AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Flood: ಅಸ್ಸಾಂನಲ್ಲಿ ನೋಡನೋಡುತ್ತಿದ್ದಂತೆ ಪ್ರವಾಹದ ನೀರಿನಲ್ಲಿ ಕುಸಿದು ಬಿದ್ದ ಪೊಲೀಸ್ ಸ್ಟೇಷನ್; ವೈರಲ್ ಆಯ್ತು ವಿಡಿಯೋ

ಅಸ್ಸಾಂನಲ್ಲಿ ಪ್ರವಾಹದ ನೀರಿನಲ್ಲಿ ಅರ್ಧ ಮುಳುಗಿದ್ದ ಪೊಲೀಸ್ ಠಾಣೆ ಶಿಥಿಲಗೊಂಡು ಕುಸಿದುಬಿದ್ದಿದೆ. ನಲ್ಬರಿ ಜಿಲ್ಲೆಯ ಭಂಗ್ನಮರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Assam Flood: ಅಸ್ಸಾಂನಲ್ಲಿ ನೋಡನೋಡುತ್ತಿದ್ದಂತೆ ಪ್ರವಾಹದ ನೀರಿನಲ್ಲಿ ಕುಸಿದು ಬಿದ್ದ ಪೊಲೀಸ್ ಸ್ಟೇಷನ್; ವೈರಲ್ ಆಯ್ತು ವಿಡಿಯೋ
ಅಸ್ಸಾಂ ಪ್ರವಾಹದಲ್ಲಿ ಕುಸಿದು ಬಿದ್ದ ಪೊಲೀಸ್ ಸ್ಟೇಷನ್Image Credit source: Money Control
TV9 Web
| Edited By: |

Updated on: Jun 29, 2022 | 10:07 AM

Share

ಅಸ್ಸಾಂನಲ್ಲಿ ಈ ವರ್ಷದ ಮುಂಗಾರಿನ ಆರಂಭದಲ್ಲೇ ಭಾರೀ ಪ್ರವಾಹ (Assam Floods) ಉಂಟಾಗಿದೆ. ಪ್ರವಾಹ ಪೀಡಿತ ಅಸ್ಸಾಂನ ಭಯಾನಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಅಸ್ಸಾಂನಲ್ಲಿ ಎರಡು ಅಂತಸ್ತಿನ ಪೊಲೀಸ್ ಠಾಣೆಯ ಬೃಹತ್ ಕಟ್ಟಡ ಮುಳುಗಿ, ಪಕ್ಕದಲ್ಲಿ ಹರಿಯುವ ನದಿಯಲ್ಲಿ ಕುಸಿಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

ಅಸ್ಸಾಂನಲ್ಲಿ ಪ್ರವಾಹದ ನೀರಿನಲ್ಲಿ ಅರ್ಧ ಮುಳುಗಿದ್ದ ಪೊಲೀಸ್ ಠಾಣೆ ಶಿಥಿಲಗೊಂಡು ಕುಸಿದುಬಿದ್ದಿದೆ. ನಲ್ಬರಿ ಜಿಲ್ಲೆಯ ಭಂಗ್ನಮರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 1 ನಿಮಿಷದ ಈ ವಿಡಿಯೋದ ಅಂತ್ಯದ ವೇಳೆಗೆ ಕಟ್ಟಡದ ಅರ್ಧಕ್ಕಿಂತ ಹೆಚ್ಚು ಭಾಗವು ನೀರಿಗೆ ಅಪ್ಪಳಿಸಿದೆ. ನಲ್ಬರಿಯು ಅಸ್ಸಾಂನ ಅತಿ ಹೆಚ್ಚು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: Assam Flood: ಅಸ್ಸಾಂನಲ್ಲಿ ಪ್ರವಾಹದ ಮಟ್ಟ ಕೊಂಚ ಇಳಿಕೆ; 127 ಜನ ಸಾವು, ಸಂಕಷ್ಟದಲ್ಲಿ 22 ಲಕ್ಷ ಜನ

ಕಳೆದೆರಡು ದಿನಗಳಿಂದ ಅಸ್ಸಾಂ ರಾಜ್ಯದಲ್ಲಿ ಭೀಕರ ಪ್ರವಾಹದ ಪರಿಸ್ಥಿತಿ ಕೊಂಚ ಸುಧಾರಿಸಿದ್ದರೂ, 22 ಲಕ್ಷ ಜನರು ಇನ್ನೂ ಸಂತ್ರಸ್ತರಾಗಿದ್ದಾರೆ. ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಇದುವರೆಗೆ 126 ಜನರು ಮಳೆ ಸಂಬಂಧಿದ ಅನಾಹುತಗಳಿಂದ ಸಾವನ್ನಪ್ಪಿದ್ದಾರೆ. ಇಲ್ಲಿನ ಹಲವಾರು ಜಿಲ್ಲೆಗಳು ಇನ್ನೂ ಪ್ರವಾಹ ಅಥವಾ ಜಲಾವೃತವಾಗಿವೆ. ಪ್ರವಾಹದಿಂದ ಸ್ಥಳಾಂತರಗೊಂಡವರಿಗೆ ಮತ್ತು ಅದರಿಂದ ಸಿಲುಕಿಕೊಂಡವರಿಗೆ ಅಗತ್ಯ ನೆರವು, ಆಹಾರ, ಶುದ್ಧ ನೀರು ಮತ್ತು ಆಶ್ರಯವನ್ನು ಒದಗಿಸಲು ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.

ಪುನರ್ವಸತಿ ಮತ್ತು ಆರೈಕೆಗಾಗಿ ರಾಜ್ಯಾದ್ಯಂತ ನೂರಾರು ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ. ಬ್ರಹ್ಮಪುತ್ರಾ ನದಿ ಉಕ್ಕಿ ಹರಿಯುತ್ತಿದ್ದು, ಹಲವು ಗ್ರಾಮಗಳು ಮುಳುಗಡೆಯಾಗಿವೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ