AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Earthquake: ಅಸ್ಸಾಂನಲ್ಲಿ 5.1 ತೀವ್ರತೆಯ ಭೂಕಂಪ

ಅಸ್ಸಾಂನ ಮೋರಿಗಾಂವ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಭೂಕಂಪ(Earthquake)ದ ಅನುಭವವಾಗಿದೆ. ತೀವ್ರತೆ ರಿಕ್ಟರ್ ಮಾಪಕದಲ್ಲಿ 5.1 ಎಂದು ದಾಖಲಾಗಿದೆ. ಗುವಾಹಟಿ ಮತ್ತು ರಾಜ್ಯದ ಇತರ ಭಾಗಗಳಲ್ಲಿಯೂ ಕಂಪನದ ಅನುಭವವಾಗಿದೆ. ಭೂಕಂಪನವು ಬೆಳಗಿನ ಜಾವ 2.25 ಕ್ಕೆ 16 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

Assam Earthquake: ಅಸ್ಸಾಂನಲ್ಲಿ 5.1 ತೀವ್ರತೆಯ ಭೂಕಂಪ
ಭೂಕಂಪImage Credit source: Hindustan Times
ನಯನಾ ರಾಜೀವ್
|

Updated on: Feb 27, 2025 | 8:12 AM

Share

ಗುವಾಹಟಿ, ಫೆಬ್ರವರಿ 27: ಅಸ್ಸಾಂನ ಮೋರಿಗಾಂವ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಭೂಕಂಪ(Earthquake)ದ ಅನುಭವವಾಗಿದೆ. ತೀವ್ರತೆ ರಿಕ್ಟರ್ ಮಾಪಕದಲ್ಲಿ 5.1 ಎಂದು ದಾಖಲಾಗಿದೆ. ಗುವಾಹಟಿ ಮತ್ತು ರಾಜ್ಯದ ಇತರ ಭಾಗಗಳಲ್ಲಿಯೂ ಕಂಪನದ ಅನುಭವವಾಗಿದೆ. ಭೂಕಂಪನವು ಬೆಳಗಿನ ಜಾವ 2.25 ಕ್ಕೆ 16 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಅಸ್ಸಾಂ ಭಾರತದಲ್ಲಿ ಅತಿ ಹೆಚ್ಚು ಭೂಕಂಪ ಪೀಡಿತ ಪ್ರದೇಶಗಳಲ್ಲಿ ಒಂದಾಗಿರುವುದರಿಂದ ಅಲ್ಲಿ ಭೂಕಂಪಗಳು ಸಾಮಾನ್ಯ. ಇದು ಭೂಕಂಪನ ವಲಯ V ರಲ್ಲಿ ಬರುತ್ತದೆ, ಅಂದರೆ ಇಲ್ಲಿ ಬಲವಾದ ಕಂಪನಗಳ ಅಪಾಯ ಹೆಚ್ಚು.

ಇತ್ತೀಚಿನ ವರ್ಷಗಳಲ್ಲಿ, ಈ ಪ್ರದೇಶವು ಹಲವಾರು ಪ್ರಮುಖ ಭೂಕಂಪಗಳಿಗೆ ತುತ್ತಾಗಿದೆ, ಉದಾಹರಣೆಗೆ 1950 ರ ಅಸ್ಸಾಂ-ಟಿಬೆಟ್ ಭೂಕಂಪ (ತೀವ್ರತೆ 8.6) ಮತ್ತು 1897 ರ ಶಿಲ್ಲಾಂಗ್ ಭೂಕಂಪ (ತೀವ್ರತೆ 8.1) , ಇವೆರಡೂ ಇತಿಹಾಸದಲ್ಲಿ ಅತ್ಯಂತ ಮಾರಕ ಭೂಕಂಪಗಳಲ್ಲಿ ಸೇರಿವೆ.

ಇದುವರೆಗೆ ಯಾವುದೇ ಆಸ್ತಿಪಾಸ್ತಿ ನಷ್ಟ ಅಥವಾ ಸಾವುನೋವು ಸಂಭವಿಸಿದ ಬಗ್ಗೆ ಯಾವುದೇ ಸುದ್ದಿ ಬಂದಿಲ್ಲ ಎಂದು ಒಡಿಶಾ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಗಾಳಕೊಲ್ಲಿಯಲ್ಲಿ ಭೂಕಂಪದ ಕೇಂದ್ರಬಿಂದು ಇದ್ದ ಕಾರಣ ಅದರ ಪರಿಣಾಮ ಹೆಚ್ಚು ಇರಲಿಲ್ಲ ಎಂದು ಅವರು ಹೇಳಿದರು. ಒಡಿಶಾದ ಪಾರಾದೀಪ್, ಪುರಿ, ಬೆರ್ಹಾಂಪುರ ಮತ್ತು ಇತರ ಕೆಲವು ಸ್ಥಳಗಳಲ್ಲಿ ಭೂಕಂಪನದ ಅನುಭವವಾಗಿದೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: Video: ವ್ಯಾನವಾಟುವಿನಲ್ಲಿ ಪ್ರಬಲ ಭೂಕಂಪ, ವಿಡಿಯೋ ಇಲ್ಲಿದೆ

5 ರ ತೀವ್ರತೆಯ ಭೂಕಂಪವನ್ನು ಮಧ್ಯಮ ತೀವ್ರತೆ ಎಂದು ಪರಿಗಣಿಸಲಾಗುತ್ತದೆ. ಇದು ಶಬ್ದವನ್ನುಂಟು ಮಾಡುತ್ತದೆ ಹಾಗೆಯೇ ಮನೆಯೊಳಗಿನ ವಸ್ತುಗಳಿಗೆ ಸಣ್ಣ ಹಾನಿಯಾಗಬಹುದು.

ಭೂಕಂಪಗಳನ್ನು ರಿಕ್ಟರ್ ಮಾಪಕದಲ್ಲಿ ಅಳೆಯಲಾಗುತ್ತದೆ. ಇದನ್ನು ರಿಕ್ಟರ್ ಮ್ಯಾಗ್ನಿಟ್ಯೂಡ್ ಟೆಸ್ಟ್ ಮಾಪಕ ಎಂದು ಕರೆಯಲಾಗುತ್ತದೆ. ಭೂಕಂಪಗಳನ್ನು ರಿಕ್ಟರ್ ಮಾಪಕದಲ್ಲಿ 1 ರಿಂದ 9 ರವರೆಗಿನ ಪ್ರಮಾಣದಲ್ಲಿ ಅಳೆಯಲಾಗುತ್ತದೆ. ಭೂಕಂಪದ ಸಮಯದಲ್ಲಿ ಭೂಮಿಯ ಒಳಗಿನಿಂದ ಬಿಡುಗಡೆಯಾಗುವ ಶಕ್ತಿಯ ತೀವ್ರತೆಯನ್ನು ಇದರಿಂದ ಅಳೆಯಲಾಗುತ್ತದೆ. ಈ ತೀವ್ರತೆಯಿಂದ ಭೂಕಂಪದ ತೀವ್ರತೆಯನ್ನು ಅಂದಾಜಿಸಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ