ಕಾಂಗ್ರೆಸ್​ ಸಂಸದ ಗೌರವ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ ಪತ್ನಿ ರಿನಿಕಿ ಶರ್ಮಾ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ತಮ್ಮ ಕಂಪನಿಯ ವಿರುದ್ಧದ ಸುಳ್ಳು ಆರೋಪಗಳಿಗಾಗಿ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ರಿನಿಕಿ ಅವರ ಕಂಪನಿಯು ಕೇಂದ್ರ ಸರ್ಕಾರದಿಂದ 10 ಕೋಟಿ ರೂ. ಸಬ್ಸಿಡಿ ಪಡೆದಿದೆ ಎಂದು ಗೌರವ್ ಗೊಗೊಯ್ ಆರೋಪಿಸಿದ್ದರು. ಗುವಾಹಟಿಯ ಕಾಮ್ರೂಪ್ ಮೆಟ್ರೋಪಾಲಿಟನ್ ಸಿವಿಲ್ ನ್ಯಾಯಾಲಯದಲ್ಲಿ ದಾಖಲಿಸಲಾಗುವುದು ಎಂದು ರಿನಿಕಿ ಭುಯಾನ್ ಶರ್ಮಾ ಪರ ವಕೀಲ ರಾಜೀವ್ ಬೋರ್ಪೂಜಾರಿ ಹೇಳಿದ್ದಾರೆ.

ಕಾಂಗ್ರೆಸ್​ ಸಂಸದ ಗೌರವ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ ಪತ್ನಿ ರಿನಿಕಿ ಶರ್ಮಾ
ಹಿಮಂತ ಬಿಸ್ವಾ ಶರ್ಮಾ
Image Credit source: Mint

Updated on: Sep 23, 2023 | 2:38 PM

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ(Himanta Biswa Sarma) ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ರಿನಿಕಿ ಅವರ ಕಂಪನಿಯು ಕೇಂದ್ರ ಸರ್ಕಾರದಿಂದ 10 ಕೋಟಿ ರೂ. ಸಬ್ಸಿಡಿ ಪಡೆದಿದೆ ಎಂದು ಗೌರವ್ ಗೊಗೊಯ್ ಆರೋಪಿಸಿದ್ದರು. ಗುವಾಹಟಿಯ ಕಾಮ್ರೂಪ್ ಮೆಟ್ರೋಪಾಲಿಟನ್ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗುವುದು ಎಂದು ರಿನಿಕಿ ಭುಯಾನ್ ಶರ್ಮಾ ಪರ ವಕೀಲ ರಾಜೀವ್ ಬೋರ್ಪೂಜಾರಿ ಹೇಳಿದ್ದಾರೆ.

ತನ್ನ ಕಂಪನಿ ಪ್ರೈಡ್ ಈಸ್ಟ್ ಎಂಟರ್‌ಟೈನ್‌ಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯೆಯಾಗಿ, ರಿನಿಕಿ ಭುಯಾನ್ ಶರ್ಮಾ ಸೆಪ್ಟೆಂಬರ್ 14 ರಂದು ಟ್ವೀಟ್ ಮಾಡಿದ್ದರು. ಪ್ರೈಡ್ ಈಸ್ಟ್ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ 2006 ರಿಂದ ವಿವಿಧ ಕ್ಷೇತ್ರಗಳಲ್ಲಿ ವ್ಯಾಪಾರ ಹಿತಾಸಕ್ತಿಗಳೊಂದಿಗೆ ಅಸ್ತಿತ್ವದಲ್ಲಿದೆ ಇದೊಂದು ಸ್ವತಂತ್ರ ಸಂಸ್ಥೆಯಾಗಿದೆ ಎಂದರು.

ಇದು ಸಾರ್ವಜನಿಕ ಡೊಮೇನ್‌ನಲ್ಲಿ ತನ್ನ ಎಲ್ಲಾ ಹಣಕಾಸಿನ ದಾಖಲೆಗಳೊಂದಿಗೆ ಕಾನೂನು ಪಾಲಿಸುವ ಕಂಪನಿಯಾಗಿದೆ ಎಂದು ಅವರು ಹೇಳಿದರು. ಸುದೀರ್ಘ ಮತ್ತು ಯಶಸ್ವಿ ವ್ಯಾಪಾರದ ದಾಖಲೆಯೊಂದಿಗೆ, ಪ್ರೈಡ್ ಈಸ್ಟ್ ಎಂಟರ್ಟೈನ್ಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ಇತರ ಯಾವುದೇ ಅರ್ಹ ಉದ್ಯಮಗಳಂತೆ ಸರ್ಕಾರಿ ಬೆಂಬಲಿತ ಕಾರ್ಯಕ್ರಮಗಳು ಮತ್ತು ಪ್ರೋತ್ಸಾಹಕ ಯೋಜನೆಗಳಲ್ಲಿ ಭಾಗವಹಿಸಲು ಅರ್ಹವಾಗಿದ ಎಂದರು.

ಮತ್ತಷ್ಟು ಓದಿ: ಪ್ರಧಾನಿ ಮೋದಿಯ ಶೈಕ್ಷಣಿಕ ಅರ್ಹತೆ ಬಗ್ಗೆ ಮಾನನಷ್ಟ ಪ್ರಕರಣ; ಅರವಿಂದ್ ಕೇಜ್ರಿವಾಲ್‌ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ಆದಾಗ್ಯೂ, ಪ್ರಸ್ತುತ ಸಂದರ್ಭದಲ್ಲಿ, ಪ್ರಧಾನ ಮಂತ್ರಿ ಕಿಸಾನ್ ಸಂಪದಾ ಯೋಜನೆಗೆ ಸಂಬಂಧಿಸಿದಂತೆ, ಪ್ರೈಡ್ ಈಸ್ಟ್ ಎಂಟರ್‌ಟೈನ್‌ಮೆಂಟ್ಸ್ ಪ್ರೈವೇಟ್ ಲಿಮಿಟೆಡ್, ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರೈಸಿದ್ದರೂ, ಸರ್ಕಾರದ ಒಂದು ಪೈಸೆಯ ಸಬ್ಸಿಡಿಯನ್ನು ಕ್ಲೈಮ್ ಮಾಡಿಲ್ಲ ಅಥವಾ ಸ್ವೀಕರಿಸಿಲ್ಲ ಎಂದು ಭೂಯಾನ್ ಶರ್ಮಾ ಹೇಳಿದರು.

ಈ ತಿಂಗಳ ಆರಂಭದಲ್ಲಿ, ಗೌರವ್ ಗೊಗೊಯ್ ಅವರು ಪ್ರಧಾನ ಮಂತ್ರಿ ಕಿಸಾನ್ ಸಂಪದಾ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದಿಂದ 10 ಕೋಟಿ ರೂಪಾಯಿಗಳ ಸಬ್ಸಿಡಿ ಪಡೆಯಲು ಮುಖ್ಯಮಂತ್ರಿ ಶರ್ಮಾ ತಮ್ಮ ಪತ್ನಿಯ ಕಂಪನಿಗೆ ಸಹಾಯ ಮಾಡಿದ್ದಾರೆ ಎಂದು ಸರಣಿ ಟ್ವೀಟ್‌ಗಳಲ್ಲಿ ಆರೋಪಿಸಿದ್ದರು.

ಮುಖ್ಯಮಂತ್ರಿ ಶರ್ಮಾ ಅವರ ರಾಜೀನಾಮೆ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಒಡೆತನದ ಕಂಪನಿಯಿಂದ ಸರ್ಕಾರಿ ಅನುದಾನ ಮತ್ತು ಭೂಸ್ವಾಧೀನದ ತನಿಖೆಗೆ ಗೊಗೊಯ್ ಒತ್ತಾಯಿಸಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us