AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Flood: ಅಸ್ಸಾಂನಲ್ಲಿ ನೋಡನೋಡುತ್ತಿದ್ದಂತೆ ಪ್ರವಾಹದ ನೀರಿನಲ್ಲಿ ಕುಸಿದು ಬಿದ್ದ ಪೊಲೀಸ್ ಸ್ಟೇಷನ್; ವೈರಲ್ ಆಯ್ತು ವಿಡಿಯೋ

ಅಸ್ಸಾಂನಲ್ಲಿ ಪ್ರವಾಹದ ನೀರಿನಲ್ಲಿ ಅರ್ಧ ಮುಳುಗಿದ್ದ ಪೊಲೀಸ್ ಠಾಣೆ ಶಿಥಿಲಗೊಂಡು ಕುಸಿದುಬಿದ್ದಿದೆ. ನಲ್ಬರಿ ಜಿಲ್ಲೆಯ ಭಂಗ್ನಮರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Assam Flood: ಅಸ್ಸಾಂನಲ್ಲಿ ನೋಡನೋಡುತ್ತಿದ್ದಂತೆ ಪ್ರವಾಹದ ನೀರಿನಲ್ಲಿ ಕುಸಿದು ಬಿದ್ದ ಪೊಲೀಸ್ ಸ್ಟೇಷನ್; ವೈರಲ್ ಆಯ್ತು ವಿಡಿಯೋ
ಅಸ್ಸಾಂ ಪ್ರವಾಹದಲ್ಲಿ ಕುಸಿದು ಬಿದ್ದ ಪೊಲೀಸ್ ಸ್ಟೇಷನ್Image Credit source: Money Control
TV9 Web
| Edited By: |

Updated on: Jun 29, 2022 | 10:07 AM

Share

ಅಸ್ಸಾಂನಲ್ಲಿ ಈ ವರ್ಷದ ಮುಂಗಾರಿನ ಆರಂಭದಲ್ಲೇ ಭಾರೀ ಪ್ರವಾಹ (Assam Floods) ಉಂಟಾಗಿದೆ. ಪ್ರವಾಹ ಪೀಡಿತ ಅಸ್ಸಾಂನ ಭಯಾನಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಅಸ್ಸಾಂನಲ್ಲಿ ಎರಡು ಅಂತಸ್ತಿನ ಪೊಲೀಸ್ ಠಾಣೆಯ ಬೃಹತ್ ಕಟ್ಟಡ ಮುಳುಗಿ, ಪಕ್ಕದಲ್ಲಿ ಹರಿಯುವ ನದಿಯಲ್ಲಿ ಕುಸಿಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

ಅಸ್ಸಾಂನಲ್ಲಿ ಪ್ರವಾಹದ ನೀರಿನಲ್ಲಿ ಅರ್ಧ ಮುಳುಗಿದ್ದ ಪೊಲೀಸ್ ಠಾಣೆ ಶಿಥಿಲಗೊಂಡು ಕುಸಿದುಬಿದ್ದಿದೆ. ನಲ್ಬರಿ ಜಿಲ್ಲೆಯ ಭಂಗ್ನಮರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 1 ನಿಮಿಷದ ಈ ವಿಡಿಯೋದ ಅಂತ್ಯದ ವೇಳೆಗೆ ಕಟ್ಟಡದ ಅರ್ಧಕ್ಕಿಂತ ಹೆಚ್ಚು ಭಾಗವು ನೀರಿಗೆ ಅಪ್ಪಳಿಸಿದೆ. ನಲ್ಬರಿಯು ಅಸ್ಸಾಂನ ಅತಿ ಹೆಚ್ಚು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: Assam Flood: ಅಸ್ಸಾಂನಲ್ಲಿ ಪ್ರವಾಹದ ಮಟ್ಟ ಕೊಂಚ ಇಳಿಕೆ; 127 ಜನ ಸಾವು, ಸಂಕಷ್ಟದಲ್ಲಿ 22 ಲಕ್ಷ ಜನ

ಕಳೆದೆರಡು ದಿನಗಳಿಂದ ಅಸ್ಸಾಂ ರಾಜ್ಯದಲ್ಲಿ ಭೀಕರ ಪ್ರವಾಹದ ಪರಿಸ್ಥಿತಿ ಕೊಂಚ ಸುಧಾರಿಸಿದ್ದರೂ, 22 ಲಕ್ಷ ಜನರು ಇನ್ನೂ ಸಂತ್ರಸ್ತರಾಗಿದ್ದಾರೆ. ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಇದುವರೆಗೆ 126 ಜನರು ಮಳೆ ಸಂಬಂಧಿದ ಅನಾಹುತಗಳಿಂದ ಸಾವನ್ನಪ್ಪಿದ್ದಾರೆ. ಇಲ್ಲಿನ ಹಲವಾರು ಜಿಲ್ಲೆಗಳು ಇನ್ನೂ ಪ್ರವಾಹ ಅಥವಾ ಜಲಾವೃತವಾಗಿವೆ. ಪ್ರವಾಹದಿಂದ ಸ್ಥಳಾಂತರಗೊಂಡವರಿಗೆ ಮತ್ತು ಅದರಿಂದ ಸಿಲುಕಿಕೊಂಡವರಿಗೆ ಅಗತ್ಯ ನೆರವು, ಆಹಾರ, ಶುದ್ಧ ನೀರು ಮತ್ತು ಆಶ್ರಯವನ್ನು ಒದಗಿಸಲು ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.

ಪುನರ್ವಸತಿ ಮತ್ತು ಆರೈಕೆಗಾಗಿ ರಾಜ್ಯಾದ್ಯಂತ ನೂರಾರು ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ. ಬ್ರಹ್ಮಪುತ್ರಾ ನದಿ ಉಕ್ಕಿ ಹರಿಯುತ್ತಿದ್ದು, ಹಲವು ಗ್ರಾಮಗಳು ಮುಳುಗಡೆಯಾಗಿವೆ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ