ ಅಸ್ಸಾಂ ಮುಖ್ಯಮಂತ್ರಿ ರಾಜ್ಯದಲ್ಲಿನ ‘ಜನಸಂಖ್ಯಾಶಾಸ್ತ್ರ ಬದಲಾವಣೆ’ಯ ವಿಷಯವನ್ನು ಎತ್ತಿದ್ದರು. ಆಗಸ್ಟ್ 28 ರಂದು, ಶರ್ಮಾ ಈ ವಿಷಯದ ಬಗ್ಗೆ ಶ್ವೇತಪತ್ರದ ಭರವಸೆ ನೀಡಿದರು.

ಇದನ್ನೂ ಓದಿ: ಉತ್ತರ ಪ್ರದೇಶ: ಲಕ್ನೋದಲ್ಲಿ 3 ಅಂತಸ್ತಿನ ಕಟ್ಟಡ ಕುಸಿದು ಓರ್ವ ಸಾವು; ಹಲವರು ಸಿಲುಕಿರುವ ಶಂಕೆ

ಹಿಂದೂಗಳು ಬಹುಸಂಖ್ಯಾತರಾಗಿರುವ ಪ್ರದೇಶದಲ್ಲಿ ಮುಸ್ಲಿಮರ ಸಂಖ್ಯೆ ಹೇಗೆ ಹೆಚ್ಚುತ್ತಿದೆ ಎಂಬುದರ ಕುರಿತು ಸರ್ಕಾರ ಶ್ವೇತಪತ್ರವನ್ನು ಹೊರತರಲಿದೆ. ಯಾವುದೇ ಕೋಮುಗಲಭೆಯ ವರದಿಯಾಗಿಲ್ಲ ಮತ್ತು ಎರಡು ಸಮುದಾಯಗಳು ಶಾಂತಿಯುತವಾಗಿ ಬದುಕುತ್ತಿವೆ. ಆದರೆ ಇನ್ನೊಂದು ಕಡೆ ಪರಿಸ್ಥಿತಿ ವ್ಯತಿರಿಕ್ತವಾಗಿದೆ ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ‘ಮಿಯಾ’ ಮುಸ್ಲಿಮರು ರಾಜ್ಯವನ್ನು “ಆಕ್ರಮಿಸಿಕೊಳ್ಳಲು” ಬಿಡುವುದಿಲ್ಲ ಎಂದು ಸಿಎಂ ಹೇಳಿದ್ದರು. “ಕೆಳ ಅಸ್ಸಾಂನ ಜನರು ಮೇಲಿನ ಅಸ್ಸಾಂಗೆ ಏಕೆ ಹೋಗುತ್ತಾರೆ? ಹಾಗಾದರೆ ಮಿಯಾ ಮುಸ್ಲಿಮರು ಅಸ್ಸಾಂ ಅನ್ನು ವಶಪಡಿಸಿಕೊಳ್ಳಬಹುದೇ? ನಾವು ಅದನ್ನು ಆಗಲು ಬಿಡುವುದಿಲ್ಲ, ”ಎಂದು ಶರ್ಮಾ ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:45 pm, Sat, 7 September 24

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!