AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ ಬೋಟ್​​ಗಳ ಡಿಕ್ಕಿ; ಕ್ರಿಮಿನಲ್​ ಕೇಸ್​ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ

ಬ್ರಹ್ಮಪುತ್ರ ನದಿಯ ದಕ್ಷಿಣ ದಡದಲ್ಲಿರುವ ಜೊರಹತ್​ನ ನಿಮಾತಿ ಘಾಟ್​ನಿಂದ ಮಜುಲಿಗೆ ಏನಿಲ್ಲವೆಂದರೂ ಸುಮಾರು 10 ಖಾಸಗಿ ಮಶಿನ್​ ಬೋಟ್​ಗಳು ಸಂಚರಿಸುತ್ತಿವೆ.

ಅಸ್ಸಾಂ ಬೋಟ್​​ಗಳ ಡಿಕ್ಕಿ; ಕ್ರಿಮಿನಲ್​ ಕೇಸ್​ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ
ಅಸ್ಸಾಂ ಮುಖ್ಯಮಂತ್ರಿ
TV9 Web
| Edited By: |

Updated on: Sep 09, 2021 | 5:36 PM

Share

ಅಸ್ಸಾಂನ ಜೊರಹತ್​ ಜಿಲ್ಲೆಯ ಬ್ರಹ್ಮಪುತ್ರ ನದಿಯಲ್ಲಿ ಎರಡು ಬೋಟುಗಳು (Assam Boat Capsize)Him  ಡಿಕ್ಕಿಯಾಗಿ ಒಬ್ಬರು ಮೃತಪಟ್ಟಿರುವ ಘಟನೆಗೆ ಸಂಬಂಧಪಟ್ಟಂತೆ ಕ್ರಿಮಿನಲ್​ ಕೇಸ್​ ದಾಖಲಿಸುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Assam Chief Minister Himanta Biswa Sarma), ಜೊರಹತ್​ ಪೊಲೀಸರಿಗೆ ಆದೇಶಿಸಿದ್ದಾರೆ. ನಿನ್ನೆ ಈ ದುರಂತ ನಡೆದಿತ್ತು. ಎರಡೂ ಬೋಟ್​​ನಿಂದ ಸುಮಾರು 90 ಪ್ರಯಾಣಿಕರಿದ್ದು, ಅದರಲ್ಲೀಗ ಇಬ್ಬರು ಇನ್ನೂ ಪತ್ತೆಯಾಗಿಲ್ಲ.  ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಎರಡೂ ಬೋಟ್​ಗಳು ಡಿಕ್ಕಿಯಾಗಲು ಕೆಟ್ಟದಾದ ನಿರ್ವಹಣೆಯೇ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲೇ ಗೊತ್ತಾಗಿದೆ. ನಾವು ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.  

ಏಕ ಎಂಜಿನ್​ ಬೋಟ್​ಗಳು ಬಂದ್​ ಬ್ರಹ್ಮಪುತ್ರ ನದಿಯ ದಕ್ಷಿಣ ದಡದಲ್ಲಿರುವ ಜೊರಹತ್​ನ ನಿಮಾತಿ ಘಾಟ್​ನಿಂದ ಮಜುಲಿಗೆ ಏನಿಲ್ಲವೆಂದರೂ ಸುಮಾರು 10 ಖಾಸಗಿ ಮಶಿನ್​ ಬೋಟ್​ಗಳು ಸಂಚರಿಸುತ್ತಿವೆ. ಇವೆಲ್ಲವೂ ಸಿಂಗಲ್​ ಎಂಜಿನ್​ನ ಬೋಟ್​ಗಳಾಗಿವೆ. ಆದರೆ ಇನ್ನು ಮುಂದೆ ಅಂಥ ಏಕ ಎಂಜಿನ್​ ಬೋಟ್​ಗಳ ಸಂಚಾರವನ್ನು ನಿಷೇಧಿಸಲಾಗುವುದು. ಯಾಕೆಂದರೆ ಆ ಎಂಜಿನ್​ಗಳು ಮರಿನ್​ ಎಂಜಿನ್​ಗಳಲ್ಲ. ಇದರಿಂದ ಖಂಡಿತ ಅಪಾಯವಾಗಲಿದೆ. ಹಾಗೊಮ್ಮೆ, ಈ ದೋಣಿಗಳ ಮಾಲೀಕರು ಯಾರಾದರೂ ತಮ್ಮ ಬೋಟ್​ನ ಎಂಜಿನ್​ನ್ನು ಸಾಗರ ಎಂಜಿನ್ ಆಗಿ ಬದಲಿಸಲು ಮುಂದೆ ಬಂದರೆ ಅದಕ್ಕೆ ನಮ್ಮ ಒಪ್ಪಿಗೆಯೂ ಇದೆ. ನಂತರ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ ತಿಳಿಸಿದ್ದಾರೆ.  ಈ ಮರಿನ್​ ಎಂಜಿನ್​ಗೆ ಏನಿಲ್ಲವೆಂದರೂ 10 ಲಕ್ಷ ರೂಪಾಯಿ ಇರುತ್ತದೆ. ಯಾವುದೇ ದೋಣಿ ಮಾಲೀಕರು ಅರ್ಜಿ ಸಲ್ಲಿಸಿದರೆ ಸರ್ಕಾರದಿಂದ ನೆರವು ನೀಡಲಾಗುವುದು ಎಂದೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಪ್ರತಿಭಟಿಸುತ್ತಿರುವ ಆಫ್ಘನ್ ಮಹಿಳೆಯರ ವಿರುದ್ಧ ತಾಲಿಬಾನ್-ಪರ ಮಹಿಳೆಯರನ್ನೇ ಛೂಬಿಟ್ಟ ತಾಲಿಬಾನಿಗಳು!

Bhabanipur Bypoll ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಲಿದ್ದಾರೆಯೇ ಬಿಜೆಪಿಯ ಪ್ರಿಯಾಂಕಾ ಟಿಬರೆವಾಲ್?

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ