AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Flood: ಅಸ್ಸಾಂನಲ್ಲಿ ಪ್ರವಾಹದ ಮಟ್ಟ ಕೊಂಚ ಇಳಿಕೆ; 127 ಜನ ಸಾವು, ಸಂಕಷ್ಟದಲ್ಲಿ 22 ಲಕ್ಷ ಜನ

ಅಸ್ಸಾಂ ರಾಜ್ಯಾದ್ಯಂತ 74,706 ಹೆಕ್ಟೇರ್‌ನಲ್ಲಿ ಪ್ರವಾಹದ ನೀರು ಹರಿದು ಬೆಳೆ ಹಾನಿಯಾಗಿದೆ. ರಾಜ್ಯದಾದ್ಯಂತ 564 ಪರಿಹಾರ ಶಿಬಿರಗಳಲ್ಲಿ 2,17,413 ಮಂದಿ ವಾಸ್ತವ್ಯ ಹೂಡಿದ್ದಾರೆ.

Assam Flood: ಅಸ್ಸಾಂನಲ್ಲಿ ಪ್ರವಾಹದ ಮಟ್ಟ ಕೊಂಚ ಇಳಿಕೆ; 127 ಜನ ಸಾವು, ಸಂಕಷ್ಟದಲ್ಲಿ 22 ಲಕ್ಷ ಜನ
ಅಸ್ಸಾಂ ಪ್ರವಾಹ
TV9 Web
| Edited By: |

Updated on: Jun 27, 2022 | 3:22 PM

Share

ಅಸ್ಸಾಂನಲ್ಲಿ ಮಳೆಯ (Assam Rain) ಅಬ್ಬರ ಕೊಂಚ ಕಡಿಮೆಯಾಗಿದೆ. ಆದರೂ ಪ್ರವಾಹದ ನೀರಿನಿಂದ ಮುಳುಗಡೆಯಾದ ಊರುಗಳಲ್ಲಿ ಸಿಲುಕಿಕೊಂಡಿರುವ ಜನರು ಇನ್ನೂ ಪರದಾಡುತ್ತಿದ್ದಾರೆ. ನಿನ್ನೆ ಐವರು ಸಾವನ್ನಪ್ಪುವ ಮೂಲಕ ಅಸ್ಸಾಂ ಪ್ರವಾಹದಲ್ಲಿ (Assam Floods) ಮೃತಪಟ್ಟವರ ಸಂಖ್ಯೆ 127ಕ್ಕೆ ಏರಿಕೆಯಾಗಿದೆ. ಅಸ್ಸಾಂ ರಾಜ್ಯಾದ್ಯಂತ 74,706 ಹೆಕ್ಟೇರ್‌ನಲ್ಲಿ ಪ್ರವಾಹದ ನೀರು ಹರಿದು ಬೆಳೆ ಹಾನಿಯಾಗಿದೆ. ರಾಜ್ಯದಾದ್ಯಂತ 564 ಪರಿಹಾರ ಶಿಬಿರಗಳಲ್ಲಿ 2,17,413 ಮಂದಿ ವಾಸ್ತವ್ಯ ಹೂಡಿದ್ದಾರೆ.

ಅಸ್ಸಾಂನ ಬಾರ್ಪೇಟಾ, ಕ್ಯಾಚಾರ್, ದರ್ರಾಂಗ್, ಕರೀಮ್‌ಗಂಜ್ ಮತ್ತು ಮೊರಿಗಾಂವ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದು, 22 ಲಕ್ಷಕ್ಕೂ ಹೆಚ್ಚು ಜನರು ಇನ್ನೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಸ್ಸಾಂ ರಾಜ್ಯದಲ್ಲಿ ಈ ವರ್ಷದ ಪ್ರವಾಹ ಮತ್ತು ಭೂಕುಸಿತದಲ್ಲಿ ಪ್ರಾಣ ಕಳೆದುಕೊಂಡವರ ಒಟ್ಟು ಸಂಖ್ಯೆ ಈಗ 127ಕ್ಕೆ ಏರಿದೆ. ಈ ಪೈಕಿ 17ಕ್ಕೂ ಹೆಚ್ಚು ಜನರು ಭೂಕುಸಿತದಲ್ಲಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Assam Flood: ಅಸ್ಸಾಂ ಪ್ರವಾಹದಲ್ಲಿ ಸಾವಿನ ಸಂಖ್ಯೆ 108ಕ್ಕೆ ಏರಿಕೆ; ಸಿಲ್ಚಾರ್​ಗೆ ಹೆಲಿಕಾಪ್ಟರ್​ ಮೂಲಕ ಆಹಾರ, ನೀರಿನ ಪೂರೈಕೆ

ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಇತರ ರಾಜ್ಯ ಏಜೆನ್ಸಿಗಳು ಇನ್ನೂ ತಮ್ಮ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಮುಂದುವರೆಸುತ್ತಿವೆ. ಕ್ಯಾಚಾರ್ ಜಿಲ್ಲೆಯಲ್ಲಿ ಒಟ್ಟು 2,77,158 ಜನರು ಬಾಧಿತರಾಗಿದ್ದಾರೆ. ಸಿಲ್ಚಾರ್‌ನಲ್ಲಿ ಕನಿಷ್ಠ 96,972 ಜನರು ಇನ್ನೂ ಬಳಲುತ್ತಿದ್ದಾರೆ. ಸಿಲ್ಚಾರ್‌ನಲ್ಲಿ 25,223 ಜನ ಸೇರಿದಂತೆ ಜಿಲ್ಲೆಯ 230 ಪರಿಹಾರ ಶಿಬಿರಗಳಲ್ಲಿ 1.09 ಲಕ್ಷಕ್ಕೂ ಹೆಚ್ಚು ಜನರು ನೆಲೆಸಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ಸಿಲ್ಚಾರ್ ಪಟ್ಟಣಕ್ಕೆ ಭೇಟಿ ನೀಡಿ, ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಿದ್ದಾರೆ.

ಬಾರ್ಪೇಟಾ ಅತ್ಯಂತ ಹೆಚ್ಚು ಹಾನಿಗೊಳಗಾದ ಜಿಲ್ಲೆಯಾಗಿದ್ದು, ಸುಮಾರು ಏಳು ಲಕ್ಷ ಜನರು ಸಂಕಷ್ಟದಲ್ಲಿದ್ದಾರೆ. ನಾಗಾವ್ (5.13 ಲಕ್ಷ ಜನರು) ಮತ್ತು ಕ್ಯಾಚಾರ್ (2.77 ಲಕ್ಷಕ್ಕೂ ಹೆಚ್ಚು ಜನರು)ನಲ್ಲಿ ಸಿಲುಕಿದ್ದಾರೆ. ಬಜಾಲಿ, ಬಕ್ಸಾ, ಬರ್ಪೇಟಾ, ಬಿಸ್ವನಾಥ್, ಕ್ಯಾಚಾರ್, ಚಿರಾಂಗ್, ದರ್ರಾಂಗ್, ಧೇಮಾಜಿ, ಧುಬ್ರಿ, ದಿಬ್ರುಗಢ್, ದಿಮಾ ಹಸಾವೊ, ಗೋಲ್‌ಪಾರಾ, ಗೋಲಾಘಾಟ್, ಹೈಲಕಂಡಿ, ಹೊಜೈ, ಕಾಮ್ರೂಪ್, ಕಾಮ್ರೂಪ್ ಮೆಟ್ರೋಪಾಲಿಟನ್, ಕರ್ಬಿ ಆಂಗ್ಲಾಂಗ್ ವೆಸ್ಟ್, ಕರೀಂಗಂಜ್, ಲಾಖ್‌ಪುರ್, ಕರೀಂಗಂಜ್ ಪ್ರವಾಹದಿಂದ ಹಾನಿಗೊಳಗಾದ ಜಿಲ್ಲೆಗಳು.

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು