AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಿಜೋರಾಂ ಪೊಲೀಸರು ಸಮಸ್ಯೆ ಉಲ್ಬಣವಾಗುವಂತೆ ಮಾಡಿದ್ದಾರೆ’: ಗಡಿ ಸಂಘರ್ಷದ ನಡುವೆಯೇ  ವಿಡಿಯೊ ಟ್ವೀಟ್ ಮಾಡಿದ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ

Himanta Biswa Sarma: ವಿಡಿಯೊದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ನೆಲದ ಮೇಲೆ ವಿಶ್ರಾಂತಿ ಪಡೆಯುವುದನ್ನು ಕಾಣಬಹುದು ಮತ್ತು ಅವರಲ್ಲಿ ಒಬ್ಬರು ಧೂಮಪಾನ ಮಾಡುತ್ತಿದ್ದಾರೆ. "ಮಿಜೋರಾಂ ಪೊಲೀಸ್ ಸಿಬ್ಬಂದಿ ಹೇಗೆ ವರ್ತಿಸಿದ್ದಾರೆ ಮತ್ತು ಸಮಸ್ಯೆಯನ್ನು ಹೆಚ್ಚಿಸಿದ್ದಾರೆಂದು ತಿಳಿಯಲು ಈ ವಿಡಿಯೊವನ್ನು ನೋಡಿ ಎಂದಿದ್ದಾರೆ ಶರ್ಮಾ

'ಮಿಜೋರಾಂ ಪೊಲೀಸರು ಸಮಸ್ಯೆ ಉಲ್ಬಣವಾಗುವಂತೆ ಮಾಡಿದ್ದಾರೆ’: ಗಡಿ ಸಂಘರ್ಷದ ನಡುವೆಯೇ  ವಿಡಿಯೊ ಟ್ವೀಟ್ ಮಾಡಿದ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ
ಹಿಮಂತ ಬಿಸ್ವ ಶರ್ಮಾ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 27, 2021 | 4:14 PM

Share

ಗುವಾಹಟಿ: ಎರಡು ಈಶಾನ್ಯ ರಾಜ್ಯಗಳ ನಡುವೆ ಗಡಿ ಉದ್ವಿಗ್ನತೆ ಹೆಚ್ಚುತ್ತಿರುವುದರ ನಡುವೆಯೇ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮಂಗಳವಾರ ಮಿಜೋರಾಂ ಪೊಲೀಸ ನಡವಳಿಕೆಯನ್ನು ಟೀಕಿಸುವ ವಿಡಿಯೊವೊಂದನ್ನು ಟ್ವೀಟಿಸಿದ್ದಾರೆ. ವಿಡಿಯೊದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ನೆಲದ ಮೇಲೆ ವಿಶ್ರಾಂತಿ ಪಡೆಯುವುದನ್ನು ಕಾಣಬಹುದು ಮತ್ತು ಅವರಲ್ಲಿ ಒಬ್ಬರು ಧೂಮಪಾನ ಮಾಡುತ್ತಿದ್ದಾರೆ. “ಮಿಜೋರಾಂ ಪೊಲೀಸ್ ಸಿಬ್ಬಂದಿ ಹೇಗೆ ವರ್ತಿಸಿದ್ದಾರೆ ಮತ್ತು ಸಮಸ್ಯೆಯನ್ನು ಹೆಚ್ಚಿಸಿದ್ದಾರೆಂದು ತಿಳಿಯಲು ಈ ವಿಡಿಯೊವನ್ನು ನೋಡಿ” ಎಂದು ಶರ್ಮಾ ಟ್ವೀಟ್ ಮಾಡಿ, ಇದನ್ನು “ಬೇಸರದ ಮತ್ತು ಭಯಾನಕ” ಸಂಗತಿ ಎಂದು ಕರೆದಿದ್ದಾರೆ.

ಮಿಜೋರಾಂ ಪೊಲೀಸರೊಂದಿಗೆ ಹಿಂಸಾತ್ಮಕ ಘರ್ಷಣೆಯಲ್ಲಿ ಸಬ್-ಇನ್ಸ್‌ಪೆಕ್ಟರ್ ಸ್ವಪನ್ ರಾಯ್ ಮತ್ತು ಕಾನ್‌ಸ್ಟೆಬಲ್‌ಗಳಾದ ಲಿಟಾನ್ ಸುಕ್ಲಾಬೈದ್ಯಾ, ಎಂ.ಎಚ್.ಬರ್ಹುಯಾ,ಎನ್ ಹುಸೇನ್ ಮತ್ತು ಎಸ್.ಬರ್ದುರಿಯಾ ಸಾವಿಗೀಡಾಗಿದ್ದು, 50 ಪೊಲೀಸರಿಗೆ ಗಾಯಗಳಾದ ಘಟನೆಯ ಬೆನ್ನಲ್ಲೇ ಶರ್ಮಾ ಈ ಟ್ವೀಟ್ ಮಾಡಿದ್ದಾರೆ.

ಶರ್ಮಾ ಈ ಹಿಂದೆ ಸಿಬ್ಬಂದಿಗಳ ಸಾವಿಗೆ ಸಂತಾಪ ಸೂಚಿಸಿದ್ದರು ಮತ್ತು “ಸ್ಪಷ್ಟ ಪುರಾವೆಗಳು” ಹೊರಹೊಮ್ಮುತ್ತಿವೆ ಎಂದು ಹೇಳಿದ್ದರು. “ದುರದೃಷ್ಟವಶಾತ್ ಮಿಜೋರಾಂ ಪೊಲೀಸರು ಅಸ್ಸಾಂ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಲೈಟ್ ಮೆಷಿನ್ ಗನ್ಸ್ (ಎಲ್ಎಂಜಿ) ಬಳಸಿದ್ದಾರೆಂದು ತೋರಿಸುತ್ತದೆ. ಪರಿಸ್ಥಿತಿಯ ಉದ್ದೇಶ ಮತ್ತು ತೀವ್ರತೆ ಬಗ್ಗೆ ಇಷ್ಟೊಂದು ಹೇಳುವುದು ದುಃಖಕರ ಮತ್ತು ದುರದೃಷ್ಟಕರ ಎಂದಿದ್ದಾರೆ.

ಗಡಿ ಪ್ರದೇಶದಲ್ಲಿ ಮಿಜೋರಾಂ ತನ್ನ ಭೂಮಿಯನ್ನು ಅತಿಕ್ರಮಿಸಿದೆ ಎಂದು ಅಸ್ಸಾಂ ಆರೋಪಿಸಿದೆ. ಇದಕ್ಕೂ ಮೊದಲು ಧೋಲಖಲ್ ಖುಲಿಚೆರಾದಲ್ಲಿ ಮಿಜೋರಾಂನಿಂದ ಶಂಕಿತ ದುಷ್ಕರ್ಮಿಗಳು ಅಸ್ಸಾಂ ಸರ್ಕಾರಿ ಅಧಿಕಾರಿಗಳ ತಂಡಕ್ಕೆ ಗ್ರೆನೇಡ್ ಎಸೆಯಲಾಯಿತು. ಜುಲೈ 11 ರಂದು, ಮಿಜೋರಾಂ ಬದಿಯಲ್ಲಿ ಅಂತರರಾಜ್ಯ ಗಡಿಯಲ್ಲಿ ಎರಡು ಒಂದರ ಹಿಂದೆ ಒಂದರಂತೆ ಸ್ಫೋಟಗಳು ನಡೆದವು.

ಮಿಜೋರಾಂನ ವೈರೆಂಗ್ಟೆ ಪೊಲೀಸ್ ಠಾಣೆಯಲ್ಲಿ ಸ್ಫೋಟಕ ವಸ್ತುಗಳ ಕಾಯ್ದೆಯಡಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಅಸ್ಸಾಂನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಜುಲೈ 10 ರಂದು ಮಿಜೋರಾಂನಿಂದ ಸುಮಾರು 25-30 ಜನರು ಖುಲಿಚೆರಾ ಸಿಆರ್ಪಿಎಫ್ ಶಿಬಿರಕ್ಕಿಂತ 25 ಮೀಟರ್ ಮುಂದಕ್ಕೆ ಬಂದರು. ನಂತರ ಜನಸಮೂಹವು ಕನಿಷ್ಠ 50 ಕ್ಕೆ ಏರಿತು ಎಂದು ಹೇಳಿಕೊಂಡಿದ್ದಾರೆ. ಫಾರೆಸ್ಟ್ ಟ್ರ್ಯಾಕ್ ತೆರವುಗೊಳಿಸುವ ಕೆಲಸವನ್ನು ನಿಲ್ಲಿಸಲು ಮತ್ತು ಪಿಡಬ್ಲ್ಯುಡಿ ಅಧಿಕಾರಿಗಳು ರಸ್ತೆ ನಿರ್ಮಿಸುವುದನ್ನು ತಡೆಯಲು ಅವರು ಹೇಳಿದರು.

ಮಂಗಳವಾರ ಉಭಯ ರಾಜ್ಯಗಳ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿಗಳಾದ ಅಸ್ಸಾಂ ಮತ್ತು ಮಿಜೋರಾಂ ಅವರನ್ನು ಭೇಟಿಯಾಗಿ ಎರಡು ದಿನಗಳ ನಂತರ ಈ ಪ್ರದೇಶವನ್ನು ಬಾಧಿಸುತ್ತಿರುವ ಅಂತರರಾಜ್ಯ ಗಡಿ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: Explainer ಅಸ್ಸಾಂ- ಮಿಜೋರಾಂ ಗಡಿ ಸಂಘರ್ಷದಲ್ಲಿ 6 ಪೊಲೀಸರು ಬಲಿ, 80ಕ್ಕೂ ಹೆಚ್ಚು ಮಂದಿಗೆ ಗಾಯ; ಏನಿದು ಗಡಿ ವಿವಾದ?

(Assam CM Himanta Biswa Sarma tweets a purported video of Mizoram Police criticising their behaviour)

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ