ಅಸ್ಸಾಂ: ಮನೆಯಲ್ಲಿ ಮಗುವನ್ನು ಬಿಟ್ಟು ನಿಷೇಧಿತ ಉಗ್ರ ಸಂಘಟನೆಗೆ ಸೇರಿದ ದಂಪತಿ

ಮನೆಯಲ್ಲಿ ಮಗುವನ್ನು ಬಿಟ್ಟು ದಂಪತಿ ನಿಷೇಧಿತ ಉಗ್ರ ಸಂಘಟನೆಗೆ ಸೇರಿರುವ ಮಾಹಿತಿ ಲಭ್ಯವಾಗಿದೆ. ಅಸ್ಸಾಂನ ತಿನ್ಸುಕಿಯಾದ ದಂಪತಿ ನಿಷೇಧಿತ ಉಗ್ರ ಸಂಘಟನೆಯಾದ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್-ಇಂಡಿಪೆಂಡೆಂಟ್(ULFA-I)ಗೆ ಸೇರಿದ್ದಾರೆ ಎಂದು ಹೇಳಲಾಗುತ್ತಿದೆ.

ಅಸ್ಸಾಂ: ಮನೆಯಲ್ಲಿ ಮಗುವನ್ನು ಬಿಟ್ಟು ನಿಷೇಧಿತ ಉಗ್ರ ಸಂಘಟನೆಗೆ ಸೇರಿದ ದಂಪತಿ
ಉಗ್ರರುImage Credit source: Adobe Stock
Follow us
|

Updated on:May 12, 2024 | 12:10 PM

ಮನೆಯಲ್ಲಿ ನಾಲ್ಕು ವರ್ಷದ ಮಗುವನ್ನು ಬಿಟ್ಟು ದಂಪತಿ ನಿಷೇಧಿತ ಉಗ್ರ ಸಂಘಟನೆ(Terrorist Organisation) ಗೆ ಸೇರಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಅಸ್ಸಾಂನ ತಿನ್ಸುಕಿಯಾದ ದಂಪತಿ ನಿಷೇಧಿತ ಉಗ್ರ ಸಂಘಟನೆಯಾದ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್-ಇಂಡಿಪೆಂಡೆಂಟ್(ULFA-I)ಗೆ ಸೇರ್ಪಡೆಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಅವರು ತಮ್ಮ ಮನೆಯನ್ನು ಬಿಟ್ಟು ಹೋಗಿದ್ದಾರೆ. ದಂಪತಿಯನ್ನು ಮಮತಾ ನಿಯೋಗ್ ಮತ್ತು ಆಕೆಯ ಪತಿ ಅಚ್ಯುತ್ ನಿಯೋಗ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅವರು ತಮ್ಮ ಮಗಳನ್ನು ತಿನ್ಸುಕಿಯಾ ಜಿಲ್ಲೆಯ ದಿರಾಕ್ ಕಪಟೋಲಿ ಗ್ರಾಮದಲ್ಲಿ ಆಕೆಯ ಅಜ್ಜಿಯರೊಂದಿಗೆ ಬಿಟ್ಟಿದ್ದಾರೆ ಎಂದು ವರದಿಯಾಗಿದೆ. ನಾವು ಮೊದಲು ಇಡೀ ವಿಷಯವನ್ನು ತನಿಖೆ ಮಾಡಬೇಕು ಎಂದು ಪೊಲೀಸರು ಹೇಳಿದ್ದಾರೆ.

ಮತ್ತಷ್ಟು ಓದಿ: ಭಾರತದಲ್ಲಿ ಉಗ್ರ ಸಂಘಟನೆಯು ಸುವ್ಯವಸ್ಥಿತ ಜಾಲಗಳ ಮೂಲಕ ಹಣ ಸಂಗ್ರಹಿಸಿದೆ: ಎಫ್‌ಎಟಿಎಫ್ ವರದಿ

ಅಸ್ಸಾಂ ಸಂಘರ್ಷದಲ್ಲಿ ಸಶಸ್ತ್ರ ಹೋರಾಟದ ಮೂಲಕ ಸ್ಥಳೀಯ ಅಸ್ಸಾಮಿ ಜನರಿಗೆ ಅಸ್ಸಾಂನ ಪ್ರತ್ಯೇಕ ಸ್ವತಂತ್ರ ರಾಜ್ಯವನ್ನು ರೂಪಿಸಲು ಸಶಸ್ತ್ರ ಹೋರಾಟದಲ್ಲಿ ತೊಡಗಲು ಯುವಕರ ಗುಂಪೊಂದು ಅಸ್ಸಾಂನ ಶಿವಸಾಗರ್‌ನಲ್ಲಿ 7 ಏಪ್ರಿಲ್ 1979 ರಂದು ಉಲ್ಫಾವನ್ನು ಸ್ಥಾಪಿಸಿತು. ಉಲ್ಫಾ ಮುಖ್ಯವಾಗಿ ಅಸ್ಸಾಂನಲ್ಲಿ ಕಾರ್ಯನಿರ್ವಹಿಸುತ್ತದೆ. 1990 ರಲ್ಲಿ ಭಾರತ ಸರ್ಕಾರವು ಇದನ್ನು ಭಯೋತ್ಪಾದಕ ಸಂಘಟನೆ ಎಂದು ಉಲ್ಲೇಖಿಸಿ ನಿಷೇಧಿಸಿತು.

ರಾಷ್ಟ್ರೀಯ ಸುದ್ದುಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:09 pm, Sun, 12 May 24

ತಾಜಾ ಸುದ್ದಿ
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ