AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Flood: ಅಸ್ಸಾಂನಲ್ಲಿ ನೋಡನೋಡುತ್ತಿದ್ದಂತೆ ಪ್ರವಾಹದ ನೀರಿನಲ್ಲಿ ಕುಸಿದು ಬಿದ್ದ ಪೊಲೀಸ್ ಸ್ಟೇಷನ್; ವೈರಲ್ ಆಯ್ತು ವಿಡಿಯೋ

ಅಸ್ಸಾಂನಲ್ಲಿ ಪ್ರವಾಹದ ನೀರಿನಲ್ಲಿ ಅರ್ಧ ಮುಳುಗಿದ್ದ ಪೊಲೀಸ್ ಠಾಣೆ ಶಿಥಿಲಗೊಂಡು ಕುಸಿದುಬಿದ್ದಿದೆ. ನಲ್ಬರಿ ಜಿಲ್ಲೆಯ ಭಂಗ್ನಮರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Assam Flood: ಅಸ್ಸಾಂನಲ್ಲಿ ನೋಡನೋಡುತ್ತಿದ್ದಂತೆ ಪ್ರವಾಹದ ನೀರಿನಲ್ಲಿ ಕುಸಿದು ಬಿದ್ದ ಪೊಲೀಸ್ ಸ್ಟೇಷನ್; ವೈರಲ್ ಆಯ್ತು ವಿಡಿಯೋ
ಅಸ್ಸಾಂ ಪ್ರವಾಹದಲ್ಲಿ ಕುಸಿದು ಬಿದ್ದ ಪೊಲೀಸ್ ಸ್ಟೇಷನ್Image Credit source: Money Control
TV9 Web
| Edited By: |

Updated on: Jun 29, 2022 | 10:07 AM

Share

ಅಸ್ಸಾಂನಲ್ಲಿ ಈ ವರ್ಷದ ಮುಂಗಾರಿನ ಆರಂಭದಲ್ಲೇ ಭಾರೀ ಪ್ರವಾಹ (Assam Floods) ಉಂಟಾಗಿದೆ. ಪ್ರವಾಹ ಪೀಡಿತ ಅಸ್ಸಾಂನ ಭಯಾನಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಅಸ್ಸಾಂನಲ್ಲಿ ಎರಡು ಅಂತಸ್ತಿನ ಪೊಲೀಸ್ ಠಾಣೆಯ ಬೃಹತ್ ಕಟ್ಟಡ ಮುಳುಗಿ, ಪಕ್ಕದಲ್ಲಿ ಹರಿಯುವ ನದಿಯಲ್ಲಿ ಕುಸಿಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

ಅಸ್ಸಾಂನಲ್ಲಿ ಪ್ರವಾಹದ ನೀರಿನಲ್ಲಿ ಅರ್ಧ ಮುಳುಗಿದ್ದ ಪೊಲೀಸ್ ಠಾಣೆ ಶಿಥಿಲಗೊಂಡು ಕುಸಿದುಬಿದ್ದಿದೆ. ನಲ್ಬರಿ ಜಿಲ್ಲೆಯ ಭಂಗ್ನಮರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 1 ನಿಮಿಷದ ಈ ವಿಡಿಯೋದ ಅಂತ್ಯದ ವೇಳೆಗೆ ಕಟ್ಟಡದ ಅರ್ಧಕ್ಕಿಂತ ಹೆಚ್ಚು ಭಾಗವು ನೀರಿಗೆ ಅಪ್ಪಳಿಸಿದೆ. ನಲ್ಬರಿಯು ಅಸ್ಸಾಂನ ಅತಿ ಹೆಚ್ಚು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: Assam Flood: ಅಸ್ಸಾಂನಲ್ಲಿ ಪ್ರವಾಹದ ಮಟ್ಟ ಕೊಂಚ ಇಳಿಕೆ; 127 ಜನ ಸಾವು, ಸಂಕಷ್ಟದಲ್ಲಿ 22 ಲಕ್ಷ ಜನ

ಕಳೆದೆರಡು ದಿನಗಳಿಂದ ಅಸ್ಸಾಂ ರಾಜ್ಯದಲ್ಲಿ ಭೀಕರ ಪ್ರವಾಹದ ಪರಿಸ್ಥಿತಿ ಕೊಂಚ ಸುಧಾರಿಸಿದ್ದರೂ, 22 ಲಕ್ಷ ಜನರು ಇನ್ನೂ ಸಂತ್ರಸ್ತರಾಗಿದ್ದಾರೆ. ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಇದುವರೆಗೆ 126 ಜನರು ಮಳೆ ಸಂಬಂಧಿದ ಅನಾಹುತಗಳಿಂದ ಸಾವನ್ನಪ್ಪಿದ್ದಾರೆ. ಇಲ್ಲಿನ ಹಲವಾರು ಜಿಲ್ಲೆಗಳು ಇನ್ನೂ ಪ್ರವಾಹ ಅಥವಾ ಜಲಾವೃತವಾಗಿವೆ. ಪ್ರವಾಹದಿಂದ ಸ್ಥಳಾಂತರಗೊಂಡವರಿಗೆ ಮತ್ತು ಅದರಿಂದ ಸಿಲುಕಿಕೊಂಡವರಿಗೆ ಅಗತ್ಯ ನೆರವು, ಆಹಾರ, ಶುದ್ಧ ನೀರು ಮತ್ತು ಆಶ್ರಯವನ್ನು ಒದಗಿಸಲು ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.

ಪುನರ್ವಸತಿ ಮತ್ತು ಆರೈಕೆಗಾಗಿ ರಾಜ್ಯಾದ್ಯಂತ ನೂರಾರು ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ. ಬ್ರಹ್ಮಪುತ್ರಾ ನದಿ ಉಕ್ಕಿ ಹರಿಯುತ್ತಿದ್ದು, ಹಲವು ಗ್ರಾಮಗಳು ಮುಳುಗಡೆಯಾಗಿವೆ.

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್