AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ ಅಸ್ಸಾಂ ಸಿಎಂ

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ ಅಸ್ಸಾಂ ಸಿಎಂ
Assam CM and Delhi DCM
ಅಕ್ಷಯ್​ ಪಲ್ಲಮಜಲು​​
| Edited By: ರಶ್ಮಿ ಕಲ್ಲಕಟ್ಟ|

Updated on:Jul 01, 2022 | 1:34 PM

Share

ದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ವಿರುದ್ಧ ರಾಜ್ಯ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದಾಗ ಕೊವಿಡ್ ಪಿಪಿಇ ಕಿಟ್ ಗುತ್ತಿಗೆ ನೀಡುವಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಮಾನನಷ್ಟ ಮೊಕದ್ದಮೆ (defamation case) ದಾಖಲಿಸಿದ್ದಾರೆ.  ಪಿಪಿಇ ಕಿಟ್‌ಗಳ (PPE Kit)ಗುತ್ತಿಗೆಯನ್ನು ಶರ್ಮಾ ಅವರು ತಮ್ಮ ಪತ್ನಿಯ  ಒಡೆತನದ ಕಂಪನಿಗೆ ನೀಡಿದ್ದಾರೆ ಮತ್ತು ಸಾಂಕ್ರಾಮಿಕ ಸಮಯದಲ್ಲಿ ಅದಕ್ಕಾಗಿ ಹೆಚ್ಚಿನ ಹಣ ಪಾವತಿಸಿದ್ದಾರೆ ಎಂದು ಸಿಸೋಡಿಯಾ ಆರೋಪಿಸಿದ್ದಾರೆ. ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಈಗಾಗಲೇ ಸಿಸೋಡಿಯಾ ವಿರುದ್ಧ ₹ 100 ಕೋಟಿ ಸಿವಿಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಹಿಮಂತ ಶರ್ಮಾ ಅವರು ಅವರ ಪತ್ನಿಯ ಕಂಪನಿಗೆ ಗುತ್ತಿಗೆ ನೀಡಿದ್ದಾರೆ. ಅವರು ಪಿಪಿಇ ಕಿಟ್ ಗೆ 990 ರೂ ನೀಡಿ ಖರೀದಿಸಿದ್ದರೆ ಇತರರು ಅದೇ ಪಿಪಿಇ ಕಿಟ್​​ನ್ನು ಅದೇ ದಿನ ಬೇರೊಂದು ಕಂಪನಿಯಿಂದ 600 ಪಾವತಿ ಮಾಡಿ ಖರೀದಿಸಿದ್ದಾರೆ. ಇದು ದೊಡ್ಡ ಅಪರಾಧ ಎಂದು ಸಿಸೋಡಿಯಾ ಆರೋಪಿಸಿದ್ದು, ಈ ಕುರಿತು ತನ್ನಲ್ಲಿ ದಾಖಲೆಗಳಿವೆ ಎಂದಿದ್ದರು.  ನೀವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಎದುರಿಸಬೇಕಾಗುತ್ತದೆ. ಶೀಘ್ರದಲ್ಲಿ ಗುವಾಹಟಿಯಲ್ಲಿ ನಿಮ್ಮನ್ನು ನೋಡುತ್ತೇನೆ ಎಂದು ಶರ್ಮಾ ಎಚ್ಚರಿಕೆ ನೀಡಿದ್ದರು.

ಜೂನ್ 1ರಂದು ದೆಹಲಿ ಮೂಲದ ಡಿಜಿಟಲ್ ನ್ಯೂಸ್ ವೆಬ್​​ಸೈಟ್ ‘ದಿ ವೈರ್’ ಮತ್ತು ಗುವಾಹಟಿ ಮೂಲದ ದಿ ಕ್ರೋಸ್​​ ಕರೆಂಟ್ ಜಂಟಿಯಾಗಿ ಮಾಡಿದ ತನಿಖಾ ವರದಿಯಲ್ಲಿ ಅಸ್ಸಾಂ ಸರ್ಕಾರವು ಹೆಚ್ಚಾಗಿ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ನಾಲ್ಕು ಕೊವಿಡ್-19 ಸಂಬಂಧಿತ ತುರ್ತು ವೈದ್ಯಕೀಯ ಪೂರೈಕೆ ಆದೇಶಗಳನ್ನು ನೀಡಿತ್ತು ಎಂದಿದೆ.

2020 ರ ಮಾರ್ಚ್ 18 ಮತ್ತು ಮಾರ್ಚ್ 23 ರ ನಡುವೆ ಮಾಡಲಾದ ಎಲ್ಲಾ ನಾಲ್ಕು ಆರ್ಡರ್‌ಗಳನ್ನು ರಿನಿಕಿ ಭುಯಾನ್ ಶರ್ಮಾ ಮತ್ತು ಕುಟುಂಬದ ವ್ಯಾಪಾರ ಸಹವರ್ತಿ ಘನಶ್ಯಾಮ್ ಧನುಕಾ ಒಡೆತನದ ಮೂರು ಸಂಸ್ಥೆಗಳು ಪಡೆದುಕೊಂಡಿವೆ ಎಂದು ಈ ಸುದ್ದಿ ವೆಬ್​​ಸೈಟ್ ಗಳು ವರದಿ ಮಾಡಿ, ಮಾಹಿತಿ ಹಕ್ಕು ಅಡಿಯಲ್ಲಿ ಪಡೆದ ಉತ್ತರಗಳನ್ನು ಉಲ್ಲೇಖಿಸಿವೆ.

ರಾಷ್ಟ್ರೀಯ ಆರೋಗ್ಯ ಮಿಷನ್‌ಗೆ ಪಿಪಿಇ ಕಿಟ್‌ಗಳ ಪೂರೈಕೆಯಲ್ಲಿ ಯಾವುದೇ ಅವ್ಯವಹಾರ ಮಾಡಿಲ್ಲ ಎಂದು ಶ್ರೀಮತಿ ಶರ್ಮಾ ಆರೋಪ ನಿರಾಕರಿಸಿದ್ದಾರೆ. ನಾನು ಈ ಪಿಪಿಇ ಕಿಟ್ ಪೂರೈಕೆಗೆ ಹಣವನ್ನು ತೆಗೆದುಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.

ಅಸ್ಸಾಂ ಸರ್ಕಾರ ಮತ್ತು ಶರ್ಮಾ ಅವರು ಮುಖ್ಯಮಂತ್ರಿಯ ಕುಟುಂಬವು ಆಪಾದಿತ ದುಷ್ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಎಲ್ಲಾ ಆರೋಪಗಳನ್ನು ಪ್ರತ್ಯೇಕವಾಗಿ ನಿರಾಕರಿಸಿದ್ದಾರೆ. ಅದೇ  ವೇಳೆ ಎರಡು ಡಿಜಿಟಲ್ ಮಾಧ್ಯಮಗಳ ಆರೋಪಗಳನ್ನು “ಸುಳ್ಳು, ಕಾಲ್ಪನಿಕ, ದುರುದ್ದೇಶಪೂರಿತ ಮತ್ತು ಪಟ್ಟಭದ್ರ ಹಿತಾಸಕ್ತಿ” ಎಂದು ಹೇಳಿದ್ದಾರೆ. ಶರ್ಮಾ ಅವರು 2020 ರಲ್ಲಿ ಮೊದಲ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಅವಧಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದರು.

ಪ್ರತಿಪಕ್ಷಗಳಾದ ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ಸಿಪಿಐ(ಎಂಎಲ್)-ಲಿಬರೇಶನ್, ಆರ್‌ಸಿಪಿಐ, ಟಿಎಂಸಿ, ರೈಜೋರ್ ದಳ, ಅಸ್ಸಾಂ ರಾಷ್ಟ್ರೀಯ ಪರಿಷತ್ ಮತ್ತು ಅಂಚಲಿಕ್ ಗಣ ಮೋರ್ಚಾ ಆಪಾದಿತ ಭ್ರಷ್ಟಾಚಾರದ ಕುರಿತು ಸಿಬಿಐ ತನಿಖೆಗೆ ಒತ್ತಾಯಿಸಿವೆ.

Published On - 12:16 pm, Fri, 1 July 22

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ