AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ ಬೋಟ್​​ಗಳ ಡಿಕ್ಕಿ; ಕ್ರಿಮಿನಲ್​ ಕೇಸ್​ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ

ಬ್ರಹ್ಮಪುತ್ರ ನದಿಯ ದಕ್ಷಿಣ ದಡದಲ್ಲಿರುವ ಜೊರಹತ್​ನ ನಿಮಾತಿ ಘಾಟ್​ನಿಂದ ಮಜುಲಿಗೆ ಏನಿಲ್ಲವೆಂದರೂ ಸುಮಾರು 10 ಖಾಸಗಿ ಮಶಿನ್​ ಬೋಟ್​ಗಳು ಸಂಚರಿಸುತ್ತಿವೆ.

ಅಸ್ಸಾಂ ಬೋಟ್​​ಗಳ ಡಿಕ್ಕಿ; ಕ್ರಿಮಿನಲ್​ ಕೇಸ್​ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ
ಅಸ್ಸಾಂ ಮುಖ್ಯಮಂತ್ರಿ
TV9 Web
| Updated By: Lakshmi Hegde|

Updated on: Sep 09, 2021 | 5:36 PM

Share

ಅಸ್ಸಾಂನ ಜೊರಹತ್​ ಜಿಲ್ಲೆಯ ಬ್ರಹ್ಮಪುತ್ರ ನದಿಯಲ್ಲಿ ಎರಡು ಬೋಟುಗಳು (Assam Boat Capsize)Him  ಡಿಕ್ಕಿಯಾಗಿ ಒಬ್ಬರು ಮೃತಪಟ್ಟಿರುವ ಘಟನೆಗೆ ಸಂಬಂಧಪಟ್ಟಂತೆ ಕ್ರಿಮಿನಲ್​ ಕೇಸ್​ ದಾಖಲಿಸುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Assam Chief Minister Himanta Biswa Sarma), ಜೊರಹತ್​ ಪೊಲೀಸರಿಗೆ ಆದೇಶಿಸಿದ್ದಾರೆ. ನಿನ್ನೆ ಈ ದುರಂತ ನಡೆದಿತ್ತು. ಎರಡೂ ಬೋಟ್​​ನಿಂದ ಸುಮಾರು 90 ಪ್ರಯಾಣಿಕರಿದ್ದು, ಅದರಲ್ಲೀಗ ಇಬ್ಬರು ಇನ್ನೂ ಪತ್ತೆಯಾಗಿಲ್ಲ.  ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಎರಡೂ ಬೋಟ್​ಗಳು ಡಿಕ್ಕಿಯಾಗಲು ಕೆಟ್ಟದಾದ ನಿರ್ವಹಣೆಯೇ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲೇ ಗೊತ್ತಾಗಿದೆ. ನಾವು ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.  

ಏಕ ಎಂಜಿನ್​ ಬೋಟ್​ಗಳು ಬಂದ್​ ಬ್ರಹ್ಮಪುತ್ರ ನದಿಯ ದಕ್ಷಿಣ ದಡದಲ್ಲಿರುವ ಜೊರಹತ್​ನ ನಿಮಾತಿ ಘಾಟ್​ನಿಂದ ಮಜುಲಿಗೆ ಏನಿಲ್ಲವೆಂದರೂ ಸುಮಾರು 10 ಖಾಸಗಿ ಮಶಿನ್​ ಬೋಟ್​ಗಳು ಸಂಚರಿಸುತ್ತಿವೆ. ಇವೆಲ್ಲವೂ ಸಿಂಗಲ್​ ಎಂಜಿನ್​ನ ಬೋಟ್​ಗಳಾಗಿವೆ. ಆದರೆ ಇನ್ನು ಮುಂದೆ ಅಂಥ ಏಕ ಎಂಜಿನ್​ ಬೋಟ್​ಗಳ ಸಂಚಾರವನ್ನು ನಿಷೇಧಿಸಲಾಗುವುದು. ಯಾಕೆಂದರೆ ಆ ಎಂಜಿನ್​ಗಳು ಮರಿನ್​ ಎಂಜಿನ್​ಗಳಲ್ಲ. ಇದರಿಂದ ಖಂಡಿತ ಅಪಾಯವಾಗಲಿದೆ. ಹಾಗೊಮ್ಮೆ, ಈ ದೋಣಿಗಳ ಮಾಲೀಕರು ಯಾರಾದರೂ ತಮ್ಮ ಬೋಟ್​ನ ಎಂಜಿನ್​ನ್ನು ಸಾಗರ ಎಂಜಿನ್ ಆಗಿ ಬದಲಿಸಲು ಮುಂದೆ ಬಂದರೆ ಅದಕ್ಕೆ ನಮ್ಮ ಒಪ್ಪಿಗೆಯೂ ಇದೆ. ನಂತರ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ ತಿಳಿಸಿದ್ದಾರೆ.  ಈ ಮರಿನ್​ ಎಂಜಿನ್​ಗೆ ಏನಿಲ್ಲವೆಂದರೂ 10 ಲಕ್ಷ ರೂಪಾಯಿ ಇರುತ್ತದೆ. ಯಾವುದೇ ದೋಣಿ ಮಾಲೀಕರು ಅರ್ಜಿ ಸಲ್ಲಿಸಿದರೆ ಸರ್ಕಾರದಿಂದ ನೆರವು ನೀಡಲಾಗುವುದು ಎಂದೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಪ್ರತಿಭಟಿಸುತ್ತಿರುವ ಆಫ್ಘನ್ ಮಹಿಳೆಯರ ವಿರುದ್ಧ ತಾಲಿಬಾನ್-ಪರ ಮಹಿಳೆಯರನ್ನೇ ಛೂಬಿಟ್ಟ ತಾಲಿಬಾನಿಗಳು!

Bhabanipur Bypoll ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಲಿದ್ದಾರೆಯೇ ಬಿಜೆಪಿಯ ಪ್ರಿಯಾಂಕಾ ಟಿಬರೆವಾಲ್?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ